AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕೆ ಆರ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ದೂರುಗಳ ಸುರಿಮಳೆಗೆ ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದೇನು?

ಇದೇ ವೇಳೆ ಬ್ಲ್ಯಾಕ್ ಫ್ಹಂಗಸ್ ರೋಗಿಗಳ ಆರೋಗ್ಯ ವಿಚಾರಿಸಲು ಕೆ.ಆರ್.ಆಸ್ಪತ್ರೆಯ ಬ್ಲ್ಯಾಕ್ ಫ್ಹಂಗಸ್ ರೋಗಿಗಳ ವಿಭಾಗಕ್ಕೆ ಸಹ ಡಿಸಿ ರೋಹಿಣಿ ಸಿಂಧೂರಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಮೈಸೂರು ಕೆ ಆರ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ದೂರುಗಳ ಸುರಿಮಳೆಗೆ ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದೇನು?
ಮೈಸೂರು ಕೆ ಆರ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ದೂರುಗಳ ಸುರಿಮಳೆಗೆ ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದೇನು?
ಸಾಧು ಶ್ರೀನಾಥ್​
|

Updated on:May 24, 2021 | 4:10 PM

Share

ಮೈಸೂರು: ಕಳೆದ ವರ್ಷದಂತೆ ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಈ ಬಾರಿಯೂ ಪಿಪಿಇ‌ ಕಿಟ್ ಹಾಕಿಕೊಂಡು ಕೆ ಆರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆದರೆ ಅಲ್ಲಿ ಪರಿಸ್ಥಿತಿ ಕಳೆದ ವರ್ಷಕ್ಕಿಂತ ಭಿನ್ನವಾಗೇನೂ ಇಲ್ಲ. ರೋಗಿಗಳ ಪರದಾಟ ತಪ್ಪಿಲ್ಲ. ಸೋಂಕಿತರು, ರೋಗಿಗಳ ಸಂಬಂಧಿಕರು ಕೆ.ಆರ್.‌ಆಸ್ಪತ್ರೆಯ ಕೊರೊನಾ ವಾರ್ಡ್ ನಲ್ಲಿ ಕಣ್ಣಿಗೆ ರಾಚುತ್ತಿರುವ ಅವ್ಯವಸ್ಥೆಗಳ ಬಗ್ಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗಮನಕ್ಕೆ ತಂದಿದ್ದಾರೆ.

ಕೆ.ಆರ್.‌ಆಸ್ಪತ್ರೆಯ ಕೊರೊನಾ ವಾರ್ಡ್ ನಲ್ಲಿ ಮೆಡಿಸಿನ್ ಇಲ್ಲ, ವಾರ್ಡ್ ಗಳಲ್ಲಿ ಸ್ವಚ್ಚತೆ ಇಲ್ಲ, ಸೆಕ್ಯೂರಿಟಿಗಳು ಸೌಜನ್ಯವಾಗಿ ವರ್ತಿಸಲ್ಲ‌ ಎಂದು ದೂರುಗಳ ಸರಮಾಲೆ ಹೊದ್ದುಕೊಂಡು ಮಲಗಿರುವ ಸೋಂಕಿತರನ್ನು ಕಂಡು ಪಿಪಿಇ‌ ಕಿಟ್ ಧಾರಿ ಡಿಸಿ ರೋಹಿಣಿ ಸಿಂಧೂರಿ ಮೌನವಾದರು. ಬಳಿಕ ಸಾವರಿಸಿಕೊಂಡು ನಾನಿದ್ದೇನೆ, ತಕ್ಷಣವೇ ಕಂಪ್ಲೇಂಟ್ ಬಾಕ್ಸ್ ಆರಂಭಿಸಿ. ಪ್ರತಿ ರೋಗಿಯ ಸಂಬಂಧಿ ಅದರಲ್ಲಿ ದೂರು ದಾಖಲಿಸಿ ಎಂದು ಫರ್ಮಾನು ಹೊರಡಿಸಿದ್ದಾರೆ. ಜೊತೆಗೆ, ಎಲ್ಲ ದೂರನ್ನು ಪ್ರತಿ ದಿನ ಸಂಜೆ ವೇಳೆಗೆ ನಾನೇ ಪರಿಶೀಲಿಸುತ್ತೇನೆ ಎಂದು ಹೇಳುವ ಮೂಲಕ ಆಸ್ಪತ್ರೆ ಸಿಬ್ಬಂದಿಗೆ ಡಿಸಿ ಬಿಸಿ ಮುಟ್ಟಿಸಿದ್ದಾರೆ.

Mysuru DC rohini sindhuri wearing ppe kit visited covid care ward in kr hospital 1

ಮೈಸೂರು ಕೆ ಆರ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪಿಪಿಇ ಕಿಟ್​ ಧರಿಸಿ ಭೇಟಿ ನೀಡಿದ್ದರು

ಇದೇ ವೇಳೆ ಬ್ಲ್ಯಾಕ್ ಫ್ಹಂಗಸ್ ರೋಗಿಗಳ ಆರೋಗ್ಯ ವಿಚಾರಿಸಲು ಕೆ.ಆರ್.ಆಸ್ಪತ್ರೆಯ ಬ್ಲ್ಯಾಕ್ ಫ್ಹಂಗಸ್ ರೋಗಿಗಳ ವಿಭಾಗಕ್ಕೆ ಸಹ ಡಿಸಿ ರೋಹಿಣಿ ಸಿಂಧೂರಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

(Mysuru DC rohini sindhuri wearing ppe kit visited covid care ward in kr hospital)

Published On - 1:50 pm, Mon, 24 May 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ