AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್​: ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಗಡಿಪಾರಿಗೆ ಮನವಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಮೈಸೂರಿನ ಆರ್​​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ನಾಯಕ ಎಂ. ಲಕ್ಷ್ಮಣ ದೂರು ನೀಡಿದ್ದಾರೆ.

ಮುಡಾ ಕೇಸ್​: ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಗಡಿಪಾರಿಗೆ ಮನವಿ
ಎಂ ಲಕ್ಷ್ಮಣ, ಸ್ನೇಹಮಯಿ ಕೃಷ್ಣ
ರಾಮ್​, ಮೈಸೂರು
| Edited By: |

Updated on:Aug 31, 2024 | 10:21 AM

Share

ಮೈಸೂರು, ಆಗಸ್ಟ್​ 31: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪಾತ್ರವೂ ಇದೆ ಅಂತ​ ರಾಜ್ಯಪಾಲರಿಗೆ ವಿರುದ್ಧ ದೂರು ನೀಡಿದ್ದ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರು (Mysore) ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್​ ನಾಯಕ ಎಂ.ಲಕ್ಷ್ಮಣ (M Laxman) ದೂರು ನೀಡಿದ್ದಾರೆ.

ಸ್ನೇಹಮಯಿ ಕೃಷ್ಣ ವಿರುದ್ಧ ರಾಜ್ಯದ ಹಲವೆಡೆ 17 ಕ್ರಿಮಿನಲ್ ಕೇಸ್​ಗಳು​ ದಾಖಲಾಗಿವೆ. ಆಸ್ತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡಿ ಭೂಮಿ ವಶಪಡಿಸಿಕೊಳ್ಳುವುದು, ನನ್ನನ್ನು ಸೇರಿ ನಗರದ ಗಣ್ಯರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾನೆ. ಆರ್​​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕ್ರಮ ಕೈಗೊಳ್ಳಿ. ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡಿ ಗೂಂಡಾ ಕಾಯ್ದೆ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು 2022-2023ನೇ ಸಾಲಿನಲ್ಲಿ ಒಟ್ಟು 110 ಅರ್ಜಿಗಳನ್ನು RTI ಮೂಲಕ ವಿವಿಧ ಇಲಾಖೆಗಳಿಗೆ ನೀಡಿ ದಾಖಲಾತಿಗಳನ್ನು ಪಡೆದು ಕೊಂಡಿದ್ದಾರೆ ಎಂದು ಪೊಲೀಸ್ ವರದಿ ಹೇಳುತ್ತಿದೆ. ಕೆಲ ಇಲಾಖೆಗಳ ನಕಲಿ ಸೀಲ್​ಗಳನ್ನು ಇಟ್ಟುಕೊಂಡು ಹಾಗೂ RTI ಮಾಹಿತಿ ಸೀಲ್‌ಗಳನ್ನು ನಕಲಿಯಾಗಿ ಮಾಡಿಸಿಕೊಂಡು ದಾಖಲೆಗಳನ್ನು ತಿರುಚಿ ಮತ್ತು ಕೆಲ ಅಕ್ಷರಗಳಿಗೆ whitenerನ್ನು ಹಚ್ಚಿರುವುದು ಕಂಡು ಬಂದಿದೆ.

ಇದನ್ನೂ ಓದಿ: ಮುಡಾ ಹಗರಣ ಆರೋಪಿತ ಅಧಿಕಾರಿ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ!

ಇವರ ವಿರುದ್ಧ ಸುಮಾರು 17 ಕ್ರಿಮಿನಲ್ ಪ್ರಕರಣಗಳು 10 ವರ್ಷದಿಂದ ಇದ್ದರೂ ಪೊಲೀಸ್ ಇಲಾಖೆ ಸೆಕ್ಯೂರಿಟಿ ಕೇಸ್​ನ್ನು 6 ತಿಂಗಳಿಗೊಮ್ಮೆ ಹಾಕಬೇಕಾಗಿರುವ ನಿಯಮವಿದ್ದರೂ ಹಾಕಿರುವುದಿಲ್ಲವೇಕೆ? ಇವರು ಒಬ್ಬ ರೌಡಿ ಶೀಟರ್ ಆಗಿದ್ದು ನಿರಂತರವಾಗಿ ನಗರದ ಗಣ್ಯರನ್ನು ಮತ್ತು ನನ್ನನ್ನು ಬ್ಲಾಕ್‌ಮೇಲ್ ಮಾಡುತ್ತಿರುವ ಚಟುವಟಿಕೆಯಲ್ಲಿ ಸಕ್ರಿಯನಾಗಿದ್ದರೂ ಇವರ ಮೇಲೆ ಸೆಕ್ಯೂರಿಟಿ ಕೇಸ್​ನ್ನು ಪೊಲೀಸರು ಹಾಕದಿರುವುದು ಎಷ್ಟರಮಟ್ಟಿಗೆ ಸರಿ? ಇವನು ಒಬ್ಬ Habitual Black mailer ಆಗಿದ್ದರೂ ಮತ್ತು Extortion ನಲ್ಲಿ ತೊಡಗಿಸಿಕೊಂಡಿದ್ದರೂ ಪೊಲೀಸ್ ಇಲಾಖೆ ಜಾಣ ಕುರುಡನ್ನು ಪ್ರದರ್ಶಿಸುತ್ತಿರುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:16 am, Sat, 31 August 24

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ