AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಜಂಬೂಸವಾರಿಯಲ್ಲಿ ಭಾಗವಹಿಸಲು ಕೊವಿಡ್ ವರದಿ ಕಡ್ಡಾಯ; ನೆಗೆಟಿವ್ ಇದ್ದರೆ ಮಾತ್ರ ಅರಮನೆ ಆವರಣಕ್ಕೆ ಎಂಟ್ರಿ

Mysore Dasara 2021: ಮೈಸೂರು ಅರಮನೆ ಅವರಣದಲ್ಲಿ ನಡೆಯುವ ಜಂಬೂ ಸವಾರಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಕೊವಿಡ್ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮೈಸೂರು: ಜಂಬೂಸವಾರಿಯಲ್ಲಿ ಭಾಗವಹಿಸಲು ಕೊವಿಡ್ ವರದಿ ಕಡ್ಡಾಯ; ನೆಗೆಟಿವ್ ಇದ್ದರೆ ಮಾತ್ರ ಅರಮನೆ ಆವರಣಕ್ಕೆ ಎಂಟ್ರಿ
ಮೈಸೂರು ದಸರಾ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 13, 2021 | 11:01 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2021ಕ್ಕೆ ತಯಾರಿ ಜೋರಾಗಿ ನಡೆಯುತ್ತಿದೆ. ಈ ನಡುವೆ ಜಿಲ್ಲಾಡಳಿತವು ಕೊರೊನಾ ಮುನ್ನೆಚ್ಚರಿಕೆಗಳ ಕುರಿತು ಸೂಚನೆ ಹೊರಡಿಸಿದ್ದು, ಜಂಬೂಸವಾರಿಯಲ್ಲಿ ಭಾಗವಹಿಸುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿದೆ. ಕೊವಿಡ್ ಟೆಸ್ಟ್ ವರದಿ ನೆಗೆಟಿವ್ ಇದ್ದರೆ ಮಾತ್ರ ಅರಮನೆ ಆವರಣಕ್ಕೆ ಪ್ರವೇಶ ನೀಡಲಾಗುವುದು ಎಂದು ಜಿಲ್ಲಾಡಳಿತವು ಕಟ್ಟುನಿಟ್ಟಾಗಿ ತಿಳಿಸಿದೆ. ವರದಿ ಇಲ್ಲದಿದ್ದರೆ ಭಾಗವಹಿಸಲು ಅನುಮತಿ ನೀಡಲಾಗುವುದಿಲ್ಲ ಎಂದೂ ಅದು ಸ್ಪಷ್ಟಪಡಿಸಿದೆ. ಜಂಬೂಸವಾರಿಯಲ್ಲಿ ಭಾಗವಹಿಸುವ ಕಲಾವಿದರು, ಅಧಿಕಾರಿಗಳು, ಸಿಬ್ಬಂದಿ ವರ್ಗ, ಮಾಧ್ಯಮ ಪ್ರತಿನಿಧಿಗಳು ಹಾಗೂ ಆಹ್ವಾನಿತರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದೆ. ಅಕ್ಟೋಬರ್ 15ರಂದು ಜಂಬೂಸವಾರಿ ನಡೆಯಲಿದೆ.

ಜಂಬೂಸವಾರಿ ಮೆರವಣಿಗೆಗೆ ಅಂತಿಮ ಹಂತದ ರಿಹರ್ಸಲ್: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಅಂತಿಮ ಹಂತದ ರಿಹರ್ಸಲ್ ನಡೆಯಲಿದೆ. ಅರಮನೆಯ ಮುಂಭಾಗ ಅಂತಿಮ ಹಂತದ ರಿಹರ್ಸಲ್​ನಲ್ಲಿ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ದಸರಾ ಗಜಪಡೆ ಭಾಗಿಯಾಗಲಿದೆ. ಈ ವೇಳೆ ಅಶ್ವದಳ, ಸಶಸ್ತ್ರ ಮೀಸಲು ಪಡೆ, ಪೊಲೀಸ್ ಬ್ಯಾಂಡ್ ಕೂಡ ತಯಾರಿ ನಡೆಸಲಿವೆ.

ವಿಶೇಷ ವಿದ್ಯುತ್ ದೀಪಾಲಂಕಾರವನ್ನು 10 ದಿನ ವಿಸ್ತರಿಸಲು ಮನವಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ಹಾಕಲಾಗಿರುವ ವಿಶೇಷ ವಿದ್ಯುತ್ ದೀಪಾಲಂಕಾರವನ್ನು 10 ದಿನ ವಿಸ್ತರಿಸಲು ಮನವಿ ಮಾಡಲಾಗಿದೆ. ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟದಿಂದ, ಸಚಿವ ಎಸ್.ಟಿ.ಸೋಮಶೇಖರ್‌ಗೆ ಮನವಿ ಸಲ್ಲಿಸಲಾಗಿದೆ. ಅಕ್ಟೋಬರ್ 15ರವೆಗೆ ದೀಪಾಲಂಕಾರ ಇರಲಿದ್ದು, ಅದನ್ನು ಅಕಲ್ಟೋಬರ್ 25ರವರೆಗೆ ವಿಸ್ತರಿಸಲು ಮನವಿ ಸಲ್ಲಿಸಲಾಗಿದೆ. ಇದರಿಂದಾಗಿ ಪ್ರವಾಸೋದ್ಯಮ ಚೇತರಿಕೆ ಕಾಣಲಿದೆ. ಈ ನಿಟ್ಟಿನಲ್ಲಿ ಸಕಾರಾತ್ಮಕ ನಿರ್ಣಯ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿದೆ.

ಇದನ್ನೂ ಓದಿ:

ವಿಶ್ವವಿಖ್ಯಾತ ಮೈಸೂರು ದಸರಾ 2021: ಜಂಬೂಸವಾರಿಗೆ ದಿನಗಣನೆ, ಈ‌ ಬಾರಿ 6 ಸ್ತಬ್ಧಚಿತ್ರಗಳಿಗೆ ಅವಕಾಶ

ಅಮೃತ ಗ್ರಾಮ ಯೋಜನೆಗೆ ಧಾರವಾಡದ 17 ಗ್ರಾಮಗಳ ಆಯ್ಕೆ; ಹೈಟೆಕ್ ಆಗಲಿವೆ ಹಳ್ಳಿಗಳು

ಚಿಕ್ಕಮಗಳೂರು: ಜೀವನಕ್ಕೆ ಆಧಾರವಾಗಿದ್ದ ಬೆಳೆ ಕಣ್ಮರೆ; ಎಲೆಚುಕ್ಕೆ ರೋಗದಿಂದ ಕಂಗಾಲಾದ ಅಡಿಕೆ ಬೆಳೆಗಾರರು

Published On - 9:56 am, Wed, 13 October 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?