AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2022: ಮೈಸೂರಿನ ಶಾಲೆಗಳಿಗೆ ಸೆ.26 ರಿಂದ ದಸರಾ ರಜೆ ಶುರು

ಸಾರ್ವಜನಿಕ ಶಿಕ್ಷಣ ಇಲಾಖೆಯ 2022-23ನೇ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ ಅಕ್ಟೋಬರ್ 03, 2022 ರಿಂದ 16, 2022 ರವರೆಗೆ, ಒಟ್ಟು 14 ದಿನಗಳ ಕಾಲ ದಸರಾ ರಜೆ ನೀಡಿದೆ.

Mysuru Dasara 2022: ಮೈಸೂರಿನ ಶಾಲೆಗಳಿಗೆ ಸೆ.26 ರಿಂದ ದಸರಾ ರಜೆ ಶುರು
ಸಾಂಧರ್ಬಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Sep 20, 2022 | 7:52 AM

Share

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ(Dasara) ಸಂಭ್ರಮ ಮನೆ ಮಾಡಿದೆ. ಸದ್ಯ ದಸರಾ ಅಂಗವಾಗಿ ಜಿಲ್ಲೆಯ ಶಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9 ರವರೆಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಉಪನಿರ್ದೇಶಕರ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ಸುತ್ತೋಲೆ ಹೊರಡಿಸಿದೆ.

2022-23ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅವಧಿಯನ್ನು ನಿಗದಿಪಡಿಸಲಾಗಿದೆ. ಮೈಸೂರು ದಸರಾ ನವರಾತ್ರಿ ಕಾರ್ಯಕ್ರಮಗಳು ದಿನಾಂಕ 26-09-2022 ರಿಂದ ಪ್ರಾರಂಭವಾಗುತ್ತಿದೆ. ಹಾಗೂ ದಿನಾಂಕ 02-10-2022ರಂದು ಮಹಾತ್ಮ ಗಾಂಧಿ ಜಯಂತಿ ಮತ್ತು 09-10-2022ರಂದು ವಾಲ್ಮೀಕಿ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವ ಷರತ್ತಿನ ಮೇರೆಗೆ ಮೈಸೂರು ಜಿಲ್ಲೆಗೆ ದಿನಾಂಕ 26-09-2022 ರಿಂದ 9-10-2022ರವರೆಗೆ ಮಕ್ಕಳ ಹಿತದೃಷ್ಟಿಯಿಂದ ದಸರಾ ರಜೆ ನೀಡಲು ಮೈಸೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: Mrunal Thakur: ನಟಿ ಮೃಣಾಲ್​ ಠಾಕೂರ್ ಸಂಬಳ ಎಷ್ಟು? ‘ಸೀತಾ ರಾಮಂ’ ಸೂಪರ್​ ಹಿಟ್​ ಆದ್ಮೇಲೆ ಹೆಚ್ಚಿದೆ ಡಿಮ್ಯಾಂಡ್​​

dasara ಸಾರ್ವಜನಿಕ ಶಿಕ್ಷಣ ಇಲಾಖೆಯ 2022-23ನೇ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ ಅಕ್ಟೋಬರ್ 03, 2022 ರಿಂದ 16, 2022 ರವರೆಗೆ, ಒಟ್ಟು 14 ದಿನಗಳ ಕಾಲ ದಸರಾ ರಜೆ ನೀಡಿದೆ. ವಿದ್ಯಾರ್ಥಿಗಳು ಅರ್ಧವಾರ್ಷಿಕ ಪರೀಕ್ಷೆಗೆ ಅಧ್ಯಯನ ಮಾಡಿಕೊಳ್ಳುವ ದೃಷ್ಟಿಯಿಂದ ಈ ರಜೆಯನ್ನು ಪ್ರತಿವರ್ಷ ನೀಡಲಾಗುತ್ತದೆ.

ಅಕ್ಟೋಬರ್ 16 ಕ್ಕೆ ದಸರಾ ರಜೆ ಮುಕ್ತಾಯವಾಗುತ್ತದೆ. ಅಕ್ಟೋಬರ್ 17 ರಿಂದ ನವೆಂಬರ್ 25 ರವರೆಗೆ 4ನೇ ತರಗತಿಯಿಂದ 9ನೇ ತರಗತಿಗಳಿಗೆ ಅರ್ಧವಾರ್ಷಿಕ ಪರೀಕ್ಷೆ ಹಾಗೂ ಮೌಲ್ಯಮಾಪನ ಕಾರ್ಯ ನಡೆಯಲಿದೆ. 2022-23 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಒಟ್ಟು 60 ಸರ್ಕಾರಿ ರಜಾ ದಿನಗಳು ಇರಲಿದ್ದು, 270 ಶಾಲಾ ಕರ್ತವ್ಯದ ದಿನಗಳಾಗಿವೆ. ಇನ್ನು ಅಕ್ಟೋಬರ್ 1 ರಿಂದ ಕರ್ನಾಟಕದ ಇತರೆ ಭಾಗದಲ್ಲಿ ದಸರಾ ರಜೆ ಪ್ರಾರಂಭವಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:21 am, Tue, 20 September 22

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ