AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಮಳೆ ಅವಾಂತರ: ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ 8 ರೈಲುಗಳ ಸಂಚಾರ ರದ್ದು

ಮೈಸೂರು ಬೆಂಗಳೂರು ನಡುವಿನ ರೈಲ್ವೇ ಸಂಚಾರ ರದ್ದು ಮಾಡಿ ನೈಋತ್ಯ ರೈಲ್ವೆ ಮೈಸೂರು ವಿಭಾಗ ಮಾಧ್ಯಮ ಪ್ರಕಟನೆ ಹೊರಡಿಸಿದೆ. ಸೇತುವೆ ಸಂಖ್ಯೆ 627 ಮದ್ದುರು ಹನ್ನಕೆರೆ ನಡುವೆ ಪ್ರವಾಹದ ಹಿನ್ನಲೆ ಮೈಸೂರಿನಿಂದ ಬೆಂಗಳೂರು ಮುಖ್ಯ ನಿಲ್ದಾಣಕ್ಕೆ ಬರುವ 8 ರೈಲುಗಳನ್ನು ರದ್ದು ಮಾಡಲಾಗಿದೆ.

ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಮಳೆ ಅವಾಂತರ: ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ 8 ರೈಲುಗಳ ಸಂಚಾರ ರದ್ದು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 03, 2022 | 10:11 PM

Share

ಮೈಸೂರು: ರಾಜ್ಯದಲ್ಲಿ ವರುಣನ(Karnataka Rains) ಅಬ್ಬರ ಮುಂದುವರಿದಿದೆ. ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗ್ತಿದ್ದು ಗುಡ್ಡ ಕುಸಿತ ಸಂಭವಿಸುತ್ತಿದೆ. ರಸ್ತೆ, ಮನೆಗಳು, ಕೃಷಿ ಭೂಮಿ ಜಲಾವೃತವಾಗಿದೆ. ನದಿಗಳೆಲ್ಲಾ ಉಕ್ಕಿ ಹರಿಯುತ್ತಿದೆ. ಸೇತುವೆಗಳು ಮುಳುಗಿ ಹೋಗಿವೆ. ಅನಾಹುತಗಳು ಸಂಭವಿಸುತ್ತಿವೆ. ಜೊತೆಗೆ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಮಳೆಯ ಅವಾಂತರ ಹಿನ್ನಲೆ ಮೈಸೂರು ಬೆಂಗಳೂರು ನಡುವಿನ ರೈಲ್ವೇ ಸಂಚಾರ ರದ್ದು ಮಾಡಲಾಗಿದೆ.

ಮೈಸೂರು ಬೆಂಗಳೂರು ನಡುವಿನ ರೈಲ್ವೇ ಸಂಚಾರ ರದ್ದು ಮಾಡಿ ನೈಋತ್ಯ ರೈಲ್ವೆ ಮೈಸೂರು ವಿಭಾಗ ಮಾಧ್ಯಮ ಪ್ರಕಟನೆ ಹೊರಡಿಸಿದೆ. ಸೇತುವೆ ಸಂಖ್ಯೆ 627 ಮದ್ದುರು ಹನ್ನಕೆರೆ ನಡುವೆ ಪ್ರವಾಹದ ಹಿನ್ನಲೆ ಮೈಸೂರಿನಿಂದ ಬೆಂಗಳೂರು ಮುಖ್ಯ ನಿಲ್ದಾಣಕ್ಕೆ ಬರುವ 8 ರೈಲುಗಳನ್ನು ರದ್ದು ಮಾಡಲಾಗಿದೆ.

  1. ಮೆಮು ರೈಲ್ವೇ ಸಂಖ್ಯೆ 06525 ಬೆಂಗಳೂರು ದಿಂದ ಮೈಸೂರು ಸಂರ್ಪೂಣ ರದ್ದು
  2. ಮೆಮು ರೈಲ್ವೇ ಸಂಖ್ಯೆ 06526 ಮೈಸೂರು ದಿಂದ ಬೆಂಗಳೂರು ಸಂರ್ಪೂಣ ರದ್ದು
  3. ಮೆಮು ರೈಲ್ವೇ ಸಂಖ್ಯೆ 06255 ಬೆಂಗಳೂರು ದಿಂದ ಮೈಸೂರು ಸಂರ್ಪೂಣ ರದ್ದು
  4.  ರೈಲ್ವೇ ಸಂಖ್ಯೆ 07328 ಚಾಮರಾಜನಗರ ದಿಂದ ಮೈಸೂರು ಸಂರ್ಪೂಣ ರದ್ದು
  5. ರೈಲ್ವೇ ಸಂಖ್ಯೆ ಮೈಸೂರುನಿಂದ ಎಸ್ ಎಂ ವಿ ಬೈಯಪನಹಳ್ಳಿ ಎಕ್ಸ್ ಪ್ರಸ್ ರೈಲ್ವೆ ರದ್ದು
  6. ರೈಲ್ವೇ ಸಂಖ್ಯೆ ಎಸ್ ಎಂ ವಿ ಬೈಯಪನಹಳ್ಳಿ ನಿಂದ ಮೈಸೂರು ಎಕ್ಸ್ ಪ್ರಸ್ ರೈಲ್ವೆ ರದ್ದು
  7. ರೈಲ್ವೇ ಸಂಖ್ಯೆ 06560 ಮೈಸೂರು ನಿಂದ ಬೆಂಗಳೂರು ಸಂರ್ಪೂಣ ರದ್ದು
  8. ಮೆಮು ರೈಲ್ವೇ ಸಂಖ್ಯೆ 06255 ಬೆಂಗಳೂರು ನಿಂದ ಮೈಸೂರು ಸಂರ್ಪೂಣ ರದ್ದು

ಇನ್ನು ರೈಲ್ವೇ ಸಂಖ್ಯೆ 07346 ತುಮಕೂರು ದಿಂದ ಚಾಮರಾಜನಗರ ಪ್ಯಾಸೇಂಜರ್ ಕೂಡ ರದ್ದು ಮಾಡಲಾಗಿದೆ. ರೈಲ್ವೇ ಸಂಖ್ಯೆ 07346 ರಾಮನಗರದಿಂದ ಚಾಮರಾಜನಗರ ಪ್ಯಾಸೇಂಜರ್ ರೈಲು ರದ್ದಾಗಿದ್ದು ರೈಲ್ವೇ ಸಂಖ್ಯೆ 16227 ಮೈಸೂರು ದಿಂದ ತಾಳಗುಪ್ಪ ಎಕ್ಸ್ ಪ್ರಸ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದೆ.

ಮಂಡ್ಯದಲ್ಲೂ ರೈಲು ಸಂಚಾರ ಸ್ಥಗಿತ

ಇನ್ನು ಮತ್ತೊಂದೆಡೆ ಮಂಡ್ಯದಲ್ಲಿ ಭಾರಿ ಮಳೆ ಹಿನ್ನಲೆ ಬೆಳಿಗ್ಗೆಯಿಂದ ಸುಮಾರು 10 ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಬಹುತೇಕ ಮೆಮೂ ಹಾಗೂ ಪ್ಯಾಸೆಂಜರ್ ರೈಲು ಸಂಚಾರ ಸ್ಥಗಿತಗೊಂಡಿದೆ. ಉಳಿದಂತೆ ಕೆಲವು ರೈಲುಗಳ ಸಂಚಾರದಲ್ಲಿ ಸಮಯ ವ್ಯತ್ಯಾಸ ಕಂಡು ಬಂದಿದೆ. ಮದ್ದೂರು ಹಾಗೂ ಹನ್ನಕೆರೆ ಬಳಿಯ 627 ನೇ ಬ್ರಿಡ್ಜ್ ನಲ್ಲಿ ಡೆಂಜರ್ ಜೋನ್ ನಲ್ಲಿ ನೀರು ಹರಿಯುತ್ತಿದೆ. ಈ ಕಾರಣದಿಂದ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ನಾಳೆ ಪರಿಸ್ಥಿತಿ ನೋಡಿಕೊಂಡು ರೈಲು ಸಂಚಾರ ಆರಂಭಿಸಲಾಗುವುದು. ಈಗಾಗಲೇ ಮಂಡ್ಯ ಮದ್ದೂರು ರಾಷ್ಟ್ರೀಯ ಹೆದ್ದಾರಿ ಕೂಡ ಸಂಚಾರ ಬಂದ್ ಆಗಿದೆ. ಬದಲಿ ಮಾರ್ಗದ ಮೂಲಕ ಸಂಚಾರ ಮಾಡಲು ವ್ಯವಸ್ಥೆ ಮಾಡಲಾಗಿದೆ.

Published On - 10:02 pm, Wed, 3 August 22

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?