AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮನೆಯೊಂದರಲ್ಲಿ 10 ಬಗೆಯ ಹಾವುಗಳ ಸಂಗ್ರಹಣೆ, ಓರ್ವ ಅರೆಸ್ಟ್

ಮೈಸೂರಿನ ರಾಜೀವ್‌ನಗರದ ಮನೆಯಲ್ಲಿ ಅಕ್ರಮವಾಗಿ ಹಾವುಗಳನ್ನು ಇಟ್ಟುಕೊಂಡಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಆರೋಪಿ ಬಳಿ ಇದ್ದ 10 ಬಗೆಯ ಹಾವುಗಳು ಸೇರಿದಂತೆ ಹಾವಿನ ವಿಷವನ್ನು ತೆಗೆಯುವ ಯಂತ್ರವನ್ನು ಕೂಡ ವಶಕ್ಕೆ ಪಡೆದು, ಆರೋಪಿ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಮೈಸೂರು: ಮನೆಯೊಂದರಲ್ಲಿ 10 ಬಗೆಯ ಹಾವುಗಳ ಸಂಗ್ರಹಣೆ, ಓರ್ವ ಅರೆಸ್ಟ್
ಆರೋಪಿ ಅರೆಸ್ಟ್
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 27, 2023 | 7:22 AM

ಮೈಸೂರು, ಸೆ.27: ಮನೆಗಳಲ್ಲಿ ಬೆಕ್ಕು, ನಾಯಿ, ಹಸು ಸೇರಿದಂತೆ ಇನ್ನಿತರ ಪ್ರಾಣಿಗಳನ್ನು ಸಾಕುವುದು ಸರ್ವೇ ಸಾಮಾನ್ಯ. ಆದರೆ, ಇಲೊಬ್ಬ ಆಸಾಮಿ ಮನೆಯಲ್ಲಿ ಅಕ್ರಮವಾಗಿ ಅಪರೂಪದ ಹಾವು (Snake)ಗಳನ್ನು ಸಂಗ್ರಹಿಸಿ, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಹೌದು, ಮೈಸೂರು(Mysore) ಸಿಐಡಿ ಅರಣ್ಯ ಸಂಚಾರಿ ದಳ ಸಿಬ್ಬಂದಿಯವರು ಖಚಿತ ಮಾಹಿತಿ ಮೇರೆಗೆ ಆರೋಪಿ ಸಂದೀಪ್ ಅಲಿಯಾಸ್ ದೀಪು ಎಂಬಾತನ ಮನೆಗೆ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಹಾವುಗಳನ್ನು ರಕ್ಷಣೆ ಮಾಡಿ, ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

10 ಬಗೆಯ ಹಾವು ಸಂಗ್ರಹಣೆ

ಇನ್ನು ಆರೋಪಿ ಸಂದೀಪ್ ಮೈಸೂರಿನ ರಾಜೀವ್‌ನಗರದ ತನ್ನ ಮನೆಯಲ್ಲಿ ಅಕ್ರಮವಾಗಿ ಹಾವುಗಳನ್ನು ಇಟ್ಟುಕೊಂಡಿದ್ದ. ಇದೀಗ ಆತನನ್ನು ಬಂಧಿಸಲಾಗಿದ್ದು, ಆರೋಪಿ ಬಳಿ ಇದ್ದ 4 ನಾಗರಹಾವು, 4 ಮಣ್ಣುಮುಕ್ಕ ಹಾವು, 2 ಆಭರಣದ ಹಾವು, 2ಕಟ್ಟಾವು, 1 ತೋಳದ ಹಾವು, 1 ಪಚ್ಚೆ ಹಾವು, 2 ಗರಗಸ ಮಂಡಲ ಹಾವು, 2 ಕೇರೆ ಹಾವು, 1 ನೀರು ಹಾವು, 4 ಪುನುಗು ಬೆಕ್ಕು ಸೇರಿ ಆತನ ಬಳಿಯಿದ್ದ ಹಾವಿನ ವಿಷವನ್ನು ತೆಗೆಯುವ ಯಂತ್ರವನ್ನು ಕೂಡ ವಶಕ್ಕೆ ಪಡೆದು, ಆರೋಪಿ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಹಾವು ತಿನ್ನಲು ಬಾತ್ ರೂಮಿಗೆ ನುಗ್ಗಿದ ಮತ್ತೊಂದು ಬೃಹತ್​​ ನಾಗ, ಎಷ್ಟು ದೊಡ್ಡದು ಅಂದರೆ… ವಿಡಿಯೋ ನೋಡಿ ಬಿಡಿ

ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ‌ ನಡೆದಿದೆ. ಕೋಟಬಂಡೆ ಗ್ರಾಮದ ಈಶ್ವರಪ್ಪ(36), ನಾಗರಾಜು(42) ಮೃತ ರ್ದುದೈವಿಗಳು. ಇನ್ನು ಓರ್ವನಿಗೆ ಗಂಭೀರ ‌ ಗಾಯವಾಗಿದ್ದು, ಗೌರಸಂದ್ರ ಮಾರಮ್ಮ ಜಾತ್ರೆ ಮುಗಿಸಿ ಹಿಂದಿರುಗುವಾಗ ಈ ದುರ್ಘಟನೆ ನಡೆದಿದೆ. ಮೃತದೇಹಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ಅರಸೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ