AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಸನಪುರದಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡು ಹುಲಿ ಮೃತದೇಹ ಪತ್ತೆ

ವಿಶೇಷ ದಂತವನ್ನು ಹೊಂದಿದ್ದ ಆನೆ ಬಂಡೀಪುರ ವ್ಯಾಪ್ತಿಯ ಗುಂಡ ವಲಯದ ಅರಣ್ಯದಲ್ಲಿ ಶನಿವಾರ ಸಾವನ್ನಪ್ಪಿರುವಂತಹ ಘಟನೆ ಮೈಸೂರು ಜಿಲ್ಲೆ ಹೆಚ್​.ಡಿ ಕೋಟೆ ತಾಲ್ಲೂಕಿನ ಕಬಿನಿಯಲ್ಲಿ ನಡೆದಿದೆ.

ದಾಸನಪುರದಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡು ಹುಲಿ ಮೃತದೇಹ ಪತ್ತೆ
ಗಂಡು ಹುಲಿ ಮೃತದೇಹ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 12, 2022 | 7:01 AM

Share

ಮೈಸೂರು: ಸುಮಾರು 6 ರಿಂದ 7ವರ್ಷದ ಗಂಡು ಹುಲಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವಂತಹ ಘಟನೆ ಮೇಟಿಕುಪ್ಪೆ ಅರಣ್ಯ ಹೆಚ್​.ಡಿ ಕೋಟೆ ತಾಲ್ಲೂಕಿನ ವ್ಯಾಪ್ತಿಯ ದಾಸನಪುರದಲ್ಲಿ ನಡೆದಿದೆ. ಸ್ಥಳಕ್ಕೆ ಮೇಟಿಕುಪ್ಪೆ ಮತ್ತು ಅಂತರಸಂತೆ ವಲಯ ಅರಣ್ಯಾಧಿಕಾರಿಗಳ ತಂಡ ದೌಡಾಯಿಸಿ ಪರಿಶೀಲನೆ ಮಾಡಿದರು. ಹುಲಿಯ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಹುಲಿಯ ಮೃತದೇಹದ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Horoscope Today- ದಿನ ಭವಿಷ್ಯ; ಭಾನುವಾರ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

ವಿಶೇಷ ದಂತವನ್ನು ಹೊಂದಿದ್ದ ಆನೆ ಸಾವು

ವಿಶೇಷ ದಂತವನ್ನು ಹೊಂದಿದ್ದ ಆನೆ ಬಂಡೀಪುರ ವ್ಯಾಪ್ತಿಯ ಗುಂಡ ವಲಯದ ಅರಣ್ಯದಲ್ಲಿ ಶನಿವಾರ ಸಾವನ್ನಪ್ಪಿರುವಂತಹ ಘಟನೆ ಮೈಸೂರು ಜಿಲ್ಲೆ ಹೆಚ್​.ಡಿ ಕೋಟೆ ತಾಲ್ಲೂಕಿನ ಕಬಿನಿಯಲ್ಲಿ ನಡೆದಿದೆ. ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯ ಕಬಿನಿ ಹಿನ್ನೀರಿನಲ್ಲಿ ಆನೆ ಕಾಣ ಸಿಗುತ್ತಿತ್ತ. ಮಿಸ್ಟರ್ ಕಬಿನಿ ಖ್ಯಾತಿಯ ಭೋಗೇಶ್ವರ ಗಂಡಾನೆ ತನ್ನ ಉದ್ದನೆಯ ದಂತಗಳಿಂದಲೇ ಸಾಕಷ್ಟು ಪ್ರಖ್ಯಾತಿ ಗಳಿಸಿತ್ತು. ಅಲ್ಲದೆ, ವನ್ಯಜೀವಿ ಪ್ರಿಯರ ನೆಚ್ಚಿನ ಆನೆಯಾಗಿತ್ತು. ಸಫಾರಿ ವೇಳೆಯೂ ಆಗಾಗ ಆನೆ ಕಾಣಿಸಿ ಕೊಳ್ಳುತ್ತಿತ್ತು. ಅರಣ್ಯ ಇಲಾಖೆ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಿದರು.

ಸಾರಿಗೆ ಬಸ್ ಹಾಗೂ ಬೈಕ್ ಡಿಕ್ಕಿ, ಬೈಕ್​ ಸವಾರ ಸಾವು

ಚಿಕ್ಕೋಡಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ರಾಜಶೇಖರ ಪಾತ್ರೂಟ (34) ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾಜಶೇಖರ ಪಾತ್ರೂಟ ರಾಯಬಾಗ ತಾಲೂಕಿನ ದೇವಪುರಹಟ್ಟಿ ಗ್ರಾಮದ ನಿವಾಸಿ. ಮಹಾಲಿಂಗಪುರ ಪಟ್ಟಣದಿಂದ ದೇವಪೂರಹಟ್ಟಿ ಗ್ರಾಮಕ್ಕೆ ಬರುತ್ತಿದ್ದ. ಇಂಚಲಕರಂಜಿಯಿಂದ ಬಾಗಲಕೋಟ ಕಡೆಗೆ ಸಾರಿಗೆ ಬಸ್​ ಹೋಗುತ್ತಿತ್ತು. ಈ ವೇಳೆ ಕಪ್ಪಲಗುದ್ದಿ ಗ್ರಾಮ ಬಳಿ ಅಪಘಾತ ಸಂಭವಿಸಿದೆ. ಘಟನೆ ಕುರಿತು ಹಾರೂಗೇರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​