ರೋಗಿ ಕರೆದುಕೊಂಡು ಬರುತ್ತಿದ್ದ ಆ್ಯಂಬುಲೆನ್ಸ್ ಚಾಲಕ ಮಧ್ಯೆ ಮಧ್ಯೆ ಆ್ಯಂಬುಲೆನ್ಸ್ ನಿಲ್ಲಿಸುತ್ತಿದ್ದು, ಅಲ್ಲಲ್ಲಿ ಕುಡಿದಿದ್ದಾನೆ ಎಂದು ಆ್ಯಂಬುಲೆನ್ಸ್ನಲ್ಲಿದ ರೋಗಿಯ ಪೋಷಕರು ತಿಳಿಸಿದ್ದಾರೆ. ಹುಣಸೂರು ಬಳಿ ಮುಂದೆ ಹೋಗಲು ಸಾಧ್ಯವಿಲ್ಲ ಎಂದು ಚಾಲಕ ನಿಲ್ಲಿಸಿದ್ದು, ಇದನ್ನು ಕಂಡ ಸ್ಥಳೀಯರು ತಕ್ಷಣ ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
ಸದ್ಯ ರೋಗಿಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಗೆ ರೋಗಿಯ ಪೋಷಕರು ಕರೆ ಮಾಡಿದ್ದರು. ಆದರೆ ಪೊಲೀಸರಿಗೆ ದೂರು ನೀಡಿದರು ಯಾವುದೇ ಕ್ರಮಕೈಗೊಂಡಿಲ್ಲ. ಸರಿಯಾಗಿ ಸ್ಪಂದಿಸದ ಪೊಲೀಸರ ವಿರುದ್ಧ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದು, ಆ್ಯಂಬುಲೆನ್ಸ್ ಚಾಲಕನಿಗೆ ಮೆಡಿಕಲ್ ಮಾಡಿಸುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ:
ಸಾಗರದಲ್ಲಿ ಸೂಕ್ತ ಆ್ಯಂಬುಲೆನ್ಸ್ ಇಲ್ಲದೆ ತುಂಬು ಗರ್ಭಿಣಿ, ಗಾಯಾಳುಗಳು ಪರದಾಟ
ರಾಯಚೂರಿನಲ್ಲಿ ವಾಹನಕ್ಕೆ ಸೈಡ್ ನೀಡದ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ! ನಾಲ್ವರ ವಿರುದ್ಧ ಎಫ್ಐಆರ್ ದಾಖಲು