AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಪದವಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಮೈಸೂರು ವಿವಿ ವಿದ್ಯಾರ್ಥಿಗಳಿಂದ ಮುಂದುವರಿದ ಪ್ರತಿಭಟನೆ

ಪದವಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಕಳೆದ 3 ದಿನಗಳಿಂದ ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಬಳಿ ನೂರಾರು ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಇಂದು ಕೂಡ ಮುಂದುವರೆದಿದ್ದು, 15 ದಿನಗಳ ಮಟ್ಟಿಗಾದರೂ ಸಮಯ ಕೊಡಿ ಎನ್ನುತ್ತಿದ್ದಾರೆ.

Mysore News: ಪದವಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಮೈಸೂರು ವಿವಿ ವಿದ್ಯಾರ್ಥಿಗಳಿಂದ ಮುಂದುವರಿದ ಪ್ರತಿಭಟನೆ
ಪರೀಕ್ಷೆ ಮುಂದೂಡುವಂತೆ ಮೈಸೂರು ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ರಾಮ್​, ಮೈಸೂರು
| Edited By: |

Updated on: Jul 20, 2023 | 11:29 AM

Share

ಮೈಸೂರು, ಜು.20: ಪದವಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಬಳಿ ನೂರಾರು ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ(Protest) ಇಂದು ಕೂಡ ಮುಂದುವರೆದಿದೆ. ಸೋಮವಾರ ಜು.17 ರಂದು ಪ್ರತಿಭಟನೆ ನಡೆಸಿದ್ದ ಸ್ಟೂಡೆಂಟ್ಸ್, ಇಂದು ಕೂಡ​ ಮೈಸೂರಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಎಐಡಿಎಸ್ಒ(AIDSO) ಸಂಘಟನೆಯ ಸಂಯುಕ್ತಾಶ್ರಯದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸಮರ್ಪಕ ಪಾಠ ಮಾಡದೇ ಪರೀಕ್ಷೆ

ಹೌದು ವಿಧಾನಸಭೆ ಚುನಾವಣೆಗಾಗಿ ಕಾಲೇಜಿನ ಕಟ್ಟಡಗಳನ್ನು ಬಳಸಿಕೊಳ್ಳಲಾಗಿತ್ತು. ಹೀಗಾಗಿ ಪಾಠಗಳು ಸಮರ್ಪವಾಗಿ ನಡೆದಿಲ್ಲ. ಪದವಿ ಕಾಲೇಜುಗಳಲ್ಲಿ 4 ತಿಂಗಳು ಪಾಠ ಮಾಡಿ, ಪರೀಕ್ಷೆ ಮಾಡಬೇಕು. ಆದರೆ, ಕೇವಲ 2 ತಿಂಗಳು ಮಾತ್ರ ತರಗತಿಗಳು ನಡೆದಿವೆ. ಇದುವರೆಗೆ ಪಠ್ಯ ಕ್ರಮವೂ ಲಭ್ಯವಾಗಿಲ್ಲ. ಭಾನುವಾರ ಕೂಡ ಪರೀಕ್ಷೆಗಳನ್ನು ನಡೆಸುತ್ತಿರುವುದು ಸರಿಯಾದ ಕ್ರಮವಲ್ಲ. ಕೇವಲ ಒಂದು ವಾರದಲ್ಲಿ ಎಲ್ಲಾ ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಗ್ಲೋಬಲ್ ಸ್ಟೂಡೆಂಟ್ ಪ್ರೈಜ್ 2023 ರ ಟಾಪ್ 50 ಪಟ್ಟಿಯಲ್ಲಿ ಮಿಂಚಿದ ಐವರು ಭಾರತೀಯ ವಿದ್ಯಾರ್ಥಿಗಳು

15 ದಿನಗಳ ಮಟ್ಟಿಗಾದರೂ ಮುಂದೂಡಬೇಕೆಂದು ಆಗ್ರಹ

ಸರಿಯಾಗಿ ಪಾಠ ಮಾಡದೇ ದಿಡೀರ್​ ಪರೀಕ್ಷೆ ಇಟ್ಟಿರುವುದು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿದೆ. ಹೀಗಾಗಿ ಪದವಿ ಪರೀಕ್ಷೆಯ ಮುಂದೂಡಿಕೆ ಬಗ್ಗೆ ಇಂದೇ ಸುತ್ತೋಲೆ ಹೊರಡಿಸುವಂತೆ ವಿದ್ಯಾರ್ಥಿಗಳು ಮೈಸೂರು ವಿಶ್ವ ವಿದ್ಯಾಲಯಕ್ಕೆ ಒತ್ತಾಯಿಸಿದ್ದಾರೆ. 4 ತಿಂಗಳು ಕಾಲ ಮಾಡುವ ಪಾಠವನ್ನ 2 ತಿಂಗಳಲ್ಲಿ ಮಾಡಿದ್ದು, ಅದನ್ನೂ ಕೂಡ ಸಮರ್ಪಕವಾಗಿ ಮಾಡಿಲ್ಲ. ನಮಗೆ ತಿಂಗಳುಗಳ ಕಾಲ ಸಮಯ ಬೇಡ, ಕೇವಲ 15 ದಿನಗಳ ಮಟ್ಟಿಗಾದರೂ ಸಮಯ ಕೊಡಿ ಎನ್ನುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ