AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಗೆ ತಕ್ಕ ಸಹಪಾಠಿ, ಅದಕ್ಕೊಂದು ಪಕ್ಷ, ಇವರ ಮಧ್ಯೆ ಕೇಶವಕೃಪಾ ಒದ್ದಾಟ: ಸಿ.ಎಂ. ಇಬ್ರಾಹಿಂ

ರಮೇಶ್ ಜಾರಕಿಹೊಳಿ ಸಿಡಿ ಹಗರಣದ ಕುರಿತ ಪ್ರಶ್ನೆಗೆ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಬಿಜೆಪಿ, ಯಡಿಯೂರಪ್ಪ ಅವರನ್ನು ಗೇಲಿ ಮಾಡಿದ್ದಾರೆ. ಅಷ್ಟೇ ಅಲ್ಲ, ಇವರ ಮಧ್ಯೆ ಸಿಲುಕಿ ಕೇಶವ ಕೃಪಾ, ಬಸವ ಕೃಪಾ ಒದ್ದಾಡುತ್ತಿವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗೆ ತಕ್ಕ ಸಹಪಾಠಿ, ಅದಕ್ಕೊಂದು ಪಕ್ಷ, ಇವರ ಮಧ್ಯೆ ಕೇಶವಕೃಪಾ ಒದ್ದಾಟ: ಸಿ.ಎಂ. ಇಬ್ರಾಹಿಂ
ಸಿ.ಎಂ. ಇಬ್ರಾಹಿಂ
Srinivas Mata
| Edited By: |

Updated on: Mar 03, 2021 | 8:30 PM

Share

ಮೈಸೂರು: ‘ರಾಸಲೀಲೆ, ರಸಲೀಲೆ, ಕರ್ಮಕಾಂಡದ ಮಧ್ಯೆ ರಾಜಕಾರಣ ಇದೆ. ನತದೃಷ್ಟ ಮುಖ್ಯಮಂತ್ರಿ ರಾಜ್ಯಕ್ಕೆ ಸಿಕ್ಕಿರುವುದು ದುರ್ದೈವ. ಮುಖ್ಯಮಂತ್ರಿಗೆ ತಕ್ಕನಾದ ಸಹಪಾಠಿ ಮಂತ್ರಿ, ಅದಕ್ಕೊಂದು ಪಕ್ಷ. ಇವರ ಮಧ್ಯೆ ಸಿಲುಕಿ ಕೇಶವಕೃಪ, ಬಸವಕೃಪ ಒದ್ದಾಡುತ್ತಿವೆ. ಇದು ದಿಕ್ಕು ತಪ್ಪಿದ ರಾಜಕಾರಣ’ ಎಂದು ಕಾಂಗ್ರೆಸ್​ ಪಕ್ಷದ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಬುಧವಾರ ಮೈಸೂರಿನಲ್ಲಿ ವ್ಯಂಗ್ಯವಾಡಿದರು. ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಬಗ್ಗೆ ಅವರು ಲೇವಡಿ ಮಾಡಿದರು.

‘ಈ ಹಿಂದೆಲ್ಲ ಜನ ವೋಟು ಕೊಡಬೇಕಾದರೆ ಕುಲಕಸುಬು ನೋಡುತ್ತಿದ್ದರು. ಎತ್ತು ಕೊಳ್ಳಬೇಕಿದ್ದರೆ ತಳಿ ಯಾವುದೆಂದು ನೋಡುತ್ತೇವೆ. ರೇಸ್​ನಲ್ಲಿ ಕುದುರೆಗೆ ದುಡ್ಡು ಕಟ್ಟುವ ಮುನ್ನ ಅದರ ಅಪ್ಪ-ಅಮ್ಮ ಎಷ್ಟು ರೇಸ್ ಗೆದ್ದಿದೆ ಅಂತ ನೋಡುತ್ತೇವೆ. ಈಗಿನ ರೇಸ್​​ಗಳಲ್ಲಿ ಎಷ್ಟು ದುಡ್ಡು ತಂದಿವೆ ಎಂದು ನೋಡುತ್ತಾರೆ. ಈಗ ರಾಜಕಾರಣ ಹಾಳಾಗಿಹೋಗಿದೆ’ ಎಂದು ತಮ್ಮದೇ ಧಾಟಿಯ ರೂಪಕಗಳ ಮೂಲಕ ಇಬ್ರಾಹಿಂ ಅವರು ಪ್ರಸ್ತುತ ಸನ್ನಿವೇಶವನ್ನು ವ್ಯಾಖ್ಯಾನಿಸಿದರು.

ಪರಧನ, ಪರಸತಿ, ಪರದೇಶಿ ಮಧ್ಯೆ ರಾಜಕಾರಣ ಓಡಾಟ ಮಾಡುತ್ತಿದೆ. ಈಗಿನ ಸನ್ನಿವೇಶ ಸರಿಹೋಗುತ್ತದೆಂಬ ನಂಬಿಕೆ ಇಲ್ಲ. ದೊಡ್ಡ ಕ್ರಾಂತಿಯೇ ಆಗಬೇಕಿದೆ. ಹಾಗೆ ಕ್ರಾಂತಿ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಇಬ್ರಾಹಿಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕ- ಗೋಕಾಕ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ವಿಚಾರದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿ.ಎಂ. ಇಬ್ರಾಹಿಂ ಉತ್ತರಿಸಿದರು.

ಇದನ್ನೂ ಓದಿ: ರಾಜಕೀಯ ವಿಶ್ಲೇಷಣೆ | ರಮೇಶ್ ಜಾರಕಿಹೊಳಿ ಮುಂದಿರುವ ಮೂರು ಆಯ್ಕೆಗಳು

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ