‘ಫ್ರೀ ಕಾಶ್ಮೀರ’ದ ನಳಿನಿಗೆ ಸಿಕ್ತು ನಿರೀಕ್ಷಣಾ ಜಾಮೀನು

ಮೈಸೂರು: ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಮಾಡಿದ್ದ ನಳಿನಿ ಮರಿದೇವಯ್ಯಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಮೈಸೂರಿನ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನಿಂದ ಬೇಲ್ ಲಭಿಸಿದೆ. ಈ ಹಿಂದೆ ಮಧ್ಯಂತರ ಜಾಮೀನು ಪಡೆದಿದ್ದ ನಳಿನಿ ನಂತರ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ನಿರ್ಧಾರ ಕೈಗೊಂಡಿತ್ತು. ಕೆಲ ವಕೀಲರು ಬೆಂಗಳೂರಿನಿಂದ ಬಂದು ನಳಿನಿ ಪರ ವಕಾಲತ್ತು ವಹಿಸಿದ್ದರು. ಸದ್ಯ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ನಳಿನಿಗೆ […]

‘ಫ್ರೀ ಕಾಶ್ಮೀರ’ದ ನಳಿನಿಗೆ ಸಿಕ್ತು ನಿರೀಕ್ಷಣಾ ಜಾಮೀನು
ಸಾಧು ಶ್ರೀನಾಥ್​

Updated on: Jan 28, 2020 | 1:17 PM

ಮೈಸೂರು: ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಮಾಡಿದ್ದ ನಳಿನಿ ಮರಿದೇವಯ್ಯಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಮೈಸೂರಿನ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನಿಂದ ಬೇಲ್ ಲಭಿಸಿದೆ. ಈ ಹಿಂದೆ ಮಧ್ಯಂತರ ಜಾಮೀನು ಪಡೆದಿದ್ದ ನಳಿನಿ ನಂತರ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ನಿರ್ಧಾರ ಕೈಗೊಂಡಿತ್ತು. ಕೆಲ ವಕೀಲರು ಬೆಂಗಳೂರಿನಿಂದ ಬಂದು ನಳಿನಿ ಪರ ವಕಾಲತ್ತು ವಹಿಸಿದ್ದರು. ಸದ್ಯ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.

ನಳಿನಿಗೆ ನ್ಯಾಯಾಲಯ ನೀಡಿರುವ ಷರತ್ತುಗಳು:
-ತಲಾ 50 ಸಾವಿರ ರೂಪಾಯಿ ಮೌಲ್ಯದ ಬಾಂಡ್, ಒಬ್ಬರ ಶ್ಯೂರಿಟಿ.
-1 ತಿಂಗಳೊಳಗೆ ಪಾಸ್​ಪೋರ್ಟ್​ ಪೊಲೀಸರಿಗೆ ಒಪ್ಪಿಸಬೇಕು
-ಪ್ರಕರಣದ ತನಿಖೆಗೆ ಪೊಲೀಸರಿಗೆ ಸಹಕರಿಸುವಂತೆ ತಾಕೀತು ಮಾಡಲಾಗಿದೆ.
-ಬೆಳಗ್ಗೆ 10ರಿಂದ ಮಧ್ಯಾಹ್ನ 12ರೊಳಗೆ 15 ದಿನಗಳಿಗೊಮ್ಮೆ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು.
ಜಾಮೀನು ಸಿಕ್ಕಿದ್ದರಿಂದ ನಳಿನಿ, ಮರಿದೇವಯ್ಯ ನಿರಾಳರಾಗಿದ್ದಾರೆ. ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Published On - 8:22 pm, Mon, 27 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us