AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕುಡಿದ ಮತ್ತಿನಲ್ಲಿ ಅರ್ಧಕ್ಕೆ ಆ್ಯಂಬುಲೆನ್ಸ್ ನಿಲ್ಲಿಸಿದ ಚಾಲಕ; ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟ ಸ್ಥಳೀಯರು

ರೋಗಿ ಕರೆದುಕೊಂಡು ಬರುತ್ತಿದ್ದ ಆ್ಯಂಬುಲೆನ್ಸ್ ಚಾಲಕ ಮಧ್ಯೆ ಮಧ್ಯೆ ಆ್ಯಂಬುಲೆನ್ಸ್ ನಿಲ್ಲಿಸುತ್ತಿದ್ದು, ಅಲ್ಲಲ್ಲಿ ಕುಡಿದಿದ್ದಾನೆ ಎಂದು ಆ್ಯಂಬುಲೆನ್ಸ್​ನಲ್ಲಿದ ರೋಗಿಯ ಪೋಷಕರು ತಿಳಿಸಿದ್ದಾರೆ. ಹುಣಸೂರು ಬಳಿ ಮುಂದೆ ಹೋಗಲು ಸಾಧ್ಯವಿಲ್ಲ ಎಂದು ಚಾಲಕ ನಿಲ್ಲಿಸಿದ್ದು, ಇದನ್ನು ಕಂಡ  ಸ್ಥಳೀಯರು ತಕ್ಷಣ ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಮೈಸೂರು: ಕುಡಿದ ಮತ್ತಿನಲ್ಲಿ ಅರ್ಧಕ್ಕೆ ಆ್ಯಂಬುಲೆನ್ಸ್ ನಿಲ್ಲಿಸಿದ ಚಾಲಕ; ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟ ಸ್ಥಳೀಯರು
ಆ್ಯಂಬುಲೆನ್ಸ್ ಚಾಲಕ
TV9 Web
| Updated By: preethi shettigar|

Updated on:Dec 26, 2021 | 9:16 AM

Share

ಮೈಸೂರು: ಕುಡಿದ ಮತ್ತಿನಲ್ಲಿ ಚಾಲಕ ಅರ್ಧಕ್ಕೆ ಆ್ಯಂಬುಲೆನ್ಸ್(Ambulance) ನಿಲ್ಲಿಸಿದ ಘಟನೆ ಮೈಸೂರಿನ ಹುಣಸೂರು ನಗರದಲ್ಲಿ ನಡೆದಿದೆ. ಹಾಸನದ ಸಿದ್ದಾಪುರ ಗ್ರಾಮದ ತೀರ್ಥನಂದ (30) ಮನೆಯಲ್ಲಿ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ಹೀಗಾಗಿ ಮಡಿಕೆರಿ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಹೋಗಿದ್ದರು. ಈ ವೇಳೆ ತೀರ್ಥನಂದರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂಬ ವಿಷಯ ತಿಳಿದಿದೆ. ಹೀಗಾಗಿ ಬೆಂಗಳೂರು ನಿಮ್ಹಾನ್ಸ್​ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಅಲ್ಲಿನ ವೈದ್ಯರು (Doctor) ಸೂಚಿಸಿದ್ದಾರೆ. ಅದರಂತೆ ಮಡಿಕೇರಿಯಿಂದ ಬೆಂಗಳೂರಿಗೆ ಆ್ಯಂಬುಲೆನ್ಸ್​ನಲ್ಲಿ ತೆರಳುತ್ತಿದ್ದರು. ಆದರೆ ಆ್ಯಂಬುಲೆನ್ಸ್ ಚಾಲಕ ಕುಡಿದು ದಾರಿಯಲ್ಲಿಯೇ ಮಧ್ಯ ನಿಲ್ಲಿಸಿದ್ದಾನೆ.

ರೋಗಿ ಕರೆದುಕೊಂಡು ಬರುತ್ತಿದ್ದ ಆ್ಯಂಬುಲೆನ್ಸ್ ಚಾಲಕ ಮಧ್ಯೆ ಮಧ್ಯೆ ಆ್ಯಂಬುಲೆನ್ಸ್ ನಿಲ್ಲಿಸುತ್ತಿದ್ದು, ಅಲ್ಲಲ್ಲಿ ಕುಡಿದಿದ್ದಾನೆ ಎಂದು ಆ್ಯಂಬುಲೆನ್ಸ್​ನಲ್ಲಿದ ರೋಗಿಯ ಪೋಷಕರು ತಿಳಿಸಿದ್ದಾರೆ. ಹುಣಸೂರು ಬಳಿ ಮುಂದೆ ಹೋಗಲು ಸಾಧ್ಯವಿಲ್ಲ ಎಂದು ಚಾಲಕ ನಿಲ್ಲಿಸಿದ್ದು, ಇದನ್ನು ಕಂಡ  ಸ್ಥಳೀಯರು ತಕ್ಷಣ ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಸದ್ಯ ರೋಗಿಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಗೆ ರೋಗಿಯ ಪೋಷಕರು ಕರೆ ಮಾಡಿದ್ದರು. ಆದರೆ ಪೊಲೀಸರಿಗೆ ದೂರು ನೀಡಿದರು ಯಾವುದೇ ಕ್ರಮಕೈಗೊಂಡಿಲ್ಲ. ಸರಿಯಾಗಿ ಸ್ಪಂದಿಸದ ಪೊಲೀಸರ ವಿರುದ್ಧ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದು, ಆ್ಯಂಬುಲೆನ್ಸ್ ಚಾಲಕನಿಗೆ ಮೆಡಿಕಲ್ ಮಾಡಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಾಗರದಲ್ಲಿ ಸೂಕ್ತ ಆ್ಯಂಬುಲೆನ್ಸ್ ಇಲ್ಲದೆ ತುಂಬು ಗರ್ಭಿಣಿ, ಗಾಯಾಳುಗಳು ಪರದಾಟ

ರಾಯಚೂರಿನಲ್ಲಿ ವಾಹನಕ್ಕೆ ಸೈಡ್ ನೀಡದ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ! ನಾಲ್ವರ ವಿರುದ್ಧ ಎಫ್ಐಆರ್ ದಾಖಲು

Published On - 8:16 am, Sun, 26 December 21

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!