AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru: ಕಾಡಿಗೆ ಎಳೆದೊಯ್ಯತ್ತಿದ್ದ ಚಿರತೆ ಹಿಮ್ಮೆಟ್ಟಿಸಿ 6 ವರ್ಷದ ಬಾಲಕಿಯನ್ನು ರಕ್ಷಿಸಿದ ತಂದೆ, ಗ್ರಾಮಸ್ಥರು

ಕಾಡಿಗೆ ಎಳೆದೊಯ್ಯತ್ತಿದ್ದ ಚಿರತೆ ಹಿಮ್ಮೆಟ್ಟಿಸಿ 6 ವರ್ಷದ ಬಾಲಕಿಯನ್ನು ತಂದೆ ರಕ್ಷಿಸಿದ ಘಟನೆ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಕೊಳ್ಳೇಗಾಲ ವನ್ಯಜೀವಿ ವಿಭಾಗದ ಕಗ್ಗಲಿಗುಂಡಿ ಪೋಡು ಎಂಬಲ್ಲಿ ನಡೆದಿದೆ.

Mysuru: ಕಾಡಿಗೆ ಎಳೆದೊಯ್ಯತ್ತಿದ್ದ ಚಿರತೆ ಹಿಮ್ಮೆಟ್ಟಿಸಿ 6 ವರ್ಷದ ಬಾಲಕಿಯನ್ನು ರಕ್ಷಿಸಿದ ತಂದೆ, ಗ್ರಾಮಸ್ಥರು
ಕಾಡಿಗೆ ಎಳೆದೊಯ್ಯತ್ತಿದ್ದ ಚಿರತೆ ಹಿಮ್ಮೆಟ್ಟಿಸಿ 6 ವರ್ಷದ ಬಾಲಕಿಯನ್ನು ರಕ್ಷಿಸಿದ ತಂದೆ, ಗ್ರಾಮಸ್ಥರು
ಆಯೇಷಾ ಬಾನು
|

Updated on: Jun 28, 2023 | 11:15 AM

Share

ಮೈಸೂರು: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಕೊಳ್ಳೇಗಾಲ ವನ್ಯಜೀವಿ ವಿಭಾಗದ ಕಗ್ಗಲಿಗುಂಡಿ ಪೋಡು ಎಂಬಲ್ಲಿ ಸೋಮವಾರ(ಜೂನ್ 26) ಚಿರತೆರೊಂದು ಆರು ವರ್ಷದ ಬಾಲಕಿಯನ್ನು ತನ್ನ ಬಾಯಿಯಲ್ಲಿ ಹಿಡಿದು ಕಾಡಿಗೆ ಎಳೆದುಕೊಂಡು ಹೋಗಲು ಪ್ರಯತ್ನಿಸಿದೆ. ಈ ವೇಳೆ ಎಚ್ಚೆತ್ತ ಬಾಲಕಿ ತಂದೆ ಹಾಗೂ ಗ್ರಾಮಸ್ಥರು ಚಿರತೆಯ ದವಡೆಯಿಂದ ಬಾಲಕಿಯನ್ನು ರಕ್ಷಿಸಿದ್ದಾರೆ.

ಸೋಮವಾರ ರಾತ್ರಿ ಸುಮಾರು 7.30ರ ಸುಮಾರಿಗೆ ರಾಮು ಅವರ 6 ವರ್ಷದ ಮಗಳು ಸುಶೀಲಾ ಮನೆಯ ಮುಂಭಾಗ ಕುಳಿತಿದ್ದಳು. ಈ ವೇಳೆ ಮನೆ ಬಳಿ ಬಂದ ಚಿರತೆಯೊಂದು ಬಾಲಕಿ ಮೇಲೆ ದಾಳಿ ಮಾಡಿ ಆಕೆಯನ್ನು ಕಾಡಿಗೆ ಎಳೆದೊಯ್ಯಲು ಯತ್ನಿಸಿದೆ. ಇದನ್ನು ಕಂಡ ಸ್ವಲ್ಪ ದೂರದಲ್ಲೇ ಇದ್ದ ರಾಮು ತನ್ನ ಮಗಳನ್ನು ಚಿರತೆ ಬಾಯಲ್ಲಿ ಕಂಡು ಶಾಕ್ ಆಗಿದ್ದಾರೆ. ತಕ್ಷಣ ಜೋರಾಗಿ ಕಿರುಚಾಡಿದ್ದಾರೆ. ಕಿರುಚಾಟದ ಸದ್ದು ಕೇಳಿ ಗ್ರಾಮಸ್ಥರು ಸ್ಥಳಕ್ಕೆ ಬಂದಿದ್ದು ಎಲ್ಲರೂ ಸೇರಿ ಚಿರತೆ ಬಾಯಿಂದ‌ ಬಾಲಕಿಯನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: Lokayukta Raid: ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆಯಲ್ಲಿ ಕೃಷಿ ಇಲಾಖೆ ನೌಕರರ ಮನೆಗಳನ್ನೇ ದಾಳಿಗೆ ಆರಿಸಿಕೊಂಡಿದ್ದು ಯಾಕೋ?

ರಾಮು ಹಾಗೂ ಗ್ರಾಮಸ್ಥರ ಓಡಾಟದಿಂದ ಬೆಚ್ಚಿಬಿದ್ದ ಚಿರತೆ ಬಾಲಕಿಯನ್ನು ಮನೆ ಸಮೀಪದ 10 ಅಡಿ ಆಳದ ಕಂದಕಕ್ಕೆ ಬಿಸಾಕಿ ಕಾಡಿನತ್ತ ಮರೆಯಾಗಿದೆ. ಆ ಪ್ರದೇಶದಲ್ಲಿ ವಾಸಿಸುವ 45 ಕುಟುಂಬಗಳು ತಮ್ಮ ಮೇಲೆ ಕಾಡು ಪ್ರಾಣಿಗಳು, ಹೆಚ್ಚಾಗಿ ಆನೆಗಳು ಮತ್ತು ಚಿರತೆಗಳು ದಾಳಿ ಮಾಡದಂತೆ ಹಾಗೂ ಒಳನುಗ್ಗದಂತೆ ತಡೆಯಲು ಕಂದಕವನ್ನು ಅಗೆದಿದ್ದಾರೆ.

ಬಾಲಕಿಯನ್ನು ರಕ್ಷಿಸಲಾಯಿತಾದರೂ ರಾಮು, ಆತನ ಪತ್ನಿ ಲಲಿತಾ ಮತ್ತು ಇತರ ಗ್ರಾಮಸ್ಥರು ಇನ್ನೂ ಶಾಕ್​ನಲ್ಲೇ ಇದ್ದಾರೆ. ಚಿರತೆ ದಾಳಿ ವೇಳೆ ಬಾಲಕಿಯ ಬಾಯಿ ಹಾಗೂ ಗಂಟಲಿನ ಭಾಗಕ್ಕೆ ಕಚ್ಚಿದ್ದು, ತೀವ್ರ ರಕ್ತಸ್ರಾವವಾಗಿದೆ. ಸಮೀಪದ ಹೋಲಿಕ್ರಾಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ