AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾಮೀಜಿಗಳು ತಲೆಯ ಮೇಲೆ ಬಟ್ಟೆ ಹಾಕುವುದನ್ನು ಪ್ರಶ್ನಿಸಿದ್ದ ಸಿದ್ದರಾಮಯ್ಯರನ್ನ ಸಮರ್ಥಿಸಿಕೊಂಡ ಪುತ್ರ ಡಾ. ಯತೀಂದ್ರ

ಇದೀಗ ಸಿದ್ದರಾಮಯ್ಯ ಅವರ ಪುತ್ರ  ಯತೀಂದ್ರ ತಮ್ಮ ತಂದೆಯ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದುಪಟ್ಟಾವನ್ನು ಸ್ವಾಮೀಜಿಗಳ ಶಿರವಸ್ತ್ರಕ್ಕೆ ಹೋಲಿಕೆ ಮಾಡಿಲ್ಲ. ತಲೆ ಮೇಲೆ ಬಟ್ಟೆ ಹಾಕುವುದು ತಪ್ಪಲ್ಲ ಎಂದು ಹೇಳಿದ್ದಾರಷ್ಟೇ. ಸಿದ್ದರಾಮಯ್ಯ ಸ್ವಾಮೀಜಿಗಳಿಗೆ ಅಪಮಾನ ಮಾಡಿಲ್ಲ ಎಂದು ಹೇಳಿದ್ದಾರೆ.

ಸ್ವಾಮೀಜಿಗಳು ತಲೆಯ ಮೇಲೆ ಬಟ್ಟೆ ಹಾಕುವುದನ್ನು ಪ್ರಶ್ನಿಸಿದ್ದ ಸಿದ್ದರಾಮಯ್ಯರನ್ನ ಸಮರ್ಥಿಸಿಕೊಂಡ ಪುತ್ರ ಡಾ. ಯತೀಂದ್ರ
ಡಾ. ಯತೀಂದ್ರ
TV9 Web
| Edited By: |

Updated on:Mar 26, 2022 | 3:17 PM

Share

ಮೈಸೂರು: ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್(High court)​ ನೀಡಿರುವ ತೀರ್ಪಿಗೆ ವಿರುದ್ಧವಾಗಿ ನಿನ್ನೆ (ಮಾರ್ಚ್ 25) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಸ್ವಾಮೀಜಿಗಳು ತಲೆಯ ಮೇಲೆ ಪೇಟಾ ಹಾಕುವುದಿಲ್ಲವಾ? ಎಂದು ಮಾತಿನ ಭರದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಾತು ರಾಜ್ಯದಾದ್ಯಂತ ವಿವಾದ ಸೃಷ್ಟಿ ಮಾಡಿದ್ದು, ಇದೀಗ ಸಿದ್ದರಾಮಯ್ಯ (Siddaramaiah) ಅವರ ಪುತ್ರ ಡಾ. ಯತೀಂದ್ರ (Dr Yatindra) ತಮ್ಮ ತಂದೆಯ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದುಪಟ್ಟಾವನ್ನು ಸ್ವಾಮೀಜಿಗಳ ಶಿರವಸ್ತ್ರಕ್ಕೆ ಹೋಲಿಕೆ ಮಾಡಿಲ್ಲ. ತಲೆ ಮೇಲೆ ಬಟ್ಟೆ ಹಾಕುವುದು ತಪ್ಪಲ್ಲ ಎಂದು ಹೇಳಿದ್ದಾರಷ್ಟೇ. ಸಿದ್ದರಾಮಯ್ಯ ಸ್ವಾಮೀಜಿಗಳಿಗೆ ಅಪಮಾನ ಮಾಡಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹೇಳಿಕೆ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಹಿಜಾಬ್ ಇಲ್ಲದೆ ಪರೀಕ್ಷೆಗೆ ಬರುತ್ತಿಲ್ಲ. ಹಿಜಾಬ್ ಬದಲಿಗೆ ದುಪಟ್ಟಾಗೆ ಅವಕಾಶ ಕೇಳಿದ್ದಾರೆ. ಇದನ್ನು ವಿಧಾನಸಭೆಯಲ್ಲೂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದರು. ಇದರಲ್ಲಿ ತಪ್ಪೇನಿದೆ ಎಂದು ಕಾಂಗ್ರೆಸ್ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರಶ್ನೆ ಕೇಳಿದ್ದಾರೆ.

ಸ್ವಾಮೀಜಿಗಳ ಬಟ್ಟೆ ಹಿಜಾಬ್​ಗೆ  ಹೋಲಿಸಿದ ತಮ್ಮ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್​ ಮೂಲಕ ಸ್ಪಷ್ಟನೆ 

ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ವಿರೋಧಿಗಳು ದುರುದ್ದೇಶದಿಂದ ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕೆಲ ಶ್ರೀಗಳಿಗೆ ಇದು ಅರ್ಥವಾಗಿರುವ ಕಾರಣ ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ. ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಟ್ವೀಟ್​ ಮಾಡಿದ್ದಾರೆ.

ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಟ್ವೀಟ್​ ಮೂಲಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ:

ಹಿಜಾಬ್ ವಿಚಾರಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಹುಚ್ಚು ನಾಯಿಯಂತೆ ಕೂಗುತ್ತಿದೆ, ಸಿದ್ದರಾಮಯ್ಯ ತಕ್ಷಣ ರಾಜಕೀಯ ನಿವೃತ್ತಿ ಪಡೆಯಲಿ; ಸಚಿವ ಈಶ್ವರಪ್ಪ ಹೇಳಿಕೆ

ಸ್ವಾಮೀಜಿಗಳ ಬಟ್ಟೆ ಹಿಜಾಬ್​​ಗೆ ಹೋಲಿಸಿ ಹೇಳಿಕೆ ವಿಚಾರ: ಟ್ವೀಟ್​ ಮಾಡಿ, ಅಪಪ್ರಚಾರವೆಂದ ವಿಪಕ್ಷ ನಾಯಕ ಸಿದ್ದರಾಮಯ್ಯ!

Published On - 3:10 pm, Sat, 26 March 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ