AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ಮೀನುಗಳು, ಬಾತುಕೋಳಿಗಳ ಸಾವು; ವಿಷಯುಕ್ತ ಮೇವು ಸೇವಿಸಿ 60 ಕುರಿಗಳು ಮೃತ

ಮೈಸೂರಿನ ಆಲನಹಳ್ಳಿ ಹೊರವಲಯದ ತಿಪ್ಪಯ್ಯನ ಕೆರೆಗೆ ಯುಜಿಡಿ ನೀರು ಸೇರುತ್ತಿದೆ ಎಂದು ಆರೋಪಿಸುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ.

ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ಮೀನುಗಳು, ಬಾತುಕೋಳಿಗಳ ಸಾವು; ವಿಷಯುಕ್ತ ಮೇವು ಸೇವಿಸಿ 60 ಕುರಿಗಳು ಮೃತ
ಸಾವನ್ನಪ್ಪಿರುವ ಕುರಿಗಳು
TV9 Web
| Edited By: sandhya thejappa|

Updated on:Mar 31, 2022 | 9:21 AM

Share

ಮೈಸೂರು: ತಿಪ್ಪಯ್ಯನ ಕೆರೆಯಲ್ಲಿ ಮೀನುಗಳು (Fishes) ಮತ್ತು ಬಾತುಕೋಳಿಗಳು (Ducks) ಸಾವನ್ನಪ್ಪಿದ್ದು, ಕೆರೆಯಲ್ಲಿ ನೀರು ಕಲುಷಿತವಾಗಿದ್ದರಿಂದ ಮೃತಪಟ್ಟಿವೆ ಎಂಬ ಆರೋಪ ಕೇಳಿಬಂದಿದೆ. ಮೈಸೂರಿನ ಆಲನಹಳ್ಳಿ ಹೊರವಲಯದ ತಿಪ್ಪಯ್ಯನ ಕೆರೆಗೆ ಯುಜಿಡಿ ನೀರು ಸೇರುತ್ತಿದೆ ಎಂದು ಆರೋಪಿಸುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ. ಕೆರೆ ಮೈಸೂರಿನ ಮೃಗಾಲಯ ನಿರ್ವಹಣೆಯಲ್ಲಿದೆ. ಸದ್ಯ ಸ್ಥಳಕ್ಕೆ ಮೃಗಾಲಯದ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವಿಷಯುಕ್ತ ಮೇವು ಸೇವಿಸಿ 60 ಕುರಿಗಳು ಸಾವು: ಮೈಸೂರಿನ ಕೆಆರ್ ನಗರ ತಾಲೂಕಿನ ಬಸವಾಪಟ್ಟಣದಲ್ಲಿ ವಿಷಯುಕ್ತ ಮೇವು ಸೇವಿಸಿ ಸುಮಾರು 60 ಕುರಿಗಳು ಸಾವನ್ನಪ್ಪಿವೆ. ರೈತ ಸಿದ್ದೇಗೌಡ, ಹೆಳವೇಗೌಡರಿಗೆ ಸೇರಿದ ಕುರಿಗಳು ಮೃತಪಟ್ಟಿವೆ. ರೈತರು ಮೂಲತಃ ಮಂಡ್ಯ ಜಿಲ್ಲೆಯವರು. 200 ಕುರಿಗಳನ್ನು ಮೇಯಿಸಲು ಕರೆ ತಂದಿದ್ದರು. ಈ ವೇಳೆ ಸುಮಾರು 60 ಕುರಿಗಳು ಸಾವನ್ನಪ್ಪಿದ್ದು, ಕುರಿಗಳ ಸಾವಿನಿಂದ ಸುಮಾರ 15 ಲಕ್ಷ ನಷ್ಟವಾಗಿದೆ. ಪರಿಹಾರ ನೀಡುವಂತೆ ರೈತರು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ.

ಲಾರಿ ಡಿಕ್ಕಿ, ಚಾಲಕ ಸಾವು: ಚಿತ್ರದುರ್ಗ: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ತಮಿಳುನಾಡು ಮೂಲದ ಲಾರಿ ಚಾಲಕ ಕವಿಅರಸನ್(44) ಮೃತ ವ್ಯಕ್ತಿ. ಮತ್ತೋರ್ವ ಚಾಲಕನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಸಾರಿ ಕೇಳುವುದರಿಂದ ನಮ್ಮ ವ್ಯಕ್ತಿತ್ವ ಕಡಿಮೆಯಾಗುತ್ತಾ..! ಹಾಗಾದ್ರೆ ಈ ವಿಡಿಯೋ ನೋಡಿ

ಇನ್ಫ್ರಾ ಮ್ಯೂಚುವಲ್ ಫಂಡ್​ಗಳಲ್ಲಿ ಹೂಡಿಕೆ ಮಾಡಿ, ಲಾಭ ಗಳಿಸೋದು ಹೇಗೆ..! ಇಲ್ಲಿದೆ ಮಾಹಿತಿ

Published On - 9:09 am, Thu, 31 March 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ