AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಪವರ್ ಕಮಿಟಿ ಸಭೆಯಲ್ಲಿ ದಸರಾ ಪ್ರಾಧಿಕಾರ ನಿರ್ಮಾಣದ ಬಗ್ಗೆ ತೀರ್ಮಾನ: ಸಿದ್ದರಾಮಯ್ಯ

ಮೈಸೂರು ದಸರಾಗಾಗಿ ಪ್ರತ್ಯೇಕ‌ ಪ್ರಾಧಿಕಾರ ರಚನೆ‌ ವಿಚಾರವಾಗಿ ಶೀಘ್ರದಲ್ಲೇ ಹೈಪವರ್ ಕಮಿಟಿ ಮೀಟಿಂಗ್ ಕರೆದು ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಹೈಪವರ್ ಕಮಿಟಿ ಸಭೆಯಲ್ಲಿ ದಸರಾ ಪ್ರಾಧಿಕಾರ ನಿರ್ಮಾಣದ ಬಗ್ಗೆ ತೀರ್ಮಾನ: ಸಿದ್ದರಾಮಯ್ಯ
ಹೈಪವರ್ ಕಮಿಟಿ ಸಭೆಯಲ್ಲಿ ದಸರಾ ಪ್ರಾಧಿಕಾರ ನಿರ್ಮಾಣದ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದ ಸಿದ್ದರಾಮಯ್ಯ
Rakesh Nayak Manchi
|

Updated on: Jun 10, 2023 | 9:53 PM

Share

ಮೈಸೂರು: ದಸರಾಗಾಗಿ ಪ್ರತ್ಯೇಕ‌ ಪ್ರಾಧಿಕಾರ ರಚನೆ‌ ವಿಚಾರವಾಗಿ ಶೀಘ್ರದಲ್ಲೇ ಹೈಪವರ್ ಕಮಿಟಿ ಮೀಟಿಂಗ್ ಕರೆದು ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ (Mysuru Dasara 2023) ಹಾಗೂ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಒಂದು ಪ್ರತ್ಯೇಕ ಪ್ರಧಿಕಾರ ರಚನೆ ಮಾಡುವ ಬೇಡಿಕೆ ಸರ್ಕಾರದ ಮುಂದಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಸದ್ಯ ನೂತನ ಸರ್ಕಾರ ಈ ಬಗ್ಗೆ ಚಿಂತನೆಗೆ ಮುಂದಾಗಿದ್ದು, ಸಭೆ ಕರೆದು ತೀರ್ಮಾನ ಕೈಗೊಳ್ಳಲಿದೆ.

ತಮಿಳುನಾಡಿಗೆ ಕೆಆರ್‌ಎಸ್ ನೀರು ಬಿಡುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ನಮಗೆ ಕುಡಿಯುವ ನೀರು ಹಾಗೂ ಬೆಳೆಗಳಿಗೆ ನೀರಿನ ಅವಶ್ಯಕತೆ ಇದೆ. ಅವರಿಗೆ ಬಿಡಬಾರದು ಅಂತ ಏನಿಲ್ಲ. ನಮ್ಮಲ್ಲಿ ನೀರು ಇದ್ದರೆ ತಾನೆ ಅವರಿಗೆ ನೀರು ಬಿಡುವುದು. ನಮ್ಮಲ್ಲಿ ಈಗ ಬಿಡಲು ನೀರಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: 100 ಯೂನಿಟ್ ಬಳಸುವವರಿಗೆ 200 ಯೂನಿಟ್ ವಿದ್ಯುತ್ ಉಚಿತ ಯಾಕೆ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಇದಕ್ಕೂ ಮುನ್ನ ಜಿಲ್ಲಾಪಂಚಾಯತ್​ನಲ್ಲಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆಯನ್ನು ನಡೆಸಿದರು. ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಬಗ್ಗೆ ನಿಮಗೆ ಗೊತ್ತಿದೆಯಾ? ನಾಳೆ ಯಾವ ಗ್ಯಾರಂಟಿ ಜಾರಿಯಾಗುತ್ತಿದೆ ಹೇಳಿ ಎಂದ ಸಿದ್ದರಾಮಯ್ಯ ಕೇಳಿದರು. ಇದೇ ವೇಳೆ ಕೆಎಸ್​​ಆರ್​​ಟಿಸಿ ಡಿಸಿ ಬಂದಿದ್ದಾರಾ ಎಂದು ಸಿಎಂ ಪ್ರಶ್ನೆ ಹಿಂದೆ ಕುಳಿತಿದ್ದ ಅವರನ್ನು ಕರೆದು ಶಕ್ತಿ ಯೋಜನೆ ಜಾರಿ ಕಾರ್ಯಕ್ರಮದ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಇದೇ ವೇಳೆ ಮುಡಾ ಆಯುಕ್ತರಿಗೂ ಕ್ಲಾಸ್ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ, ಚುನಾವಣೆಗೂ ಮುನ್ನ ಆಗಿರುವ ತೀರ್ಮಾನ ಇಂಪ್ಲಿಮೆಂಟ್ ಮಾಡಬೇಡಿ ಎಂದು ತಾಕೀತು ಮಾಡಿದರು. ಇದಕ್ಕೂ ಮುನ್ನ ಜಿಲ್ಲಾಧಿಕಾರಿಯವರು ಮಳೆ ಕೊರತೆ ಬಗ್ಗೆ ಸಿಎಂಗೆ ಮಾಹಿತಿ ನೀಡಿದರು. ಈ ವೇಳೆ, ಮಳೆ ಬಾರದಿದ್ದರೆ ಯಾವುದೇ ರೀತಿಯಲ್ಲೂ ಕುಡಿಯುವ ನೀರಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು ಮತ್ತು ಬೆಳೆ ಒಣಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ