ಪ್ರತಾಪ್​ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕೋರ್ಟ್ ತಡೆ, ಕೆಪಿಸಿಸಿ ವಕ್ತಾರ ಲಕ್ಷ್ಮಣ್​ಗೆ ನೋಟಿಸ್

ಸಂಸದ ಪ್ರತಾಪ್​ ಸಿಂಹ ವಿರುದ್ಧ ಮಾಧ್ಯಮಗಳಲ್ಲಿ ಹೇಳಿಕೆ ನೀಡದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​ಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​​ ತಡೆಯಾಜ್ಞೆ ನೀಡಿದೆ. ಎಂ.ಲಕ್ಷ್ಮಣ್​ ಅವರು ಯಾವುದೇ ಮಾಧ್ಯಮಕ್ಕೆ ಹೇಳಿಕೆ ನೀಡುವಂತಿಲ್ಲ ಎಂದು ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಫೆ.13ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.

ಪ್ರತಾಪ್​ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕೋರ್ಟ್ ತಡೆ, ಕೆಪಿಸಿಸಿ ವಕ್ತಾರ ಲಕ್ಷ್ಮಣ್​ಗೆ ನೋಟಿಸ್
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಸಂಸದ ಪ್ರತಾಪ್​ ಸಿಂಹ
Edited By:

Updated on: Jan 31, 2024 | 3:55 PM

ಮೈಸೂರು, ಜನವರಿ 31: ಸಂಸದ ಪ್ರತಾಪಸಿಂಹ ವಿರುದ್ಧ ಪತ್ರಿಕಾಗೋಷ್ಠಿ ನಡೆಸದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ (M.Lakshman) ಗೆ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​​ ತಡೆಯಾಜ್ಞೆ ನೀಡಿದೆ. ನ್ಯಾಯಾಲಯಕ್ಕೆ ನೀಡಿದ್ದ ದೂರಿನನ್ವಯ ನೋಟಿಸ್ ಜಾರಿ ಮಾಡಿದ್ದು, ಫೆ.13ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಸಂಸದ ಪ್ರತಾಪ್​ ಸಿಂಹ ವಿರುದ್ಧ ಮಾಧ್ಯಮಗಳಲ್ಲಿ ಹೇಳಿಕೆ ನೀಡದಂತೆ ಕೋರ್ಟ್​ ಸೂಚನೆ ನೀಡಿದೆ. ಸಂಸದ ಪ್ರತಾಪಸಿಂಹ ಯಾವುದೇ ಒಂದು ವಿಚಾರವಾಗಿ ಪತ್ರಿಕಾಗೋಷ್ಠಿ ಮಾಡಿ ಮಾತನಾಡಿದ ಮರುದಿನವೇ ಎಂ.ಲಕ್ಷ್ಮಣ್ ಅವರು ಕೂಡ ಪತ್ರಿಕಾಗೋಷ್ಠಿ ಮಾಡಿ ಅವರ ಹೇಳಿಕೆಗಳಿಗೆ ವಾಗ್ದಾಳಿ ಮಾಡುತ್ತಿದ್ದರು. ಹೀಗಾಗಿಯೇ ಪ್ರತಾಪ್​ ಸಿಂಹ ಕೋರ್ಟ್ ಮೊರೆ ಆಗಿದ್ದಾರೆ.

ಸಂಸದ ಪ್ರತಾಪಸಿಂಹ ವಿರುದ್ಧ ಎಂ.ಲಕ್ಷ್ಮಣ್ ಅವರು ಹೇಳಿಕೆಗಳನ್ನು ನೀಡಿದ್ದಾರೆ. ಪ್ರತಾಪ್ ಸಿಂಹ ಅವರು ಇತ್ತೀಚೆಗೆ ತಮ್ಮ ಹೆಸರನ್ನು ಬದಲಾವಣೆ ಮಾಡಿಕೊಂಡಿದ್ದರು. ಅವರಿಗೆ ಸೋಲಿನ ಭೀತಿ ಕಾಡುತ್ತಿದೆ. ಅದಕ್ಕೆ ಇನ್ನೊಂದು ‘M’ ಸೇರಿಸಿಕೊಂಡಿದ್ದಾರೆ. ‘M’ ಅಂದರೆ mockery (ಅಪಹಾಸ್ಯ) ಪ್ರತಾಪ್ ಸಿಂಹ ಅಂತ ಹೇಳಬಹುದು ಎಂದು ಎಂ.ಲಕ್ಷ್ಮಣ್​ ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ಪಾರ್ಕ್​ನಲ್ಲಿ ಟಿಪ್ಪು ಬಾವುಟ ಹಾಕಿದ್ದಾರಲ್ಲ, ಒಪ್ಪಿಗೆ ಪಡೆದಿದ್ದಾರಾ? ಸಿದ್ದರಾಮಯ್ಯ, ಪರಮೇಶ್ವರ್​ಗೆ ಪ್ರತಾಪ್​ ಸಿಂಹ ಪ್ರಶ್ನೆ

ಲೋಕಸಭೆ ಚುನಾವಣೆಯಲ್ಲಿ ತಾನು ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಹೇಳಿದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ತಿರುಗೇಟು ನೀಡಿದ್ದ ಲಕ್ಷ್ಮಣ್, 2 ಲಕ್ಷ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಅದು ಉಲ್ಟಾ ಆಗುತ್ತದೆ. ಅವರು 2 ಲಕ್ಷ ಅಂತರದಲ್ಲಿ ಸೋಲುತ್ತಾರೆ ಎಂದು ವಾಗ್ದಾಳಿ ಮಾಡಿದ್ದರು.

ಮೈಸೂರಿಗೆ ಸಂಸದ ಪ್ರತಾಪ್​ ಸಿಂಹ ಅವರ ಕೊಡುಗೆ ಏನು? ಸಿಎಂ ಸಿದ್ದರಾಮಯ್ಯ ಅವರ ಸಾಧನೆ ಮತ್ತು ಪ್ರತಾಪ್​ ಸಿಂಹ ಸಾಧನೆ ಏನು ಎಂಬುವುದರ ಕುರಿತು ಚರ್ಚೆಯಾಗಲಿ. ಈ ಬಗ್ಗೆ ಸಂಸದರ ಕಚೇರಿ ಬಳಿ ಬಹಿರಂಗ ಚರ್ಚೆ ನಡೆಸಲಿ. ನಾವು ಸಿಎಂ ಸಿದ್ದರಾಮಯ್ಯ ಅವರ ಕೆಲಸಗಳ ದಾಖಲೆ ತರುತ್ತೇವೆ ಎಂದು ಸವಾಲು ಹಾಕಿದ್ದರು.

ಇದನ್ನೂ ಓದಿ: ಅಯೋಧ್ಯೆ ಬಾಲರಾಮನ ಮೂರ್ತಿ ಶಿಲೆಗೂ ದಂಡ: ಶ್ರೀನಿವಾಸ್ ಕಟ್ಟಿದ್ದ 80 ಸಾವಿರ ರೂ. ಬಿಜೆಪಿ ನೀಡಲಿದೆ- ಪ್ರತಾಪ್​ ಸಿಂಹ

ನಿಮ್ಮ ಸುಳ್ಳು, ನಿಮ್ಮ ಡೋಂಗಿತನ ಎಲ್ಲರಿಗೂ ಗೊತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಕಿಡಿಗೇಡಿಗಳನ್ನು ಗೆಲ್ಲಿಸಬೇಡಿ ಅಂತಾ ಕೈ ಮುಗಿದಿದ್ದಾರೆ. ಇದರಲ್ಲಿ ಏನು ತಪ್ಪಿದೆ? ಎಂದು ಪ್ರಶ್ನಿಸಿದ್ದರು.

ಇನ್ನು ಕೊಡಗು ಜಿಲ್ಲೆಗೆ ತಾವು ನೀಡಿದ ಭರವಸೆಗಳನ್ನು ಈಡೇರಿಸಲಾಗದ ಪ್ರತಾಪ್ ಸಿಂಹ ಅವರು ಸುಳ್ಳು ಹೇಳುವ ಮೂಲಕ ಪಲಾಯನವಾದ ಮಾಡಿದ್ದಾರೆ ಎಂದು ಎಂ.ಲಕ್ಷ್ಮಣ್ ಆರೋಪಿಸಿದ್ದರು. ಹೀಗೆ ಸಾಕಷ್ಟು ಪ್ರತಾಪ್ ಸಿಂಹ ವಿರುದ್ಧವಾಗಿ ಹೇಳಿಕೆಗಳನ್ನು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:54 pm, Wed, 31 January 24

ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us