AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​​​​ ಸ್ನೇಹಿತನ ಕೊಲೆ ಪ್ರಕರಣ: ಮೂವರು ಆರೋಪಿಗಳು ಅಂದರ್

ಅತಿಕ್ರಮವಾಗಿ ಮಹಿಳಾ ವಸತಿ ನಿಲಯಕ್ಕೆ ಪ್ರವೇಶಿಸಿದ್ದ ಮೂವರು ಯುವಕರನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ನಡೆದಿದೆ.

Mysore News: ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​​​​ ಸ್ನೇಹಿತನ ಕೊಲೆ ಪ್ರಕರಣ: ಮೂವರು ಆರೋಪಿಗಳು ಅಂದರ್
ಬಂಧಿತ ಆರೋಪಿಗಳು
TV9 Web
| Edited By: |

Updated on: Jul 20, 2022 | 7:14 AM

Share

ಮೈಸೂರು: ಸೋಶಿಯಲ್ ಮೀಡಿಯಾದಲ್ಲಿ (Social Media) ಕೆಟ್ಟದಾಗಿ ಕಮೆಂಟ್ (Comment) ಸ್ನೇಹಿತನ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಣಸೂರು ಪಟ್ಟಣ ಪೊಲೀಸರ ಕಾರ್ಯಾಚರಣೆಯಿಂದ ನಿತಿನ್ ಅಲಿಯಾಸ್ ವಠಾರ (23) ಮನೋಜ್ ಕುಮಾರ್ ಅಲಿಯಾಸ್ ಮೋಟು (24) ಪೋತರಾಜ್ (25) ಬಂಧಿತ ಆರೋಪಿಗಳು. ಬೀರೇಶ್​ ಕೊಲೆಯಾಗಿದ್ದ ದುರ್ದೈವಿ. ತನ್ನ ಹೆಂಡತಿಯ ಬಗ್ಗೆ ಬೀರೇಶ್ ಇನ್ಸ್ಟಾಗ್ರಾಮ್​​ನಲ್ಲಿ ಕೆಟ್ಟದಾಗಿ ಕಾಮೆಂಟ್ಸ್ ಮಾಡಿರುವ ಆರೋಪ ಮಾಡಲಾಗಿದೆ. ಹಾಡುಹಗಲೇ ಚಾಕುವಿನಿಂದ ಚುಚ್ಚಿ ನಿತಿನ್ ಕೊಲೆ ಮಾಡಿದ್ದ. ಬೈಕಿನಲ್ಲಿ ಮಾತನಾಡಿಸುವ ನೆಪದಲ್ಲಿ ಬಸ್ ನಿಲ್ದಾಣದಿಂದ ಕರೆದುಕೊಂಡು ಹೋಗಿ ಕೊಲೆ ಮಾಡಲಾಗಿದೆ. ದ್ವಿಚಕ್ರ ವಾಹನದ ಮಧ್ಯ ಕೂರಿಸಿಕೊಂಡು ಕೊಲೆ ಮಾಡಿದ್ದು, ಚಾಕುವಿನಿಂದ ಬೀರೇಶ್​ನ ಭುಜ, ಕುತ್ತಿಗೆಗೆ ಪಾತಕಿಗಳು ಬಲವಾಗಿ ಚುಚ್ಚಿದ್ದರು. ಬೀರೇಶ್‌ನನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೀರೇಶ್​ ಸಾವನ್ನಪ್ಪಿದ್ದ. ಈ ಸಂಬಂಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: Sakshi Agarwal Birthday: ಸ್ಯಾಂಡಲ್​ವುಡ್​ To ಹಾಲಿವುಡ್​: ಬರ್ತ್​ಡೇ ಗರ್ಲ್ ಸಾಕ್ಷಿ ಅಗರ್​ವಾಲ್​ ಸಿನಿ ಜರ್ನಿ

ಆಸ್ತಿ ಆಸೆಗಾಗಿ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ಅರೆಸ್ಟ್​:

ಬೆಂಗಳೂರು: ಆಸ್ತಿ ಆಸೆಗಾಗಿ ತಮ್ಮನನ್ನೇ ಕೊಲೆ ಮಾಡಿದ ಅಣ್ಣನನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಸತೀಶ್ ಬಂಧಿತ ಆರೋಪಿ. ವಿನಯ್ ಕೊಲೆಯಾದ ಯುವಕ. ಚಾಕುವಿನಿಂದ ಚುಚ್ಚಿ ಬಹುಮಾಡಿ ಕಟ್ಟಡದಿಂದ ಎಸೆದು ಹೋಗಿರುವ ಆರೋಪಿ ಸತೀಶ್, ಕಾಮಾಕ್ಷಿಪಾಳ್ಯದ ಕಾವೇರಿಪುರಂನಲ್ಲಿ ಘಟನೆ ನಡೆದಿತ್ತು. ಸಹೋದರರ ನಡುವೆ ಆಸ್ತಿ ವಿಚಾರಕ್ಕೆ ಜಗಳವಾಗಿ ಕೊಲೆಯಾಗಿರುವ ಶಂಕೆಯಾಗಿತ್ತು. ಘಟನೆ ಸಂಬಂಧ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದ್ದು, ಆರೋಪಿ ಸತೀಶ್ ನನ್ನ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಘಟನೆ ನಡೆದ ಸ್ಥಳದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರಿಂದ ಮಹಜರು ಮಾಡಲಾಗಿದೆ.

ಅಪರಿಚಿತ ವಾಹನ ಡಿಕ್ಕಿಯಾಗಿ ಕರಡಿ ಸಾವು:

ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ಕರಡಿಯೊಂದು ಮೃತಪಟ್ಟಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ದೇವಸಮುದ್ರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ನಡೆದಿದೆ. ಅಪಘಾತದಲ್ಲಿ ಸುಮಾರು ನಾಲ್ಕು ವರ್ಷದ ಗಂಡು ಕರಡಿ ಮೃತಪಟ್ಟಿದೆ. ಅಪಘಾತದ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಇನ್ನು ಈ ಕುರಿತು ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತಿಕ್ರಮವಾಗಿ ಮಹಿಳಾ ವಸತಿ ನಿಲಯಕ್ಕೆ ಪ್ರವೇಶಿಸಿದ್ದ ಯುವಕರ ಬಂಧನ:

ಹಾವೇರಿ: ಅತಿಕ್ರಮವಾಗಿ ಮಹಿಳಾ ವಸತಿ ನಿಲಯಕ್ಕೆ ಪ್ರವೇಶಿಸಿದ್ದ ಮೂವರು ಯುವಕರನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ನಡೆದಿದೆ. ಶ್ರೀರಾಮನಗರದಲ್ಲಿರೋ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ನುಗ್ಗಿದ್ದ ಮಾರುತಿ ದೇವರಗುಡ್ಡ, ನಾಗರಾಜ ಬೆನ್ನೂರು, ಮಾಲತೇಶ ವಾಲ್ಮೀಕಿ ಪೊಲೀಸರ ಅತಿಥಿಯಾಗಿದ್ದಾರೆ. ಹಾಸ್ಟೆಲ್ ವಾರ್ಡನ್ ಶಶಿರೇಖಾ ಎಂಬುವರ ದೂರಿನ ಆಧಾರದ ಮೇರೆಗೆ ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ಜೈಲಿಗಟ್ಟಿದ್ದಾರೆ. ಈ ಕುರಿತು ರಾಣೆಬೆನ್ನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ