AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮಹಿಷ ದಸರಾ ನಡೆಸಲು ತೀರ್ಮಾನ: ಸರ್ಕಾರದ ವಿರುದ್ಧ ಪ್ರತಾಪ್​ ಸಿಂಹ ಕೆಂಡಾಮಂಡಲ

‘ನಿಮಗೆ ಮಹಿಷಾಸುರನ ಮೇಲೆ ಭಕ್ತಿ ಇದ್ದರೆ, ನಿಮ್ಮ ಮನೆಯಲ್ಲಿ ಪೋಟೋ ಇಟ್ಟುಕೊಂಡು ನಿನ್ನ ತರಾ ಮಗನನ್ನು ದಯಪಾಲಿಸು ಎಂದು ಪೂಜೆ ಮಾಡಿ. ಆದರೆ, ಚಾಮುಂಡಿ ಬೆಟ್ಟದಲ್ಲಿ ಇದು ಸರಿ ಅಲ್ಲ. ಒಂದು ವೇಳೆ ಜಿಲ್ಲಾಡಳಿತ ಅವಕಾಶ ಕೊಟ್ಟರೆ, ನಾವು ಹೋಗಿ ಅಸಹ್ಯವನ್ನು ತಡೆಯುತ್ತೇವೆ ಎಂದು ಸಂಸದ ಪ್ರತಾಪ್​ ಸಿಂಹ ಕೆಂಡಾಮಂಡಲವಾಗಿದ್ದಾರೆ.

ಮೈಸೂರಿನಲ್ಲಿ ಮಹಿಷ ದಸರಾ ನಡೆಸಲು ತೀರ್ಮಾನ: ಸರ್ಕಾರದ ವಿರುದ್ಧ ಪ್ರತಾಪ್​ ಸಿಂಹ ಕೆಂಡಾಮಂಡಲ
ಪ್ರತಾಪ್​ ಸಿಂಹ
ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 08, 2023 | 2:51 PM

Share

ಮೈಸೂರು, ಸೆ.08: ಮಹಿಷ ದಸರಾ ಆಚರಣಾ ಸಮಿತಿಯವರು ಅಕ್ಟೋಬರ್​ 13 ರಂದು ಚಾಮುಂಡಿ ಬೆಟ್ಟ(Chamundi Betta) ದಲ್ಲಿ ಮಹಿಷಾ ದಸರಾ (Mahisha Dasara) ಆಚರಣೆಗೆ ತೀರ್ಮಾನ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಸದ ಪ್ರತಾಪ್​ ಸಿಂಹ ಅವರು ‘ ಮಹಿಷಾ ದಸರಾ ಒಂದು ಅನಾಚಾರ ಅಸಹ್ಯ ಅಬದ್ದ. ಇದು ಸಿದ್ದರಾಮಯ್ಯ ಸಿಎಂ ಆದಾಗ ಆರಂಭವಾಗಿತ್ತು. ಬಳಿಕ ನಮ್ಮ ಸರ್ಕಾರ ಬಂದಾಗ ಇದನ್ನು ನಿಲ್ಲಿಸಿದ್ದೆವು. ಅನಾಚಾರ ಮಾಡಲು ಅವಕಾಶ ಕೊಡಬೇಡಿ ಎಂದು ಜಿಲ್ಲಾಡಳಿತ, ಸರ್ಕಾರ ಹಾಗೂ ಪೊಲೀಸರಿಗೆ ಪ್ರತಾಪ್ ಸಿಂಹ ಅವರು ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ನಿಮಗೆ ಮಹಿಷಾಸುರನ ಮೇಲೆ ಭಕ್ತಿ ಇದ್ದರೆ, ನಿಮ್ಮ ಮನೆಯಲ್ಲಿ ಪೋಟೋ ಇಟ್ಟುಕೊಂಡು ನಿನ್ನ ತರಾ ಮಗನನ್ನು ದಯಪಾಲಿಸು ಎಂದು ಪೂಜೆ ಮಾಡಿ. ಆದರೆ, ಚಾಮುಂಡಿ ಬೆಟ್ಟದಲ್ಲಿ ಇದು ಸರಿ ಅಲ್ಲ. ಒಂದು ವೇಳೆ ಜಿಲ್ಲಾಡಳಿತ ಅವಕಾಶ ಕೊಟ್ಟರೆ, ನಾವು ಹೋಗಿ ಅಸಹ್ಯವನ್ನು ತಡೆಯುತ್ತೇವೆ. ಕಾನೂನು ಸಂಘರ್ಷಕ್ಕೆ ಅವಕಾಶ ಮಾಡಿಕೊಡಬೇಡಿ ನಾವು ಸಂಘರ್ಷಕ್ಕೂ ಸಿದ್ದರಾಗಿದ್ದೇವೆ ಎಂದರು.

ಇದನ್ನೂ ಓದಿ:ಪ್ರತಾಪ್ ಸಿಂಹನನ್ನು ಸೋಲಿಸಿ ಎಂದ ಸಿದ್ದರಾಮಯ್ಯ, ಮಹಿಷಾ ದಸರಾ ಆರಂಭ ಮಾಡಿ ಮೈಸೂರಿನ ಸ್ವಾಸ್ಥ್ಯ ಕೆಡಿಸಿದ್ದು ಯಾರು ಅಂತ ಹೇಳಲಿ- ಸಂಸದ ಪ್ರತಾಪ್​

ಈ ಅಸಹ್ಯ ಮಾಡುವ ಮನೆಯಲ್ಲಿ ಹೆಂಡತಿಯರು ಚಾಮುಂಡಿ ಭಕ್ತರಾಗಿರುತ್ತಾರೆ. ಇವರು ರಾಜಕಾರಣದ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ. ಮೈಸೂರಿಗರು ನಮ್ಮ ಹೋರಾಟಕ್ಕೆ‌ ಕೈ ಜೋಡಿಸಬೇಕು. ಆಷಾಢ ಮಾಸದಲ್ಲಿ ಲಕ್ಷಾಂತರ ಜನ ಬಂದು ಪೂಜೆ ಮಾಡುತ್ತಾರೆ. ನಮ್ಮ ತಾಯಿಗೆ ಅವಮಾನ ಆದರೆ ರೋಷ ಬರುತ್ತದೆ ಅಲ್ಲವಾ? ಅದೇ ರೀತಿ ಚಾಮುಂಡೇಶ್ವರಿ ನಮ್ಮ ತಾಯಿ, ಅವಳು ಬೇಕು ಬೇಡವನ್ನು ಕೊಟ್ಟಿದ್ದಾಳೆ. ಅವಳಿಗೆ ಅವಮಾನ ಆದರೆ ಯಾರು ಸಹಿಸಲ್ಲ. ಸಿದ್ದರಾಮಯ್ಯ ಬಂದ ಕೂಡಲೇ ಧರ್ಮ ವಿರೋಧಿಗಳಿಗೆ ಶಕ್ತಿ ಬರುತ್ತದೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್​ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಹೇಳಿಕೆಗೆ ಸಿಎಂ ಟ್ವೀಟ್​; ಸಂಸದ ಪ್ರತಾಪ್ ಸಿಂಹ ಕಿಡಿ

ಇನ್ನು ಇದೇ ವೇಳೆ ಪ್ರಧಾನಿ ಪ್ರಚೋದನಾಕಾರಿ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಟ್ವೀಟ್‌ ವಿಚಾರವಾಗಿ ‘ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಪ್ರಚೋದನಕಾರಿ ಅಲ್ವಾ? ಕಾಂಗ್ರೆಸ್ ನಾಯಕರ ಮನಸ್ಥಿತಿ ಮೊದಲಿನಿಂದಲೂ ಎಲ್ಲರಿಗೂ ಗೊತ್ತಿದೆ. ಜನರನ್ನು ಗ್ಯಾರಂಟಿ ಹೆಸರಲ್ಲಿ ಮರಳು ಮಾಡಿ ಅಧಿಕಾರಕ್ಕೆ ಬಂದವರು. ಕಾಂಗ್ರೆಸ್​ ನಾಯಕರಲ್ಲಿ ಸನಾತನ ವಿರೋಧಿ ಮನಸ್ಥಿತಿ ಇದೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರು ಕಾಂಗ್ರೆಸ್​ಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Fri, 8 September 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ