AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಹೆಚ್​ಡಿ ಕೋಟೆ ತಾಲೂಕಿನಲ್ಲಿ ಹುಲಿ ಚಿರತೆ ದಾಳಿಗೆ ಹಸು, ಕರು ಮೇಕೆಗಳು ಬಲಿ

ಮೈಸೂರು ಜಿಲ್ಲೆಯಲ್ಲಿ ಚಿರತೆ, ಹುಲಿ ಹಾವಳಿ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಹೆಚ್​ಡಿ ಕೋಟೆ ತಾಲೂಕಿನಲ್ಲಿ ಜನರು ನಿತ್ಯ ಆತಂಕದಲ್ಲೇ ಜೀವನ ಕಳೆಯುತ್ತಿದ್ದಾರೆ. ಈ ನಡುವೆ ತಾಲೂಕಿನ ಸುಣಕಲ್ ಮಂಟಿ ಗ್ರಾಮದಲ್ಲಿ ಚಿರತೆ ದಾಳಿಗೆ ಕರು, ಮೇಕೆಗಳು ಬಲಿಯಾಗಿದ್ದು, ಇತ್ತ ಇದೇ ತಾಲೂಕಿನ ಹೊಸ ಹೊಳಲು ಗ್ರಾಮದಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ದಾಳಿ ನಡೆಸಿದೆ.

ಮೈಸೂರು: ಹೆಚ್​ಡಿ ಕೋಟೆ ತಾಲೂಕಿನಲ್ಲಿ ಹುಲಿ ಚಿರತೆ ದಾಳಿಗೆ ಹಸು, ಕರು ಮೇಕೆಗಳು ಬಲಿ
ಮೈಸೂರಿನ ಹೆಚ್​ಡಿ ಕೋಟೆ ತಾಲೂಕಿನಲ್ಲಿ ಚಿರತೆ, ಹುಲಿ ಹಾವಳಿ (ಸಾಂದರ್ಭಿಕ ಚಿತ್ರ)Image Credit source: IANS
ದಿಲೀಪ್​, ಚೌಡಹಳ್ಳಿ
| Edited By: Rakesh Nayak Manchi|

Updated on: Sep 17, 2023 | 9:05 AM

Share

ಮೈಸೂರು, ಸೆ.17: ಜಿಲ್ಲೆಯಲ್ಲಿ ಚಿರತೆ, ಹುಲಿ ಹಾವಳಿ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಹೆಚ್​ಡಿ ಕೋಟೆ ತಾಲೂಕಿನಲ್ಲಿ (HD Kote) ಜನರು ನಿತ್ಯ ಆತಂಕದಲ್ಲೇ ಜೀವನ ಕಳೆಯುತ್ತಿದ್ದಾರೆ. ಈ ನಡುವೆ ತಾಲೂಕಿನ ಸುಣಕಲ್ ಮಂಟಿ ಗ್ರಾಮದಲ್ಲಿ ಚಿರತೆ ದಾಳಿಗೆ (Leopard Attack) ಕರು, ಮೇಕೆಗಳು ಬಲಿಯಾಗಿದ್ದು, ಇತ್ತ ಇದೇ ತಾಲೂಕಿನ ಹೊಸ ಹೊಳಲು ಗ್ರಾಮದಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ದಾಳಿ (Tiger Attack) ನಡೆದಿದೆ.

ಹೆಚ್​ಡಿ ಕೋಟೆ ತಾಲೂಕಿನ ನೇರಳೆ ಗಣೇಶನ ಗುಡಿ ಗ್ರಾಮ ಸುಣಕಲ್ ಮಂಟಿ ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗುತ್ತಿದೆ. ರೈತರಾದ ವೆಂಕಟಸ್ವಾಮಿ, ಚಿಕ್ಕಯ್ಯ ಮತ್ತು ಸಿದ್ದೇಗೌಡ ಅವರಿಗೆ ಸೇರಿದ ತಲಾ ಒಂದೊಂದು ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ರೈತ ನಾಗೇಗೌಡ ಅವರಿಗೆ ಸೇರಿದ ಕರು ಕೂಡ ಚಿರತೆ ದಾಳಿಗೆ ಬಲಿಯಾಗಿದೆ.

ಇದನ್ನೂ ಓದಿ: ದಾವಣಗೆರೆ: ಜನರ ನೆಮ್ಮದಿ ಹಾಳು ಮಾಡಿದ್ದ ‌ಚಿರತೆ ಕೊನೆಗೂ ಸೆರೆ

ಚಿರತೆ ದಾಳಿಯಿಂದ ಗ್ರಾಮದ ಜನರು ಭಯಬೀತರಾಗಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಸಿಬ್ಬಂದಿ ಗ್ರಾಮದ ಹೊರವಲಯದಲ್ಲಿ ಬೋನು ಇರಿಸಿ ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಸಂಜೆ ನಂತರ ಎಚ್ಚರಿಕೆಯಿಂದ ಓಡಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಹಸುಗಳ ಮೇಲೆ ಹುಲಿ ದಾಳಿ

ಹೆಚ್​ಡಿ ಕೋಟೆ ತಾಲೂಕಿನ ಹೊಸ ಹೊಳಲು ಗ್ರಾಮದ ಜನರು ಹುಲಿ ದಾಳಿಯ ಭೀತಿ ಎದುರಿಸುತ್ತಿದ್ದಾರೆ. ಎಚ್.ಎಸ್.ಲಿಂಗರಾಜು ಅವರಿಗೆ ಸೇರಿದ ಎರಡು ಹಸುಗಳು ಜಮೀನಿನಲ್ಲಿ ಮೇಯುತ್ತಿದ್ದವು. ಈ ವೇಳೆ ದಾಳಿ ನಡೆಸಿದ ಹುಲಿ ಒಂದು ಹಸುವನ್ನು ಕೊಂದು ಹಾಕಿದ್ದು, ಮತ್ತೊಂದು ಹಸು ಗಂಭೀರವಾಗಿ ಗಾಯಗೊಂಡಿದೆ.

ಹಸುಗಳನ್ನು ಲಿಂಗರಾಜು ಅವರ ಪುತ್ರ ವಿಕಾಸ್ ಮೇಯಿಸುತ್ತಿರುವಾಗ ಹುಲಿ ದಾಳಿ ನಡೆಸಿದೆ. ಸ್ಥಳಕ್ಕೆ ದಮ್ಮನಕಟ್ಟೆ ವಲಯ ಅರಣ್ಯಾಧಿಕಾರಿ ಭರತ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ