AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕುಡಿದ ಮತ್ತಿನಲ್ಲಿ ಅರ್ಧಕ್ಕೆ ಆ್ಯಂಬುಲೆನ್ಸ್ ನಿಲ್ಲಿಸಿದ ಚಾಲಕ; ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟ ಸ್ಥಳೀಯರು

ರೋಗಿ ಕರೆದುಕೊಂಡು ಬರುತ್ತಿದ್ದ ಆ್ಯಂಬುಲೆನ್ಸ್ ಚಾಲಕ ಮಧ್ಯೆ ಮಧ್ಯೆ ಆ್ಯಂಬುಲೆನ್ಸ್ ನಿಲ್ಲಿಸುತ್ತಿದ್ದು, ಅಲ್ಲಲ್ಲಿ ಕುಡಿದಿದ್ದಾನೆ ಎಂದು ಆ್ಯಂಬುಲೆನ್ಸ್​ನಲ್ಲಿದ ರೋಗಿಯ ಪೋಷಕರು ತಿಳಿಸಿದ್ದಾರೆ. ಹುಣಸೂರು ಬಳಿ ಮುಂದೆ ಹೋಗಲು ಸಾಧ್ಯವಿಲ್ಲ ಎಂದು ಚಾಲಕ ನಿಲ್ಲಿಸಿದ್ದು, ಇದನ್ನು ಕಂಡ  ಸ್ಥಳೀಯರು ತಕ್ಷಣ ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಮೈಸೂರು: ಕುಡಿದ ಮತ್ತಿನಲ್ಲಿ ಅರ್ಧಕ್ಕೆ ಆ್ಯಂಬುಲೆನ್ಸ್ ನಿಲ್ಲಿಸಿದ ಚಾಲಕ; ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟ ಸ್ಥಳೀಯರು
ಆ್ಯಂಬುಲೆನ್ಸ್ ಚಾಲಕ
TV9 Web
| Edited By: |

Updated on:Dec 26, 2021 | 9:16 AM

Share

ಮೈಸೂರು: ಕುಡಿದ ಮತ್ತಿನಲ್ಲಿ ಚಾಲಕ ಅರ್ಧಕ್ಕೆ ಆ್ಯಂಬುಲೆನ್ಸ್(Ambulance) ನಿಲ್ಲಿಸಿದ ಘಟನೆ ಮೈಸೂರಿನ ಹುಣಸೂರು ನಗರದಲ್ಲಿ ನಡೆದಿದೆ. ಹಾಸನದ ಸಿದ್ದಾಪುರ ಗ್ರಾಮದ ತೀರ್ಥನಂದ (30) ಮನೆಯಲ್ಲಿ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ಹೀಗಾಗಿ ಮಡಿಕೆರಿ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಹೋಗಿದ್ದರು. ಈ ವೇಳೆ ತೀರ್ಥನಂದರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂಬ ವಿಷಯ ತಿಳಿದಿದೆ. ಹೀಗಾಗಿ ಬೆಂಗಳೂರು ನಿಮ್ಹಾನ್ಸ್​ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಅಲ್ಲಿನ ವೈದ್ಯರು (Doctor) ಸೂಚಿಸಿದ್ದಾರೆ. ಅದರಂತೆ ಮಡಿಕೇರಿಯಿಂದ ಬೆಂಗಳೂರಿಗೆ ಆ್ಯಂಬುಲೆನ್ಸ್​ನಲ್ಲಿ ತೆರಳುತ್ತಿದ್ದರು. ಆದರೆ ಆ್ಯಂಬುಲೆನ್ಸ್ ಚಾಲಕ ಕುಡಿದು ದಾರಿಯಲ್ಲಿಯೇ ಮಧ್ಯ ನಿಲ್ಲಿಸಿದ್ದಾನೆ.

ರೋಗಿ ಕರೆದುಕೊಂಡು ಬರುತ್ತಿದ್ದ ಆ್ಯಂಬುಲೆನ್ಸ್ ಚಾಲಕ ಮಧ್ಯೆ ಮಧ್ಯೆ ಆ್ಯಂಬುಲೆನ್ಸ್ ನಿಲ್ಲಿಸುತ್ತಿದ್ದು, ಅಲ್ಲಲ್ಲಿ ಕುಡಿದಿದ್ದಾನೆ ಎಂದು ಆ್ಯಂಬುಲೆನ್ಸ್​ನಲ್ಲಿದ ರೋಗಿಯ ಪೋಷಕರು ತಿಳಿಸಿದ್ದಾರೆ. ಹುಣಸೂರು ಬಳಿ ಮುಂದೆ ಹೋಗಲು ಸಾಧ್ಯವಿಲ್ಲ ಎಂದು ಚಾಲಕ ನಿಲ್ಲಿಸಿದ್ದು, ಇದನ್ನು ಕಂಡ  ಸ್ಥಳೀಯರು ತಕ್ಷಣ ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಸದ್ಯ ರೋಗಿಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಗೆ ರೋಗಿಯ ಪೋಷಕರು ಕರೆ ಮಾಡಿದ್ದರು. ಆದರೆ ಪೊಲೀಸರಿಗೆ ದೂರು ನೀಡಿದರು ಯಾವುದೇ ಕ್ರಮಕೈಗೊಂಡಿಲ್ಲ. ಸರಿಯಾಗಿ ಸ್ಪಂದಿಸದ ಪೊಲೀಸರ ವಿರುದ್ಧ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದು, ಆ್ಯಂಬುಲೆನ್ಸ್ ಚಾಲಕನಿಗೆ ಮೆಡಿಕಲ್ ಮಾಡಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಾಗರದಲ್ಲಿ ಸೂಕ್ತ ಆ್ಯಂಬುಲೆನ್ಸ್ ಇಲ್ಲದೆ ತುಂಬು ಗರ್ಭಿಣಿ, ಗಾಯಾಳುಗಳು ಪರದಾಟ

ರಾಯಚೂರಿನಲ್ಲಿ ವಾಹನಕ್ಕೆ ಸೈಡ್ ನೀಡದ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ! ನಾಲ್ವರ ವಿರುದ್ಧ ಎಫ್ಐಆರ್ ದಾಖಲು

Published On - 8:16 am, Sun, 26 December 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?