AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲೆಂದರಲ್ಲಿ ಬ್ಯಾನರ್, ಫ್ಲೆಕ್ಸ್ ಹಾಕಿದ್ರೆ ಹುಷಾರ್.. ಕ್ರಿಮಿನಲ್ ಕೇಸ್ ಹಾಕಿ, 6 ತಿಂಗಳು ಜೈಲು ಶಿಕ್ಷೆ ಕೊಡ್ತಾರೆ

ಮೈಸೂರಿಗರೇ ಎಚ್ಚರ.. ಇನ್ಮುಂದೆ ಸಭೆ, ಸಮಾರಂಭ, ಅದು ಇದು ಅಂತಾ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಹಾಕಿದ್ರೋ ನಿಮ್ಮ ಗ್ರಹಚಾರ ಕೆಟ್ಟಂತೆ. ಅಪ್ಪಿ ತಪ್ಪಿ ಹಾಕಿದ್ರೆ ದುಬಾರಿ ದಂಡದ ಜೊತೆಗೆ ಜೈಲು ಗ್ಯಾರಂಟಿ.

ಎಲ್ಲೆಂದರಲ್ಲಿ ಬ್ಯಾನರ್, ಫ್ಲೆಕ್ಸ್ ಹಾಕಿದ್ರೆ ಹುಷಾರ್.. ಕ್ರಿಮಿನಲ್ ಕೇಸ್ ಹಾಕಿ, 6 ತಿಂಗಳು ಜೈಲು ಶಿಕ್ಷೆ ಕೊಡ್ತಾರೆ
ಮೈಸೂರು ಮಹಾನಗರ ಪಾಲಿಕೆ
Follow us
ಆಯೇಷಾ ಬಾನು
|

Updated on: Jan 21, 2021 | 7:21 AM

ಮೈಸೂರು ಸ್ವಚ್ಛ ನಗರಿ.. ಸಾಂಸ್ಕೃತಿಕ ನಗರಿ. ಜಗತ್ತಿನ ಅತ್ಯಂತ ಸುಂದರ ನಗರಗಳಲ್ಲಿ ಒಂದು. ಇಂತಹ ಅರಮನೆ ನಗರಿಗೆ ಶಾಪವಾಗಿದ್ದು ಫ್ಲೆಕ್ಸ್‌ಗಳು ,ಬ್ಯಾನರ್‌ಗಳು. ರಾಜಕೀಯ ಕಾರ್ಯಕ್ರಮ, ಹುಟ್ಟುಹಬ್ಬದ ಶುಭಾಶಯ ಕೋರಲು ಎಲ್ಲೆಂದರಲ್ಲಿ ಹಾಕಲಾಗುತ್ತಿದ್ದ ಫ್ಲೆಕ್ಸ್‌ಗಳು ನಗರದ ಅಂದ ಕೆಡಿಸುತ್ತಿದ್ದವು.

ಇದಕ್ಕೆ ಬ್ರೇಕ್ ಹಾಕಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ. ಈ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಿದರು ಅದ್ಯಾಕೋ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳ ಅಬ್ಬರ ನಿಂತಿರಲಿಲ್ಲ. ಹೀಗಾಗಿ ಮೈಸೂರು ಮಹಾನಗರ ಪಾಲಿಕೆ ದಂಡಂ ದಶಗುಣಂ ಮೂಲಕ ಇದಕ್ಕೆ ಕಡಿವಾಣ ಹಾಕಲು ಹೊರಟಿದೆ.

ಇನ್ನು ಮುಂದೆ ಮೈಸೂರು ನಗರ ವ್ಯಾಪ್ತಿಯಲ್ಲಿ ಯಾವುದೇ ಫ್ಲೆಕ್ಸ್‌, ಬ್ಯಾನರ್ ಅಳವಡಿಸಿದ್ರೆ, 10 ಸಾವಿರದ ತನಕ ದಂಡ ವಿಧಿಸಲು ಮೈಸೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಿರ್ಧರಿಸಲಾಗಿದೆ.

ಒಂದು ವೇಳೆ ಕ್ರಿಮಿನಲ್ ಮೊಕದಮ್ಮೆ ದಾಖಲಿಸಿ ನ್ಯಾಯಾಲಯದಲ್ಲಿ ರುಜುವಾತಾದರೆ 6 ತಿಂಗಳು ಜೈಲು ಶಿಕ್ಷೆ ಸಹಾ ಆಗಲಿದೆ. ಈ ಮೂಲಕ ಮೈಸೂರಿನ ಅಂದವನ್ನು ರಕ್ಷಿಸಲು ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ. ಇದನ್ನು ಮೈಸೂರಿಗರು ಸ್ವಾಗತಿಸಿದ್ದಾರೆ.

ಒಟ್ನಲ್ಲಿ ಸಾಂಸ್ಕೃತಿಕ ನಗರಿಯ ಅಂದವನ್ನ ಫ್ಲೆಕ್ಸ್, ಬ್ಯಾನರ್‌ಗಳು ಹಾಳು ಮಾಡಿದ್ವು. ಇದೀಗ ಪಾಲಿಕೆಯ ಈ ದಿಟ್ಟ ನಿರ್ಧಾರಕ್ಕೆ ಜನ ಕೂಡ ಫುಲ್ ಖುಷ್ ಆಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕಣ್ಣು ಕುಕ್ಕಲಿದೆ ಜಾಹೀರಾತುಗಳು

ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ