AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime: ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ ವಂಚನೆ, ಪೊಲೀಸರು ಹೇಳಿದ ಕಿವಿ ಮಾತೇನು?

ಇತ್ತೀಚೆಗೆ ಮೈಸೂರಿನ ಮಹಿಳೆಯೊಬ್ಬರಿಗೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಎಂದು ಹೇಳಿಕೊಂಡು ಕರೆ ಬಂದಿತ್ತು. ಕರೆ ಮಾಡಿದವರು ಮೊದಲಿಗೆ ಸಹಾಯ ಮಾಡುವಂತೆ ಮಾತನಾಡಿ ಬಳಿಕ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅಪರಿಚಿತ ವ್ಯಕ್ತಿಗಳ ಇಂತಹ ಬೆದರಿಕೆಗಳಿಗೆ ಸಾರ್ವಜನಿಕರು ಮಣಿಯಬಾರದು. ಈ ರೀತಿ ಬೆದರಿಕೆ ಅಥವಾ ಹಣಕ್ಕೆ ಬೇಡಿಕೆ ಬಂದರೆ ಸಾರ್ವಜನಿಕರು ಕೂಡಲೇ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಬೇಕು ಎಂದು ಪೊಲೀಸರು ಕಿವಿ ಮಾತು ಹೇಳಿದ್ದಾರೆ.

Cyber Crime: ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ ವಂಚನೆ, ಪೊಲೀಸರು ಹೇಳಿದ ಕಿವಿ ಮಾತೇನು?
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Sep 27, 2023 | 2:52 PM

Share

ಮೈಸೂರು, ಸೆ.2023: ಸೈಬರ್‌ ಕ್ರೈಂ (Cyber Crime) ಖದೀಮರು ಅಮಾಯಕ ಜನರನ್ನು ವಂಚಿಸಲು ನಾನಾ ವಿಧಾನಗಳನ್ನು ಅನುಸರಿಸುತ್ತಿದ್ದಾರೆ. ಇತ್ತೀಚೆಗೆ ಮೈಸೂರು ಸೈಬರ್ ಕ್ರೈಮ್, ಆರ್ಥಿಕ ಅಪರಾಧಗಳು ಮತ್ತು ನಾರ್ಕೋಟಿಕ್ಸ್ (ಸಿಇಎನ್) ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿದ್ದು ಚಾಲಾಕಿ ವಂಚಕರು (Cheating) ತಾವು ಪೊಲೀಸರೆಂದು ಕರೆ ಮಾಡಿ ಅಮಾಯಕರನ್ನು ನಂಬಿಸಿ ಹಣಕ್ಕೆ ಬೇಡಿಗೆ ಇಟ್ಟು ವಂಚನೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಾವು ಪೊಲೀಸರು ನಿಮ್ಮ ಮೇಲೆ ದೂರು ದಾಖಲಾಗಿದೆ. ಸಾಕ್ಷಿ ಇದೆ ಹಣ ಕೊಟ್ಟರೆ ಪ್ರಕರಣ ಮುಚ್ಚಿ ಹಾಕುವುದಾಗಿ ಹೇಳಿ ಮೋಸ ಮಾಡುತ್ತಿದ್ದಾರೆ.

ಇತ್ತೀಚೆಗೆ ನಗರದ ಮಹಿಳೆಯೊಬ್ಬರಿಗೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಎಂದು ಹೇಳಿಕೊಂಡು ಕರೆ ಬಂದಿತ್ತು. ಕರೆ ಮಾಡಿದವರು ಮೊದಲಿಗೆ ಸಹಾಯ ಮಾಡುವಂತೆ ಮಾತನಾಡಿ ಬಳಿಕ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ತಮ್ಮ ಹೆಸರಿನ ಪಾರ್ಸೆಲ್ ಥಾಯ್ಲೆಂಡ್‌ಗೆ ಹೋಗಿದೆ. ಆ ಪಾರ್ಸಲ್​ನಲ್ಲಿ ಕೆಲವು ಅಕ್ರಮ ವಸ್ತುಗಳಿದ್ದು ಯಾವುದೇ ಕಾನೂನು ಸಮಸ್ಯೆ ಬರಬಹುದು. ಹೀಗಾಗಿ ಅದನ್ನು ಅಲ್ಲೇ ನಮ್ಮ ಏಜೆನ್ಸಿಯವರು ತೆಗೆದುಕೊಳ್ಳುತ್ತಾರೆ ಎಂದು ವಂಚಕರು ಸಹಾಯ ಮಾಡುವ ರೀತಿಯಲ್ಲಿ ಕರೆ ಮಾಡಿ ಮಹಿಳೆಗೆ 40,000 ರೂ. ಡಿಮ್ಯಾಂಡ್ ಮಾಡಿದ್ದರು. ಈ ಬಗ್ಗೆ ಮಹಿಳೆಯ ದೂರಿನ ಆಧಾರದ ಮೇಲೆ, ಮಾಹಿತಿ ತಂತ್ರಜ್ಞಾನದ ಸೆಕ್ಷನ್ 66 (ಡಿ) ಮತ್ತು ಐಪಿಸಿ ಸೆಕ್ಷನ್ 419 ಮತ್ತು 420 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಹಾವೇರಿ: ಕಡಿಮೆ ಬೆಲೆಗೆ ಚಿನ್ನದ ಆಸೆ ತೊರಿಸಿ 25 ಲಕ್ಷ ವಂಚನೆ; ಇಲ್ಲಿದೆ ವಿವರ

ಅಪರಿಚಿತ ವ್ಯಕ್ತಿಗಳ ಇಂತಹ ಬೆದರಿಕೆಗಳಿಗೆ ಸಾರ್ವಜನಿಕರು ಮಣಿಯಬಾರದು. ಕೆಲವು ವಾರಗಳ ಹಿಂದೆ, ಪೊಲೀಸ್ ಪ್ರಕರಣ ದಾಖಲಿಸುವ ಹೆಸರಿನಲ್ಲಿ ಮತ್ತೊಬ್ಬ ನಗರದ ನಿವಾಸಿಯನ್ನು ವಂಚಿಸಲಾಗಿದೆ. ಈ ರೀತಿ ಬೆದರಿಕೆ ಅಥವಾ ಹಣಕ್ಕೆ ಬೇಡಿಕೆ ಬಂದರೆ ಸಾರ್ವಜನಿಕರು ಕೂಡಲೇ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

CEN ಪೋಲೀಸರ ಪ್ರಕಾರ, ಕಳೆದ ನಾಲ್ಕು ವರ್ಷಗಳಿಂದ ಈ ರೀತಿಯ ಘಟನೆಗಳು ವರದಿಯಾಗುತ್ತಲೇ ಇದೆ. ವಂಚಕರು ತಮ್ಮ ವಂಚನೆಯ ಮಾರ್ಗಗಳನ್ನು ಬದಲಾಯಿಸುತ್ತಲೇ ಇರುತ್ತಾರೆ. ಕಸ್ಟಮ್ಸ್ ಕ್ಲಿಯರೆನ್ಸ್ ಮತ್ತು ಉಡುಗೊರೆಗಳ ಹೆಸರಿನಲ್ಲಿ ಮೋಸ ಮಾಡುವುದು ಅವರು ಬಳಸುವ ಸಾಮಾನ್ಯ ತಂತ್ರವಾಗಿದೆ. ಸಾರ್ವಜನಿಕರು ಜಾಗರೂಕರಾಗಿರಬೇಕು ಮತ್ತು ಈ ರೀತಿಯ ಕರೆಗಳನ್ನು ಪರಿಗಣಿಸಬಾರದು ಎಂದು ಸಿಇಎನ್ ಪೊಲೀಸರು ತಿಳಿಸಿದ್ದಾರೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ