AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಗೆ ತಕ್ಕ ಸಹಪಾಠಿ, ಅದಕ್ಕೊಂದು ಪಕ್ಷ, ಇವರ ಮಧ್ಯೆ ಕೇಶವಕೃಪಾ ಒದ್ದಾಟ: ಸಿ.ಎಂ. ಇಬ್ರಾಹಿಂ

ರಮೇಶ್ ಜಾರಕಿಹೊಳಿ ಸಿಡಿ ಹಗರಣದ ಕುರಿತ ಪ್ರಶ್ನೆಗೆ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಬಿಜೆಪಿ, ಯಡಿಯೂರಪ್ಪ ಅವರನ್ನು ಗೇಲಿ ಮಾಡಿದ್ದಾರೆ. ಅಷ್ಟೇ ಅಲ್ಲ, ಇವರ ಮಧ್ಯೆ ಸಿಲುಕಿ ಕೇಶವ ಕೃಪಾ, ಬಸವ ಕೃಪಾ ಒದ್ದಾಡುತ್ತಿವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗೆ ತಕ್ಕ ಸಹಪಾಠಿ, ಅದಕ್ಕೊಂದು ಪಕ್ಷ, ಇವರ ಮಧ್ಯೆ ಕೇಶವಕೃಪಾ ಒದ್ದಾಟ: ಸಿ.ಎಂ. ಇಬ್ರಾಹಿಂ
ಸಿ.ಎಂ. ಇಬ್ರಾಹಿಂ
Srinivas Mata
| Edited By: |

Updated on: Mar 03, 2021 | 8:30 PM

Share

ಮೈಸೂರು: ‘ರಾಸಲೀಲೆ, ರಸಲೀಲೆ, ಕರ್ಮಕಾಂಡದ ಮಧ್ಯೆ ರಾಜಕಾರಣ ಇದೆ. ನತದೃಷ್ಟ ಮುಖ್ಯಮಂತ್ರಿ ರಾಜ್ಯಕ್ಕೆ ಸಿಕ್ಕಿರುವುದು ದುರ್ದೈವ. ಮುಖ್ಯಮಂತ್ರಿಗೆ ತಕ್ಕನಾದ ಸಹಪಾಠಿ ಮಂತ್ರಿ, ಅದಕ್ಕೊಂದು ಪಕ್ಷ. ಇವರ ಮಧ್ಯೆ ಸಿಲುಕಿ ಕೇಶವಕೃಪ, ಬಸವಕೃಪ ಒದ್ದಾಡುತ್ತಿವೆ. ಇದು ದಿಕ್ಕು ತಪ್ಪಿದ ರಾಜಕಾರಣ’ ಎಂದು ಕಾಂಗ್ರೆಸ್​ ಪಕ್ಷದ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಬುಧವಾರ ಮೈಸೂರಿನಲ್ಲಿ ವ್ಯಂಗ್ಯವಾಡಿದರು. ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಬಗ್ಗೆ ಅವರು ಲೇವಡಿ ಮಾಡಿದರು.

‘ಈ ಹಿಂದೆಲ್ಲ ಜನ ವೋಟು ಕೊಡಬೇಕಾದರೆ ಕುಲಕಸುಬು ನೋಡುತ್ತಿದ್ದರು. ಎತ್ತು ಕೊಳ್ಳಬೇಕಿದ್ದರೆ ತಳಿ ಯಾವುದೆಂದು ನೋಡುತ್ತೇವೆ. ರೇಸ್​ನಲ್ಲಿ ಕುದುರೆಗೆ ದುಡ್ಡು ಕಟ್ಟುವ ಮುನ್ನ ಅದರ ಅಪ್ಪ-ಅಮ್ಮ ಎಷ್ಟು ರೇಸ್ ಗೆದ್ದಿದೆ ಅಂತ ನೋಡುತ್ತೇವೆ. ಈಗಿನ ರೇಸ್​​ಗಳಲ್ಲಿ ಎಷ್ಟು ದುಡ್ಡು ತಂದಿವೆ ಎಂದು ನೋಡುತ್ತಾರೆ. ಈಗ ರಾಜಕಾರಣ ಹಾಳಾಗಿಹೋಗಿದೆ’ ಎಂದು ತಮ್ಮದೇ ಧಾಟಿಯ ರೂಪಕಗಳ ಮೂಲಕ ಇಬ್ರಾಹಿಂ ಅವರು ಪ್ರಸ್ತುತ ಸನ್ನಿವೇಶವನ್ನು ವ್ಯಾಖ್ಯಾನಿಸಿದರು.

ಪರಧನ, ಪರಸತಿ, ಪರದೇಶಿ ಮಧ್ಯೆ ರಾಜಕಾರಣ ಓಡಾಟ ಮಾಡುತ್ತಿದೆ. ಈಗಿನ ಸನ್ನಿವೇಶ ಸರಿಹೋಗುತ್ತದೆಂಬ ನಂಬಿಕೆ ಇಲ್ಲ. ದೊಡ್ಡ ಕ್ರಾಂತಿಯೇ ಆಗಬೇಕಿದೆ. ಹಾಗೆ ಕ್ರಾಂತಿ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಇಬ್ರಾಹಿಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕ- ಗೋಕಾಕ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ವಿಚಾರದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿ.ಎಂ. ಇಬ್ರಾಹಿಂ ಉತ್ತರಿಸಿದರು.

ಇದನ್ನೂ ಓದಿ: ರಾಜಕೀಯ ವಿಶ್ಲೇಷಣೆ | ರಮೇಶ್ ಜಾರಕಿಹೊಳಿ ಮುಂದಿರುವ ಮೂರು ಆಯ್ಕೆಗಳು

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!