AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಥ ಎಳೆಯುವ ಸಂದರ್ಭದಲ್ಲಿ ಅಹಿತಕರ ಘಟನೆ; ನೂಕು ನುಗ್ಗಲಿಗೆ ಸಿಲುಕಿ ಕಾಲು ಕಳೆದುಕೊಂಡ ಭಕ್ತ

ನಂಜುಂಡೇಶ್ವರನ ದೇವಾಲಯದ ಬಳಿ ಮುಕ್ತಿ ಮಾರ್ಗದ ಸಮೀಪ ರಥ ಸ್ವಸ್ಥಾನ ಸೇರುವ ಸಂದರ್ಭದಲ್ಲಿ ಈ ಅಹಿತಕರ ಘಟನೆ ನಡೆದಿದೆ. ರಥ ಎಳೆಯುವ ಗುಂಪಿನಲ್ಲಿ ಸಿಲುಕಿ ಕಾಲು ಮುರಿತವಾಗಿದೆ ಎಂದು ಮೂಲಗಳು ತಿಳಿಸಿವೆ.

ರಥ ಎಳೆಯುವ ಸಂದರ್ಭದಲ್ಲಿ ಅಹಿತಕರ ಘಟನೆ; ನೂಕು ನುಗ್ಗಲಿಗೆ ಸಿಲುಕಿ ಕಾಲು ಕಳೆದುಕೊಂಡ ಭಕ್ತ
ಯೋಗೇಶ್(45)
TV9 Web
| Updated By: preethi shettigar|

Updated on:Mar 16, 2022 | 4:17 PM

Share

ಮೈಸೂರು: ರಥ ಎಳೆಯುವ ಸಂದರ್ಭದಲ್ಲಿ ನೂಕು ನುಗ್ಗಲಿಗೆ ಸಿಲುಕಿ ಭಕ್ತರೊಬ್ಬರ ಕಾಲು ಮುರಿತವಾದ ಘಟನೆ ಮೈಸೂರು ಜಿಲ್ಲೆಯ ನಂಜುಂಡೇಶ್ವರನ ದೇವಾಲಯದ(nanjundeshwara temple) ಬಳಿ ನಡೆದಿದೆ. ದಕ್ಷಿಣಕಾಶಿ ನಂಜನಗೂಡು ರಥ ಎಳೆಯುವ ಸಂದರ್ಭದಲ್ಲಿ ಅಹಿತಕರ ಘಟನೆ ನಡೆದಿದ್ದು, ದೊಡ್ಡ ರಥವನ್ನು(chariot) ಎಳೆಯುವ ವೇಳೆ ನೂಕು ನುಗ್ಗಲಿಗೆ ಸಿಲುಕಿ ಕಾಲು(Leg) ಮುರಿದುಹೋಗಿದೆ.  ನಂಜನಗೂಡು ಪಟ್ಟಣದ ಚಾಮಲಾಪುರದ ಹುಂಡಿ ಗ್ರಾಮದ ಯೋಗೇಶ್(45) ಎಂಬುವವರು ಕಾಲು ಮುರಿತವಾಗಿದೆ. ಸದ್ಯ ಗಾಯಾಳುವನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಂಜುಂಡೇಶ್ವರನ ದೇವಾಲಯದ ಬಳಿ ಮುಕ್ತಿ ಮಾರ್ಗದ ಸಮೀಪ ರಥ ಸ್ವಸ್ಥಾನ ಸೇರುವ ಸಂದರ್ಭದಲ್ಲಿ ಈ ಅಹಿತಕರ ಘಟನೆ ನಡೆದಿದೆ. ರಥ ಎಳೆಯುವ ಗುಂಪಿನಲ್ಲಿ ಸಿಲುಕಿ ಕಾಲು ಮುರಿತವಾಗಿದೆ ಎಂದು ಮೂಲಗಳು ತಿಳಿಸಿವೆ.

ಆನೇಕಲ್: ಬೆಂಗಳೂರು-ಕೃಷ್ಣಗಿರಿ ಹೆದ್ದಾರಿಯಲ್ಲಿ ದಂಪತಿ ಮೇಲೆ ಹರಿದ ಬಸ್, ಸ್ಥಳದಲ್ಲೇ ಮಹಿಳೆ ಸಾವು

ಬೈಕ್ ಮೇಲೆ ತೆರಳುತ್ತಿದ್ದ ದಂಪತಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದರೆ, ಗಾಯಗೊಂಡ ಗಂಡನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರು – ಕೃಷ್ಣಗಿರಿ ಹೈವೆಯಲ್ಲಿ ಘಟನೆ ನಡೆದಿದೆ. ಸರ್ವೀಸ್ ರೋಡ್ ನಲ್ಲಿ ಚಲಿಸುತ್ತಿದ್ದ ಬೈಕ್ ಗೆ ತಮಿಳುನಾಡು ಸಾರಿಗೆ ಇಲಾಖೆ ಬಸ್ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಮಹಿಳೆಯ ಶವ ದಾರಿಯಲ್ಲಿಯೇ ಬಹಳ ಹೊತ್ತು ಇತ್ತು. ಅಂಬುಲೆನ್ಸ್‌ ಸರಿಯಾದ ಸಮಯಕ್ಕೆ ಬರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರದಲ್ಲಿ ಕಿರುಕುಳಕ್ಕೆ ಬೇಸತ್ತು ಪಿಡಿಒ ಪತ್ನಿ ಆತ್ಮಹತ್ಯೆ? ಚಾಮರಾಜನಗರ: ಕಿರುಕುಳಕ್ಕೆ ಬೇಸತ್ತು ಪಿಡಿಒ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಆದ್ರೆ ಮೃತಳ ಪೋಷಕರು ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ಆರೋಪಿಸಿದ್ದಾರೆ. ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿರುವ ತಮ್ಮ ಅಳಿಯನೇ ಮಗಳ ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾ. ಬಾಗಲಕೋಟೆ ಜಿಲ್ಲೆ ಜಮಖಂಡಿ‌ ನಿವಾಸಿ. ಇವರಿಗೆ 3 ವರ್ಷದ ಹಿಂದೆ ಆನಂದ್ ಕಾಂಬ್ಳೆ ಜೊತೆ ವಿವಾಹವಾಗಿತ್ತು. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದ ನಿವಾಸಿಯಾಗಿರುವ ಆನಂದ್, ಪಿಡಿಒ ಆಗಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯತಿಯ ಪಿಡಿಒ ಆಗಿ ಕರ್ತವ್ಯ ನಿರ್ವಹಿಸ್ತಿದ್ದಾರೆ. ಇತ್ತೀಚೆಗೆ ಆನಂದ್ ತಮ್ಮ ಪತ್ನಿಗೆ ಕಿರುಕುಳ ನೀಡ್ತಿದ್ರಂತೆ. ಆಗಾಗ ಕುಡಿದು ಬಂದು ಕಿರುಕುಳ ನೀಡ್ತಿದ್ರಂತೆ. ಈ ವಿಚಾರವನ್ನ ವಿದ್ಯಾ ತಮ್ಮ ಮನೆಯವರಿಗೂ ಹೇಳಿದ್ದರಂತೆ. ಎರಡೂ ಮನೆಯವರು ಇಬ್ಬರಿಗೂ ಬುದ್ಧಿ ಹೇಳ್ತಿದ್ರೂ ಸಮಸ್ಯೆ ಬಗೆಹರಿದಿರಲಿಲ್ಲ. ಆದ್ರೆ, ಅದೇನಾಯ್ತೋ ಏನೋ ವಿದ್ಯಾ ಇದ್ದಕ್ಕಿದ್ದಂತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಆತ್ಮಹತ್ಯೆಯಲ್ಲ, ಕೊಲೆ ಅಂತಾ ವಿದ್ಯಾ ಪೋಷಕರು ಆರೋಪಿಸಿದ್ದಾರೆ.

ಇದನ್ನೂ ಓದಿ:

ಅಪಘಾತದ ಬಳಿಕ ಎಚ್ಚೆತ್ತ ಅಧಿಕಾರಿಗಳು; ರಸ್ತೆ ಗುಂಡಿ ಮುಚ್ಚುವ ಕೆಲಸ ಶುರು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗೌರವ್ ಗುಪ್ತಾ ಹೇಳಿಕೆ

2 ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ನಂಜನಗೂಡು ದೊಡ್ಡ ಜಾತ್ರೆ; ಪಂಚ ಮಹಾರಥೋತ್ಸವದಲ್ಲಿ ರಾರಾಜಿಸಿದ ಪುನೀತ್ ಭಾವಚಿತ್ರ

Published On - 4:16 pm, Wed, 16 March 22

ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​