AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ತಡವಾಗಿ ಬಂದಿದ್ದಕ್ಕೆ ಆಸ್ಟ್ರಿಯ ರೈಲ್ವೆ ಇಲಾಖೆಯಿಂದ ಪರಿಹಾರ ಪಡೆದ ಮೈಸೂರಿನ ಗ್ರಾಹಕರ ಹಕ್ಕುಗಳ ಕಾರ್ಯಕರ್ತ

ಮೈಸೂರಿನ ಗ್ರಾಹಕರ ಹಕ್ಕುಗಳ ಕಾರ್ಯಕರ್ತ ಶೇಖರ್ ಎಸ್. ಅಯ್ಯರ್ ಅವರು ಪ್ರಯಾಣಿಸಬೇಕಿದ್ದ ರೈಲು ತಡವಾಗಿದ್ದು ಆಸ್ಟ್ರಿಯ ರಾಷ್ಟ್ರೀಯ ರೈಲ್ವೆ ಕಂಪನಿಯಿಂದ ಪರಿಹಾರವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ರೈಲು ತಡವಾಗಿ ಬಂದಿದ್ದಕ್ಕೆ ಆಸ್ಟ್ರಿಯ ರೈಲ್ವೆ ಇಲಾಖೆಯಿಂದ ಪರಿಹಾರ ಪಡೆದ ಮೈಸೂರಿನ ಗ್ರಾಹಕರ ಹಕ್ಕುಗಳ ಕಾರ್ಯಕರ್ತ
ಆಸ್ಟ್ರಿಯ ರೈಲು
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Mar 16, 2023 | 3:44 PM

Share

ಮೈಸೂರು: ಮೈಸೂರಿನ ಗ್ರಾಹಕರ ಹಕ್ಕುಗಳ ಕಾರ್ಯಕರ್ತ ಶೇಖರ್ ಎಸ್. ಅಯ್ಯರ್ ಅವರು ಇತ್ತೀಚೆಗೆ ಆಸ್ಟ್ರಿಯಗೆ ಭೇಟಿ ನೀಡಿದ್ದರು. ಈ ವೇಳೆ ಅವರು ತೆರಳಬೇಕಿದ್ದ ರೈಲು ತಡವಾಗಿ ಬಂದಿದ್ದು ಈ ಸಂಬಂಧ ಆಸ್ಟ್ರಿಯ ರಾಷ್ಟ್ರೀಯ ರೈಲ್ವೆ ಕಂಪನಿಯಿಂದ ಪರಿಹಾರವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ಗ್ರಹಕರ ಪರಿಷತ್ತಿನ (ಎಂಜಿಪಿ) ಸಂಚಾಲಕರೂ ಆಗಿರುವ ಅಯ್ಯರ್ ಅವರು ಮತ್ತು ಅವರ ಪತ್ನಿ ಡಿಸೆಂಬರ್ 13 ರಂದು ಆಸ್ಟ್ರಿಯದ ವಿಯೆನ್ನಾದಿಂದ ಇಟಲಿಯ ರೋಮ್‌ಗೆ ಪ್ರಯಾಣ ಬೆಳೆಸಲಿದ್ದ ರೈಲು ಎರಡು ಗಂಟೆಗಳ ಕಾಲ ತಡವಾಗಿತ್ತು. ರೈಲಿಗಾಗಿ ಕಾದು ಕುಳಿತ ಅಯ್ಯರ್ ರೈಲ್ವೆ ಇಲಾಖೆಯ ವಿರುದ್ಧ ಸಿಡಿದೆದಿದ್ದಾರೆ. ರೈಲು ತಡ ಮಾಡಿದಕ್ಕಾಗಿ, ಸಮಯ ಹರಣ ಮಾಡಿದಕ್ಕಾಗಿ ರೈಲ್ವೆ ಇಲಾಖೆಯ ಸೇವೆಯ ವಿರುದ್ಧ ಇಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ: Train Cancelled: ಮಾರ್ಚ್​ 16 ರಂದು ಹಲವು ರೈಲುಗಳ ಸಂಚಾರ ರದ್ದುಪಡಿಸಿದ ಭಾರತೀಯ ರೈಲ್ವೆ

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅಯ್ಯರ್ ಅವರು, ಆಸ್ಟ್ರಿಯ ರಾಷ್ಟ್ರೀಯ ರೈಲ್ವೆ ಕಂಪನಿಯಿಂದ ಪರಿಹಾರವನ್ನು ಪಡೆಯಲು ಮೂರು ಇಮೇಲ್​ಗಳು ಮತ್ತು ಒಂದು ತಿಂಗಳು ಕಾಯಬೇಕಾಯ್ತು. ಆದರೆ ಪರಿಹಾರ ಸಿಕ್ತು. ಜನರಿಗೆ ತಮ್ಮ ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಇರಬೇಕು. ತಮ್ಮ ಹಕ್ಕುಗಳನ್ನು ಬಳಸಿಕೊಳ್ಳಬೇಕು ಎಂದರು. ಇನ್ನು ಆಸ್ಟ್ರಿಯದ ರಾಷ್ಟ್ರೀಯ ರೈಲ್ವೆ ಕಂಪನಿ – OBB ಯಲ್ಲಿ ಮಧ್ಯಸ್ಥಿಕೆ ಪ್ರಾಧಿಕಾರದ ಬಗ್ಗೆ ವಿಚಾರಿಸಿರುವುದಾಗಿ ಹೇಳಿದರು. ಮಧ್ಯಸ್ಥಿಕೆ ಪ್ರಾಧಿಕಾರಕ್ಕೆ ಇಮೇಲ್ ದೂರನ್ನು ಸಲ್ಲಿಸಿ ಅವರು ಭಾರತಕ್ಕೆ ಮರಳಿದ ನಂತರ ಸುಮಾರು ಒಂದು ತಿಂಗಳ ಬಳಿಕ ಪರಿಹಾರದ ಮೊತ್ತವನ್ನು ಪಡೆದರು.

ಯುರೋಗಳಲ್ಲಿ ನೀಡಲಾದ ಪರಿಹಾರದ ಮೊತ್ತವು ಸುಮಾರು ₹ 11,000 ರೂ ಆಗಿದೆ. ಅಯ್ಯರ್ ಅವರು ಬುಧವಾರ ಮೈಸೂರಿನಲ್ಲಿ ಎಂಜಿಪಿ ಮತ್ತು ಬಹದ್ದೂರ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸೈನ್ಸಸ್ (ಬಿಐಎಂಎಸ್) ಆಯೋಜಿಸಿದ್ದ ವಿಶ್ವ ಗ್ರಾಹಕ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗಿಯಾಗಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:04 am, Thu, 16 March 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ