AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

E Shram Card: ದೇಶದಲ್ಲೇ ಮೊದಲ ಬಾರಿಗೆ ಮೈಸೂರಿನಲ್ಲಿ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ವಿತರಣೆ

ತೃತೀಯಲಿಂಗಿಗಳ ಸಂಘದ ಮುಖ್ಯಸ್ಥರಾದ ಪ್ರಣತಿ ಪ್ರಕಾಶ್ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಮಂದಿ ತೃತೀಯ ಲಿಂಗಿಗಳಿಗೆ ಒಂದು ದಿನದ ಅಭಿಯಾನದ ಮೂಲಕ ಇ-ಶ್ರಮ್ ಕಾರ್ಡ್ ನೊಂದಣಿ ಕಾರ್ಯ ನಡೆದಿದೆ.

E Shram Card: ದೇಶದಲ್ಲೇ ಮೊದಲ ಬಾರಿಗೆ ಮೈಸೂರಿನಲ್ಲಿ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ವಿತರಣೆ
ದೇಶದಲ್ಲೇ ಮೊದಲ ಬಾರಿಗೆ ಮೈಸೂರಿನಲ್ಲಿ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ವಿತರಣೆ
TV9 Web
| Edited By: |

Updated on: Dec 24, 2021 | 11:52 AM

Share

ಮೈಸೂರು: ದೇಶದಲ್ಲೇ ಮೊದಲ ಬಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಸರಸ್ವತಿಪುರಂನ ತೃತೀಯ ಲಿಂಗಿಗಳ ಕಚೇರಿಯ ಆವರಣದಲ್ಲಿ ತೃತೀಯ ಲಿಂಗಿಗಳಿಗೆ ಇ ಶ್ರಮ್ ಕಾರ್ಡ್ ವಿತರಣೆ ಮಾಡಲಾಗಿದೆ.

ಕೇಂದ್ರ ಕಾರ್ಮಿಕ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಟ್ವಿನ್ಸ್ ಸಿಎಸ್‌ಸಿ ಡಿಜಿಟಲ್ ಸೇವಾ ಕೇಂದ್ರದಿಂದ ತೃತೀಯ ಲಿಂಗಿಗಳಿಗೆ ಇ ಶ್ರಮ್ ಕಾರ್ಡ್ ನೊಂದಣಿ ಕಾರ್ಯ ನಡೆದಿತ್ತು. ತೃತೀಯಲಿಂಗಿಗಳ ಸಂಘದ ಮುಖ್ಯಸ್ಥರಾದ ಪ್ರಣತಿ ಪ್ರಕಾಶ್ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಮಂದಿ ತೃತೀಯ ಲಿಂಗಿಗಳಿಗೆ ಒಂದು ದಿನದ ಅಭಿಯಾನದ ಮೂಲಕ ಇ-ಶ್ರಮ್ ಕಾರ್ಡ್ ನೊಂದಣಿ ಕಾರ್ಯ ನಡೆದಿದೆ.

ಅಸಂಘಟಿತ ಕಾರ್ಮಿಕ ಅಭಿವೃದ್ಧಿ ಕಲ್ಯಾಣ ಯೋಜನೆಯಡಿ ಜಾರಿ ದೇಶಾದ್ಯಂತ ಅಸಂಘಟಿತ ಕಾರ್ಮಿಕರನ್ನು ಇ- ಶ್ರಮ್ ವ್ಯಾಪ್ತಿಯಲ್ಲಿ ಒಗ್ಗೂಡಿಸುವ ಕೆಲಸ ಇದಾಗಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ, ಕೃಷಿ ಮೀನುಗಾರರು, ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‌ಗಳು, ವ್ಯಾಪಾರಿಗಳು ಸೇರಿದಂತೆ ಸರ್ಕಾರವು ಬೀದಿಬದಿ ಗುರುತಿಸಿರುವ ಕೇಂದ್ರ ಸುಮಾರು 156 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಇತರೆ ಕಾರ್ಮಿಕರು ವರ್ಗಗಳಡಿ ನೋಂದಣಿಯಾಗಬಹುದಾಗಿದೆ.

ನೋಂದಣಿ ವಿಧಾನ ಮತ್ತು ಬೇಕಾಗುವ ದಾಖಲೆಗಳ ಬಗ್ಗೆ ಇ-ಶ್ರಮ್‌ ಪೋರ್ಟಲ್‌ ನಲ್ಲಿ ಸ್ವಯಂ ಅಥವಾ ಸಾಮಾನ್ಯ ಸೇವಾ ಕೇಂದ್ರದ ಮೂಲಕ ನೋಂದಣಿ ಮಾಡಿಕೊಂಡು ಯುಎನ್‌ ಗುರುತಿನ ಚೀಟಿ ಪಡೆಯಬಹುದಾಗಿದೆ. ನೋಂದಣಿಗೆ ಆಧಾರ್‌ ಕಾರ್ಡ್‌, ಆಧಾರ್‌ ಸಂಖ್ಯೆಗೆ ಜೋಡಣೆಯಾದ ಮೊಬೈಲ್‌ ಸಂಖ್ಯೆ ಹಾಗೂ ಬ್ಯಾಂಕ್‌ ಖಾತೆ ವಿವರಗಳಿರಬೇಕು.

ನೋಂದಣಿಯಿಂದ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಯೋಜನೆ ಪಡೆಯಬಹುದಾಗಿದೆ.1 ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾಬಿಮಾ ಯೋಜನೆ ಪ್ರಯೋಜನ (ಅಪಘಾತದಿಂದ ಮರಣ ಹೊಂದಿದ್ದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ರೂ. 2 ಲಕ್ಷ ಹಾಗೂ ಭಾಗಶ: ಅಂಗವಿಕಲತೆ ಹೊಂದಿದ್ದಲ್ಲಿ 1 ಲಕ್ಷ ಪಡೆಯಬಹುದಾಗಿದೆ)

ಇ-ಶ್ರಮ್‌ ಪೋರ್ಟಲ್‌ನಲ್ಲಿ ನೋಂದಣಿ ಉಚಿತವಾಗಿದ್ದು, ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿ ಪಡೆಯಬಹುದಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಏರಿಕೆ; ಬೂಸ್ಟರ್ ಡೋಸ್​​ಗಳ ಅಗತ್ಯವನ್ನು ನಿರ್ಣಯಿಸಲು ಅಧ್ಯಯನ ಪ್ರಾರಂಭಿಸಿದ ಕೇಂದ್ರ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು