AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2022: ಮೈಸೂರಿನ ಶಾಲೆಗಳಿಗೆ ಸೆ.26 ರಿಂದ ದಸರಾ ರಜೆ ಶುರು

ಸಾರ್ವಜನಿಕ ಶಿಕ್ಷಣ ಇಲಾಖೆಯ 2022-23ನೇ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ ಅಕ್ಟೋಬರ್ 03, 2022 ರಿಂದ 16, 2022 ರವರೆಗೆ, ಒಟ್ಟು 14 ದಿನಗಳ ಕಾಲ ದಸರಾ ರಜೆ ನೀಡಿದೆ.

Mysuru Dasara 2022: ಮೈಸೂರಿನ ಶಾಲೆಗಳಿಗೆ ಸೆ.26 ರಿಂದ ದಸರಾ ರಜೆ ಶುರು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Sep 20, 2022 | 7:52 AM

Share

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ(Dasara) ಸಂಭ್ರಮ ಮನೆ ಮಾಡಿದೆ. ಸದ್ಯ ದಸರಾ ಅಂಗವಾಗಿ ಜಿಲ್ಲೆಯ ಶಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9 ರವರೆಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಉಪನಿರ್ದೇಶಕರ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ಸುತ್ತೋಲೆ ಹೊರಡಿಸಿದೆ.

2022-23ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅವಧಿಯನ್ನು ನಿಗದಿಪಡಿಸಲಾಗಿದೆ. ಮೈಸೂರು ದಸರಾ ನವರಾತ್ರಿ ಕಾರ್ಯಕ್ರಮಗಳು ದಿನಾಂಕ 26-09-2022 ರಿಂದ ಪ್ರಾರಂಭವಾಗುತ್ತಿದೆ. ಹಾಗೂ ದಿನಾಂಕ 02-10-2022ರಂದು ಮಹಾತ್ಮ ಗಾಂಧಿ ಜಯಂತಿ ಮತ್ತು 09-10-2022ರಂದು ವಾಲ್ಮೀಕಿ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವ ಷರತ್ತಿನ ಮೇರೆಗೆ ಮೈಸೂರು ಜಿಲ್ಲೆಗೆ ದಿನಾಂಕ 26-09-2022 ರಿಂದ 9-10-2022ರವರೆಗೆ ಮಕ್ಕಳ ಹಿತದೃಷ್ಟಿಯಿಂದ ದಸರಾ ರಜೆ ನೀಡಲು ಮೈಸೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: Mrunal Thakur: ನಟಿ ಮೃಣಾಲ್​ ಠಾಕೂರ್ ಸಂಬಳ ಎಷ್ಟು? ‘ಸೀತಾ ರಾಮಂ’ ಸೂಪರ್​ ಹಿಟ್​ ಆದ್ಮೇಲೆ ಹೆಚ್ಚಿದೆ ಡಿಮ್ಯಾಂಡ್​​

dasara ಸಾರ್ವಜನಿಕ ಶಿಕ್ಷಣ ಇಲಾಖೆಯ 2022-23ನೇ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ ಅಕ್ಟೋಬರ್ 03, 2022 ರಿಂದ 16, 2022 ರವರೆಗೆ, ಒಟ್ಟು 14 ದಿನಗಳ ಕಾಲ ದಸರಾ ರಜೆ ನೀಡಿದೆ. ವಿದ್ಯಾರ್ಥಿಗಳು ಅರ್ಧವಾರ್ಷಿಕ ಪರೀಕ್ಷೆಗೆ ಅಧ್ಯಯನ ಮಾಡಿಕೊಳ್ಳುವ ದೃಷ್ಟಿಯಿಂದ ಈ ರಜೆಯನ್ನು ಪ್ರತಿವರ್ಷ ನೀಡಲಾಗುತ್ತದೆ.

ಅಕ್ಟೋಬರ್ 16 ಕ್ಕೆ ದಸರಾ ರಜೆ ಮುಕ್ತಾಯವಾಗುತ್ತದೆ. ಅಕ್ಟೋಬರ್ 17 ರಿಂದ ನವೆಂಬರ್ 25 ರವರೆಗೆ 4ನೇ ತರಗತಿಯಿಂದ 9ನೇ ತರಗತಿಗಳಿಗೆ ಅರ್ಧವಾರ್ಷಿಕ ಪರೀಕ್ಷೆ ಹಾಗೂ ಮೌಲ್ಯಮಾಪನ ಕಾರ್ಯ ನಡೆಯಲಿದೆ. 2022-23 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಒಟ್ಟು 60 ಸರ್ಕಾರಿ ರಜಾ ದಿನಗಳು ಇರಲಿದ್ದು, 270 ಶಾಲಾ ಕರ್ತವ್ಯದ ದಿನಗಳಾಗಿವೆ. ಇನ್ನು ಅಕ್ಟೋಬರ್ 1 ರಿಂದ ಕರ್ನಾಟಕದ ಇತರೆ ಭಾಗದಲ್ಲಿ ದಸರಾ ರಜೆ ಪ್ರಾರಂಭವಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:21 am, Tue, 20 September 22

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ