AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru: ಕಾಡಿಗೆ ಎಳೆದೊಯ್ಯತ್ತಿದ್ದ ಚಿರತೆ ಹಿಮ್ಮೆಟ್ಟಿಸಿ 6 ವರ್ಷದ ಬಾಲಕಿಯನ್ನು ರಕ್ಷಿಸಿದ ತಂದೆ, ಗ್ರಾಮಸ್ಥರು

ಕಾಡಿಗೆ ಎಳೆದೊಯ್ಯತ್ತಿದ್ದ ಚಿರತೆ ಹಿಮ್ಮೆಟ್ಟಿಸಿ 6 ವರ್ಷದ ಬಾಲಕಿಯನ್ನು ತಂದೆ ರಕ್ಷಿಸಿದ ಘಟನೆ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಕೊಳ್ಳೇಗಾಲ ವನ್ಯಜೀವಿ ವಿಭಾಗದ ಕಗ್ಗಲಿಗುಂಡಿ ಪೋಡು ಎಂಬಲ್ಲಿ ನಡೆದಿದೆ.

Mysuru: ಕಾಡಿಗೆ ಎಳೆದೊಯ್ಯತ್ತಿದ್ದ ಚಿರತೆ ಹಿಮ್ಮೆಟ್ಟಿಸಿ 6 ವರ್ಷದ ಬಾಲಕಿಯನ್ನು ರಕ್ಷಿಸಿದ ತಂದೆ, ಗ್ರಾಮಸ್ಥರು
ಕಾಡಿಗೆ ಎಳೆದೊಯ್ಯತ್ತಿದ್ದ ಚಿರತೆ ಹಿಮ್ಮೆಟ್ಟಿಸಿ 6 ವರ್ಷದ ಬಾಲಕಿಯನ್ನು ರಕ್ಷಿಸಿದ ತಂದೆ, ಗ್ರಾಮಸ್ಥರು
ಆಯೇಷಾ ಬಾನು
|

Updated on: Jun 28, 2023 | 11:15 AM

Share

ಮೈಸೂರು: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಕೊಳ್ಳೇಗಾಲ ವನ್ಯಜೀವಿ ವಿಭಾಗದ ಕಗ್ಗಲಿಗುಂಡಿ ಪೋಡು ಎಂಬಲ್ಲಿ ಸೋಮವಾರ(ಜೂನ್ 26) ಚಿರತೆರೊಂದು ಆರು ವರ್ಷದ ಬಾಲಕಿಯನ್ನು ತನ್ನ ಬಾಯಿಯಲ್ಲಿ ಹಿಡಿದು ಕಾಡಿಗೆ ಎಳೆದುಕೊಂಡು ಹೋಗಲು ಪ್ರಯತ್ನಿಸಿದೆ. ಈ ವೇಳೆ ಎಚ್ಚೆತ್ತ ಬಾಲಕಿ ತಂದೆ ಹಾಗೂ ಗ್ರಾಮಸ್ಥರು ಚಿರತೆಯ ದವಡೆಯಿಂದ ಬಾಲಕಿಯನ್ನು ರಕ್ಷಿಸಿದ್ದಾರೆ.

ಸೋಮವಾರ ರಾತ್ರಿ ಸುಮಾರು 7.30ರ ಸುಮಾರಿಗೆ ರಾಮು ಅವರ 6 ವರ್ಷದ ಮಗಳು ಸುಶೀಲಾ ಮನೆಯ ಮುಂಭಾಗ ಕುಳಿತಿದ್ದಳು. ಈ ವೇಳೆ ಮನೆ ಬಳಿ ಬಂದ ಚಿರತೆಯೊಂದು ಬಾಲಕಿ ಮೇಲೆ ದಾಳಿ ಮಾಡಿ ಆಕೆಯನ್ನು ಕಾಡಿಗೆ ಎಳೆದೊಯ್ಯಲು ಯತ್ನಿಸಿದೆ. ಇದನ್ನು ಕಂಡ ಸ್ವಲ್ಪ ದೂರದಲ್ಲೇ ಇದ್ದ ರಾಮು ತನ್ನ ಮಗಳನ್ನು ಚಿರತೆ ಬಾಯಲ್ಲಿ ಕಂಡು ಶಾಕ್ ಆಗಿದ್ದಾರೆ. ತಕ್ಷಣ ಜೋರಾಗಿ ಕಿರುಚಾಡಿದ್ದಾರೆ. ಕಿರುಚಾಟದ ಸದ್ದು ಕೇಳಿ ಗ್ರಾಮಸ್ಥರು ಸ್ಥಳಕ್ಕೆ ಬಂದಿದ್ದು ಎಲ್ಲರೂ ಸೇರಿ ಚಿರತೆ ಬಾಯಿಂದ‌ ಬಾಲಕಿಯನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: Lokayukta Raid: ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆಯಲ್ಲಿ ಕೃಷಿ ಇಲಾಖೆ ನೌಕರರ ಮನೆಗಳನ್ನೇ ದಾಳಿಗೆ ಆರಿಸಿಕೊಂಡಿದ್ದು ಯಾಕೋ?

ರಾಮು ಹಾಗೂ ಗ್ರಾಮಸ್ಥರ ಓಡಾಟದಿಂದ ಬೆಚ್ಚಿಬಿದ್ದ ಚಿರತೆ ಬಾಲಕಿಯನ್ನು ಮನೆ ಸಮೀಪದ 10 ಅಡಿ ಆಳದ ಕಂದಕಕ್ಕೆ ಬಿಸಾಕಿ ಕಾಡಿನತ್ತ ಮರೆಯಾಗಿದೆ. ಆ ಪ್ರದೇಶದಲ್ಲಿ ವಾಸಿಸುವ 45 ಕುಟುಂಬಗಳು ತಮ್ಮ ಮೇಲೆ ಕಾಡು ಪ್ರಾಣಿಗಳು, ಹೆಚ್ಚಾಗಿ ಆನೆಗಳು ಮತ್ತು ಚಿರತೆಗಳು ದಾಳಿ ಮಾಡದಂತೆ ಹಾಗೂ ಒಳನುಗ್ಗದಂತೆ ತಡೆಯಲು ಕಂದಕವನ್ನು ಅಗೆದಿದ್ದಾರೆ.

ಬಾಲಕಿಯನ್ನು ರಕ್ಷಿಸಲಾಯಿತಾದರೂ ರಾಮು, ಆತನ ಪತ್ನಿ ಲಲಿತಾ ಮತ್ತು ಇತರ ಗ್ರಾಮಸ್ಥರು ಇನ್ನೂ ಶಾಕ್​ನಲ್ಲೇ ಇದ್ದಾರೆ. ಚಿರತೆ ದಾಳಿ ವೇಳೆ ಬಾಲಕಿಯ ಬಾಯಿ ಹಾಗೂ ಗಂಟಲಿನ ಭಾಗಕ್ಕೆ ಕಚ್ಚಿದ್ದು, ತೀವ್ರ ರಕ್ತಸ್ರಾವವಾಗಿದೆ. ಸಮೀಪದ ಹೋಲಿಕ್ರಾಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ
ಕಾಲೇಜಿನಲ್ಲಿ ರ‍್ಯಾಗಿಂಗ್, ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ಕೊಟ್ರು
ಕಾಲೇಜಿನಲ್ಲಿ ರ‍್ಯಾಗಿಂಗ್, ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ಕೊಟ್ರು