AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮನೆಯೊಂದರಲ್ಲಿ 10 ಬಗೆಯ ಹಾವುಗಳ ಸಂಗ್ರಹಣೆ, ಓರ್ವ ಅರೆಸ್ಟ್

ಮೈಸೂರಿನ ರಾಜೀವ್‌ನಗರದ ಮನೆಯಲ್ಲಿ ಅಕ್ರಮವಾಗಿ ಹಾವುಗಳನ್ನು ಇಟ್ಟುಕೊಂಡಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಆರೋಪಿ ಬಳಿ ಇದ್ದ 10 ಬಗೆಯ ಹಾವುಗಳು ಸೇರಿದಂತೆ ಹಾವಿನ ವಿಷವನ್ನು ತೆಗೆಯುವ ಯಂತ್ರವನ್ನು ಕೂಡ ವಶಕ್ಕೆ ಪಡೆದು, ಆರೋಪಿ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಮೈಸೂರು: ಮನೆಯೊಂದರಲ್ಲಿ 10 ಬಗೆಯ ಹಾವುಗಳ ಸಂಗ್ರಹಣೆ, ಓರ್ವ ಅರೆಸ್ಟ್
ಆರೋಪಿ ಅರೆಸ್ಟ್
ರಾಮ್​, ಮೈಸೂರು
| Edited By: |

Updated on: Sep 27, 2023 | 7:22 AM

Share

ಮೈಸೂರು, ಸೆ.27: ಮನೆಗಳಲ್ಲಿ ಬೆಕ್ಕು, ನಾಯಿ, ಹಸು ಸೇರಿದಂತೆ ಇನ್ನಿತರ ಪ್ರಾಣಿಗಳನ್ನು ಸಾಕುವುದು ಸರ್ವೇ ಸಾಮಾನ್ಯ. ಆದರೆ, ಇಲೊಬ್ಬ ಆಸಾಮಿ ಮನೆಯಲ್ಲಿ ಅಕ್ರಮವಾಗಿ ಅಪರೂಪದ ಹಾವು (Snake)ಗಳನ್ನು ಸಂಗ್ರಹಿಸಿ, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಹೌದು, ಮೈಸೂರು(Mysore) ಸಿಐಡಿ ಅರಣ್ಯ ಸಂಚಾರಿ ದಳ ಸಿಬ್ಬಂದಿಯವರು ಖಚಿತ ಮಾಹಿತಿ ಮೇರೆಗೆ ಆರೋಪಿ ಸಂದೀಪ್ ಅಲಿಯಾಸ್ ದೀಪು ಎಂಬಾತನ ಮನೆಗೆ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಹಾವುಗಳನ್ನು ರಕ್ಷಣೆ ಮಾಡಿ, ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

10 ಬಗೆಯ ಹಾವು ಸಂಗ್ರಹಣೆ

ಇನ್ನು ಆರೋಪಿ ಸಂದೀಪ್ ಮೈಸೂರಿನ ರಾಜೀವ್‌ನಗರದ ತನ್ನ ಮನೆಯಲ್ಲಿ ಅಕ್ರಮವಾಗಿ ಹಾವುಗಳನ್ನು ಇಟ್ಟುಕೊಂಡಿದ್ದ. ಇದೀಗ ಆತನನ್ನು ಬಂಧಿಸಲಾಗಿದ್ದು, ಆರೋಪಿ ಬಳಿ ಇದ್ದ 4 ನಾಗರಹಾವು, 4 ಮಣ್ಣುಮುಕ್ಕ ಹಾವು, 2 ಆಭರಣದ ಹಾವು, 2ಕಟ್ಟಾವು, 1 ತೋಳದ ಹಾವು, 1 ಪಚ್ಚೆ ಹಾವು, 2 ಗರಗಸ ಮಂಡಲ ಹಾವು, 2 ಕೇರೆ ಹಾವು, 1 ನೀರು ಹಾವು, 4 ಪುನುಗು ಬೆಕ್ಕು ಸೇರಿ ಆತನ ಬಳಿಯಿದ್ದ ಹಾವಿನ ವಿಷವನ್ನು ತೆಗೆಯುವ ಯಂತ್ರವನ್ನು ಕೂಡ ವಶಕ್ಕೆ ಪಡೆದು, ಆರೋಪಿ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಹಾವು ತಿನ್ನಲು ಬಾತ್ ರೂಮಿಗೆ ನುಗ್ಗಿದ ಮತ್ತೊಂದು ಬೃಹತ್​​ ನಾಗ, ಎಷ್ಟು ದೊಡ್ಡದು ಅಂದರೆ… ವಿಡಿಯೋ ನೋಡಿ ಬಿಡಿ

ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ‌ ನಡೆದಿದೆ. ಕೋಟಬಂಡೆ ಗ್ರಾಮದ ಈಶ್ವರಪ್ಪ(36), ನಾಗರಾಜು(42) ಮೃತ ರ್ದುದೈವಿಗಳು. ಇನ್ನು ಓರ್ವನಿಗೆ ಗಂಭೀರ ‌ ಗಾಯವಾಗಿದ್ದು, ಗೌರಸಂದ್ರ ಮಾರಮ್ಮ ಜಾತ್ರೆ ಮುಗಿಸಿ ಹಿಂದಿರುಗುವಾಗ ಈ ದುರ್ಘಟನೆ ನಡೆದಿದೆ. ಮೃತದೇಹಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ಅರಸೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?