Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru: ಕಾಡಿಗೆ ಎಳೆದೊಯ್ಯತ್ತಿದ್ದ ಚಿರತೆ ಹಿಮ್ಮೆಟ್ಟಿಸಿ 6 ವರ್ಷದ ಬಾಲಕಿಯನ್ನು ರಕ್ಷಿಸಿದ ತಂದೆ, ಗ್ರಾಮಸ್ಥರು

ಕಾಡಿಗೆ ಎಳೆದೊಯ್ಯತ್ತಿದ್ದ ಚಿರತೆ ಹಿಮ್ಮೆಟ್ಟಿಸಿ 6 ವರ್ಷದ ಬಾಲಕಿಯನ್ನು ತಂದೆ ರಕ್ಷಿಸಿದ ಘಟನೆ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಕೊಳ್ಳೇಗಾಲ ವನ್ಯಜೀವಿ ವಿಭಾಗದ ಕಗ್ಗಲಿಗುಂಡಿ ಪೋಡು ಎಂಬಲ್ಲಿ ನಡೆದಿದೆ.

Mysuru: ಕಾಡಿಗೆ ಎಳೆದೊಯ್ಯತ್ತಿದ್ದ ಚಿರತೆ ಹಿಮ್ಮೆಟ್ಟಿಸಿ 6 ವರ್ಷದ ಬಾಲಕಿಯನ್ನು ರಕ್ಷಿಸಿದ ತಂದೆ, ಗ್ರಾಮಸ್ಥರು
ಕಾಡಿಗೆ ಎಳೆದೊಯ್ಯತ್ತಿದ್ದ ಚಿರತೆ ಹಿಮ್ಮೆಟ್ಟಿಸಿ 6 ವರ್ಷದ ಬಾಲಕಿಯನ್ನು ರಕ್ಷಿಸಿದ ತಂದೆ, ಗ್ರಾಮಸ್ಥರು
Follow us
ಆಯೇಷಾ ಬಾನು
|

Updated on: Jun 28, 2023 | 11:15 AM

ಮೈಸೂರು: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಕೊಳ್ಳೇಗಾಲ ವನ್ಯಜೀವಿ ವಿಭಾಗದ ಕಗ್ಗಲಿಗುಂಡಿ ಪೋಡು ಎಂಬಲ್ಲಿ ಸೋಮವಾರ(ಜೂನ್ 26) ಚಿರತೆರೊಂದು ಆರು ವರ್ಷದ ಬಾಲಕಿಯನ್ನು ತನ್ನ ಬಾಯಿಯಲ್ಲಿ ಹಿಡಿದು ಕಾಡಿಗೆ ಎಳೆದುಕೊಂಡು ಹೋಗಲು ಪ್ರಯತ್ನಿಸಿದೆ. ಈ ವೇಳೆ ಎಚ್ಚೆತ್ತ ಬಾಲಕಿ ತಂದೆ ಹಾಗೂ ಗ್ರಾಮಸ್ಥರು ಚಿರತೆಯ ದವಡೆಯಿಂದ ಬಾಲಕಿಯನ್ನು ರಕ್ಷಿಸಿದ್ದಾರೆ.

ಸೋಮವಾರ ರಾತ್ರಿ ಸುಮಾರು 7.30ರ ಸುಮಾರಿಗೆ ರಾಮು ಅವರ 6 ವರ್ಷದ ಮಗಳು ಸುಶೀಲಾ ಮನೆಯ ಮುಂಭಾಗ ಕುಳಿತಿದ್ದಳು. ಈ ವೇಳೆ ಮನೆ ಬಳಿ ಬಂದ ಚಿರತೆಯೊಂದು ಬಾಲಕಿ ಮೇಲೆ ದಾಳಿ ಮಾಡಿ ಆಕೆಯನ್ನು ಕಾಡಿಗೆ ಎಳೆದೊಯ್ಯಲು ಯತ್ನಿಸಿದೆ. ಇದನ್ನು ಕಂಡ ಸ್ವಲ್ಪ ದೂರದಲ್ಲೇ ಇದ್ದ ರಾಮು ತನ್ನ ಮಗಳನ್ನು ಚಿರತೆ ಬಾಯಲ್ಲಿ ಕಂಡು ಶಾಕ್ ಆಗಿದ್ದಾರೆ. ತಕ್ಷಣ ಜೋರಾಗಿ ಕಿರುಚಾಡಿದ್ದಾರೆ. ಕಿರುಚಾಟದ ಸದ್ದು ಕೇಳಿ ಗ್ರಾಮಸ್ಥರು ಸ್ಥಳಕ್ಕೆ ಬಂದಿದ್ದು ಎಲ್ಲರೂ ಸೇರಿ ಚಿರತೆ ಬಾಯಿಂದ‌ ಬಾಲಕಿಯನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: Lokayukta Raid: ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆಯಲ್ಲಿ ಕೃಷಿ ಇಲಾಖೆ ನೌಕರರ ಮನೆಗಳನ್ನೇ ದಾಳಿಗೆ ಆರಿಸಿಕೊಂಡಿದ್ದು ಯಾಕೋ?

ರಾಮು ಹಾಗೂ ಗ್ರಾಮಸ್ಥರ ಓಡಾಟದಿಂದ ಬೆಚ್ಚಿಬಿದ್ದ ಚಿರತೆ ಬಾಲಕಿಯನ್ನು ಮನೆ ಸಮೀಪದ 10 ಅಡಿ ಆಳದ ಕಂದಕಕ್ಕೆ ಬಿಸಾಕಿ ಕಾಡಿನತ್ತ ಮರೆಯಾಗಿದೆ. ಆ ಪ್ರದೇಶದಲ್ಲಿ ವಾಸಿಸುವ 45 ಕುಟುಂಬಗಳು ತಮ್ಮ ಮೇಲೆ ಕಾಡು ಪ್ರಾಣಿಗಳು, ಹೆಚ್ಚಾಗಿ ಆನೆಗಳು ಮತ್ತು ಚಿರತೆಗಳು ದಾಳಿ ಮಾಡದಂತೆ ಹಾಗೂ ಒಳನುಗ್ಗದಂತೆ ತಡೆಯಲು ಕಂದಕವನ್ನು ಅಗೆದಿದ್ದಾರೆ.

ಬಾಲಕಿಯನ್ನು ರಕ್ಷಿಸಲಾಯಿತಾದರೂ ರಾಮು, ಆತನ ಪತ್ನಿ ಲಲಿತಾ ಮತ್ತು ಇತರ ಗ್ರಾಮಸ್ಥರು ಇನ್ನೂ ಶಾಕ್​ನಲ್ಲೇ ಇದ್ದಾರೆ. ಚಿರತೆ ದಾಳಿ ವೇಳೆ ಬಾಲಕಿಯ ಬಾಯಿ ಹಾಗೂ ಗಂಟಲಿನ ಭಾಗಕ್ಕೆ ಕಚ್ಚಿದ್ದು, ತೀವ್ರ ರಕ್ತಸ್ರಾವವಾಗಿದೆ. ಸಮೀಪದ ಹೋಲಿಕ್ರಾಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್