AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2022: ಮೈಸೂರಿನ ಶಾಲೆಗಳಿಗೆ ಸೆ.26 ರಿಂದ ದಸರಾ ರಜೆ ಶುರು

ಸಾರ್ವಜನಿಕ ಶಿಕ್ಷಣ ಇಲಾಖೆಯ 2022-23ನೇ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ ಅಕ್ಟೋಬರ್ 03, 2022 ರಿಂದ 16, 2022 ರವರೆಗೆ, ಒಟ್ಟು 14 ದಿನಗಳ ಕಾಲ ದಸರಾ ರಜೆ ನೀಡಿದೆ.

Mysuru Dasara 2022: ಮೈಸೂರಿನ ಶಾಲೆಗಳಿಗೆ ಸೆ.26 ರಿಂದ ದಸರಾ ರಜೆ ಶುರು
ಸಾಂಧರ್ಬಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Sep 20, 2022 | 7:52 AM

Share

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ(Dasara) ಸಂಭ್ರಮ ಮನೆ ಮಾಡಿದೆ. ಸದ್ಯ ದಸರಾ ಅಂಗವಾಗಿ ಜಿಲ್ಲೆಯ ಶಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9 ರವರೆಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಉಪನಿರ್ದೇಶಕರ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ಸುತ್ತೋಲೆ ಹೊರಡಿಸಿದೆ.

2022-23ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅವಧಿಯನ್ನು ನಿಗದಿಪಡಿಸಲಾಗಿದೆ. ಮೈಸೂರು ದಸರಾ ನವರಾತ್ರಿ ಕಾರ್ಯಕ್ರಮಗಳು ದಿನಾಂಕ 26-09-2022 ರಿಂದ ಪ್ರಾರಂಭವಾಗುತ್ತಿದೆ. ಹಾಗೂ ದಿನಾಂಕ 02-10-2022ರಂದು ಮಹಾತ್ಮ ಗಾಂಧಿ ಜಯಂತಿ ಮತ್ತು 09-10-2022ರಂದು ವಾಲ್ಮೀಕಿ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವ ಷರತ್ತಿನ ಮೇರೆಗೆ ಮೈಸೂರು ಜಿಲ್ಲೆಗೆ ದಿನಾಂಕ 26-09-2022 ರಿಂದ 9-10-2022ರವರೆಗೆ ಮಕ್ಕಳ ಹಿತದೃಷ್ಟಿಯಿಂದ ದಸರಾ ರಜೆ ನೀಡಲು ಮೈಸೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: Mrunal Thakur: ನಟಿ ಮೃಣಾಲ್​ ಠಾಕೂರ್ ಸಂಬಳ ಎಷ್ಟು? ‘ಸೀತಾ ರಾಮಂ’ ಸೂಪರ್​ ಹಿಟ್​ ಆದ್ಮೇಲೆ ಹೆಚ್ಚಿದೆ ಡಿಮ್ಯಾಂಡ್​​

dasara ಸಾರ್ವಜನಿಕ ಶಿಕ್ಷಣ ಇಲಾಖೆಯ 2022-23ನೇ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ ಅಕ್ಟೋಬರ್ 03, 2022 ರಿಂದ 16, 2022 ರವರೆಗೆ, ಒಟ್ಟು 14 ದಿನಗಳ ಕಾಲ ದಸರಾ ರಜೆ ನೀಡಿದೆ. ವಿದ್ಯಾರ್ಥಿಗಳು ಅರ್ಧವಾರ್ಷಿಕ ಪರೀಕ್ಷೆಗೆ ಅಧ್ಯಯನ ಮಾಡಿಕೊಳ್ಳುವ ದೃಷ್ಟಿಯಿಂದ ಈ ರಜೆಯನ್ನು ಪ್ರತಿವರ್ಷ ನೀಡಲಾಗುತ್ತದೆ.

ಅಕ್ಟೋಬರ್ 16 ಕ್ಕೆ ದಸರಾ ರಜೆ ಮುಕ್ತಾಯವಾಗುತ್ತದೆ. ಅಕ್ಟೋಬರ್ 17 ರಿಂದ ನವೆಂಬರ್ 25 ರವರೆಗೆ 4ನೇ ತರಗತಿಯಿಂದ 9ನೇ ತರಗತಿಗಳಿಗೆ ಅರ್ಧವಾರ್ಷಿಕ ಪರೀಕ್ಷೆ ಹಾಗೂ ಮೌಲ್ಯಮಾಪನ ಕಾರ್ಯ ನಡೆಯಲಿದೆ. 2022-23 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಒಟ್ಟು 60 ಸರ್ಕಾರಿ ರಜಾ ದಿನಗಳು ಇರಲಿದ್ದು, 270 ಶಾಲಾ ಕರ್ತವ್ಯದ ದಿನಗಳಾಗಿವೆ. ಇನ್ನು ಅಕ್ಟೋಬರ್ 1 ರಿಂದ ಕರ್ನಾಟಕದ ಇತರೆ ಭಾಗದಲ್ಲಿ ದಸರಾ ರಜೆ ಪ್ರಾರಂಭವಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:21 am, Tue, 20 September 22

ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?