AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ, ಮೈಸೂರಿನ ದೇವಸ್ಥಾನಗಳಲ್ಲಿ ದೇವರ ವಿಗ್ರಹ ಧ್ವಂಸ; ಒಂದೇ ದಿನದಲ್ಲಿ ಆರೋಪಿಯ ಬಂಧನ

ಆರೋಪಿ ಮೈಸೂರಿನ ಸಾಲಿಗ್ರಾಮ ಪೊಲೀಸ್ ಠಾಣೆಯ ವ್ಯಾಪ್ತಿಯ ಎರಡು ದೇವಸ್ಥಾನ ಹಾಗೂ ಕೆ.ಆರ್​ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ದೇವಸ್ಥಾನಗಳ ವಿಗ್ರಹಗಳು ಹಾಗೂ ದೇಗುಲಕ್ಕೆ ಸಂಬಂಧಿಸಿದ ವಸ್ತುಗಳನ್ನು ಹಾಳು ಮಾಡಿದ್ದ.

ಮಂಡ್ಯ, ಮೈಸೂರಿನ ದೇವಸ್ಥಾನಗಳಲ್ಲಿ ದೇವರ ವಿಗ್ರಹ ಧ್ವಂಸ; ಒಂದೇ ದಿನದಲ್ಲಿ ಆರೋಪಿಯ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 09, 2021 | 2:05 PM

Share

ಮೈಸೂರು: ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಎರಡು ದೇವಸ್ಥಾನಗಳ ದೇವರ ವಿಗ್ರಹಗಳನ್ನು ಧ್ವಂಸ ಮಾಡಿದ ಆರೋಪದಲ್ಲಿ ಮೈಸೂರು ಜಿಲ್ಲಾ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಮಂಗಳವಾರ ರಾತ್ರಿ ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಎರಡು ದೇಗುಲಗಳ ವಸ್ತುಗಳು ಹಾಗೂ ಮತ್ತೆರಡು ದೇವಾಲಯಗಳ ವಿಗ್ರಹಗಳನ್ನು ಹಾಳು ಮಾಡಿದ ವಿಷಯ ಗೊತ್ತಾದ 24 ಗಂಟೆಗಳು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಕೆ.ಆರ್​ ನಗರ ತಾಲೂಕಿನ ಚಿಕ್ಕಬೇರ್ಯ ಗ್ರಾಮದವನಾಗಿದ್ದು, ಆತನನ್ನು ಕೆಆರ್​ ಪೇಟೆಯ ಬೀರವಳ್ಳಿ ಗ್ರಾಮದ ಬಳಿ ಬಂಧಿಸಲಾಗಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಆರೋಪಿ ಮೈಸೂರಿನ ಸಾಲಿಗ್ರಾಮ ಪೊಲೀಸ್ ಠಾಣೆಯ ವ್ಯಾಪ್ತಿಯ ಎರಡು ದೇವಸ್ಥಾನ ಹಾಗೂ ಕೆ.ಆರ್​ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ದೇವಸ್ಥಾನಗಳ ವಿಗ್ರಹಗಳು ಹಾಗೂ ದೇಗುಲಕ್ಕೆ ಸಂಬಂಧಿಸಿದ ವಸ್ತುಗಳನ್ನು ಹಾಳು ಮಾಡಿದ್ದ. ನಂತರ ಊರಿನಿಂದ ತಲೆ ಮರೆಸಿಕೊಂಡು ಪಾರಿಯಾಗಿದ್ದ. ದೇವರ ವಿಗ್ರಹಗಳನ್ನು ಹಾಳು ಮಾಡಿದ ಬಗ್ಗೆ ದೂರು ದಾಖಲಾಗಿತ್ತು.

ಇದು ಕೋಮುಗಲಭೆಯನ್ನು ಉಂಟುಮಾಡುವಂತಹ ಸೂಕ್ಷ್ಮ ವಿಷಯವಾದ್ದರಿಂದ ಈ ಘಟನೆಯ ತನಿಖೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದರು. ಆ ತಂಡ ಒಂದೇ ದಿನದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿ ಯಾವ ಕಾರಣಕ್ಕಾಗಿ ಹೀಗೆ 2 ಜಿಲ್ಲೆಗಳ ನಾಲ್ಕು ದೇವಸ್ಥಾನಗಳಲ್ಲಿ ಈ ಕೃತ್ಯ ಎಸಗಿದ್ದಾನೆ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: ಸುದೀಪ್​ಗಾಗಿ ದೇವಸ್ಥಾನ: ಕಿಚ್ಚನ 4 ಅಡಿ ಮೂರ್ತಿ ಎದುರು ಪುನೀತ್​ ರಾಜ್​ಕುಮಾರ್​​ ಭಾವಚಿತ್ರ

ಚಿಕ್ಕಬಳ್ಳಾಪುರ: ದೇವಸ್ಥಾನದಲ್ಲಿ ನಿಗೂಢ ಸಾವು ಪ್ರಕರಣ; ಸಾಯುವುದಕ್ಕೂ ಮುನ್ನ ಮಾಡಿರುವ ವಿಡಿಯೋ ವೈರಲ್

Published On - 2:03 pm, Thu, 9 December 21

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ