AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಗೃಹಿಣಿಗೆ ಮೆಸೆಜ್ ಮಾಡಿದ್ದಕ್ಕೆ ಹತ್ಯೆ, ಅಸಲಿಗೆ ಯುವಕನ ಹೆಣ ಬಿದ್ದಿದ್ದು ಯಾಕೆ ಗೊತ್ತಾ?

ಗೃಹಿಣಿಗೆ ಮೆಸೇಜ್ ಮಾಡಿದಕ್ಕೆ ಯುವಕನನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಪ್ರಕರಣದ ಅಸಲಿಯತ್ತು ಬೆಳಕಿಗೆ ಬಂದಿದೆ. ಮತ್ತೊಬ್ಬನ ಮೇಲಿನ ದ್ವೇಷ ತೀರಿಸಿಕೊಳ್ಳಲು ಸ್ನೇಹಿತನನ್ನು ಕೊಲೆ‌ ಮಾಡಿದ ಮಾಹಿತಿ ಪೊಲೀಸರಿಗೆ ತಿಳಿದುಬಂದಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ಮೈಸೂರು: ಗೃಹಿಣಿಗೆ ಮೆಸೆಜ್ ಮಾಡಿದ್ದಕ್ಕೆ ಹತ್ಯೆ, ಅಸಲಿಗೆ ಯುವಕನ ಹೆಣ ಬಿದ್ದಿದ್ದು ಯಾಕೆ ಗೊತ್ತಾ?
ಒಬ್ಬನ ಮೇಲಿನ ದ್ವೇಷಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ
ದಿಲೀಪ್​, ಚೌಡಹಳ್ಳಿ
| Edited By: Rakesh Nayak Manchi|

Updated on:Sep 02, 2023 | 9:55 AM

Share

ಮೈಸೂರು, ಸೆ.2: ಯುವಕನೊಬ್ಬನ ಕೊಲೆ ಪ್ರಕರಣ (Murder Case) ಸಂಬಂಧ ಆರೋಪಿಯನ್ನು ಬಂಧಿಸಿದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅದರಂತೆ, ಪ್ರಕರಣದ ಹಿಂದಿನ ಅಸಲಿಯತ್ತು ಬಹಿರಂಗವಾಗಿದೆ. ಹೆಂಡತಿಗೆ ಮೆಸೆಜ್ ಮಾಡಿದ ವಿಚಾರವಾಗಿ ಮಹಿಳೆಯ ಪತಿ ಮತ್ತು ಯುವಕನೊಬ್ಬನ ನಡುವೆ ಜಗಳ ನಡೆದಿತ್ತು. ಈ ವಿಚಾರವಾಗಿ ದ್ವೇಷ ಬೆಳೆಸಿದ ಮಹಿಳೆಯ ಪತಿ, ತನ್ನ ಆತ್ಮೀಯ ಸ್ನೇಹಿತನನ್ನು ಕೊಲೆ ಮಾಡಿ ಪ್ರಕರಣವನ್ನು ಮತ್ತೊಬ್ಬರ ಮೇಲೆ ಎತ್ತಿಹಾಕುವ ಯತ್ನ ನಡೆದಿರುವುದು ತಿಳಿದುಬಂದಿದೆ.

ಹೆಚ್‌ಡಿ.ಕೋಟೆ ತಾಲೂಕಿನ ನೇರಳೆಹುಂಡಿ ಗ್ರಾಮದಲ್ಲಿ ಭಾನುಪ್ರಕಾಶ್ ಎಂಬ ಯುವಕನ‌ ಕೊಲೆ ಆಗಿತ್ತು. ಪ್ರಕರಣ ಸಂಬಂಧ ಗಲಾಟೆ ಮಾಡಿದ್ದ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಭಾನುಪ್ರಕಾಶ್ ಕೊಲೆ ಮಾಡಿದ್ದು ಆತನ ಸ್ನೇಹಿತ ದಿನೇಶ್ ಎಂಬುದು ಬಹಿರಂಗವಾಗಿದೆ.

ಇದನ್ನೂ ಓದಿ: ಮೈಸೂರು: ಆಸ್ತಿ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ಅಣ್ಣ, ಅತ್ತಿಗೆಯ ಬರ್ಬರ ಕೊಲೆ

ದಿನೇಶ್ ಆತನ ಗೆಳೆಯ ಭೀಮನ ಜೊತೆ ಸೇರಿ ಭಾನುಪ್ರಕಾಶ್ ಕತ್ತು ಸೀಳಿ ಕೊಲೆ ಮಾಡಿದ್ದರು. ಗ್ರಾಮದ ಹೊರ ವಲಯದಲ್ಲಿ ಶವ ಬಿಟ್ಟು ಡ್ರ್ಯಾಗರ್ ಕಬಿನಿ ನದಿಗೆ ಬಿಸಾಕಿದ್ದರು. ಈ ಕೊಲೆಯನ್ನು ಅದೇ ಗ್ರಾಮದ ಎನ್.ಪ್ರಕಾಶ್ ಎಂಬುರವ ಮೇಲೆ ಬರುವಂತೆ ಮಾಡಿದ್ದ.

ಕೊನೆಗೆ ಮೊಬೈಲ್ ಟವರ್ ಲೊಕೇಶನ್ ಮೂಲಕ ಪೊಲೀಸರು ಕೊಲೆ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಕೊಲೆಗೆ ಆರೋಪಿ ದಿನೇಶ್ ಹಾಗೂ ಎನ್.ಪ್ರಕಾಶ್ ನಡುವೆ ಇದ್ದು ಹಳೆ ದ್ವೇಷವೇ ಕಾರಣ ಎಂದು ತಿಳಿದುಬಂದಿದೆ. ಇಬ್ಬರ ನಡುವಿನ ದ್ವೇಷದಲ್ಲಿ ಆತ್ಮೀಯ ಸ್ನೇಹಿತನನ್ನೇ ಕೊಂದಿರುವುದು ವಿಪರ್ಯಾಸವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:04 am, Sat, 2 September 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ