AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

E Shram Card: ದೇಶದಲ್ಲೇ ಮೊದಲ ಬಾರಿಗೆ ಮೈಸೂರಿನಲ್ಲಿ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ವಿತರಣೆ

ತೃತೀಯಲಿಂಗಿಗಳ ಸಂಘದ ಮುಖ್ಯಸ್ಥರಾದ ಪ್ರಣತಿ ಪ್ರಕಾಶ್ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಮಂದಿ ತೃತೀಯ ಲಿಂಗಿಗಳಿಗೆ ಒಂದು ದಿನದ ಅಭಿಯಾನದ ಮೂಲಕ ಇ-ಶ್ರಮ್ ಕಾರ್ಡ್ ನೊಂದಣಿ ಕಾರ್ಯ ನಡೆದಿದೆ.

E Shram Card: ದೇಶದಲ್ಲೇ ಮೊದಲ ಬಾರಿಗೆ ಮೈಸೂರಿನಲ್ಲಿ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ವಿತರಣೆ
ದೇಶದಲ್ಲೇ ಮೊದಲ ಬಾರಿಗೆ ಮೈಸೂರಿನಲ್ಲಿ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ವಿತರಣೆ
Follow us
TV9 Web
| Updated By: ಆಯೇಷಾ ಬಾನು

Updated on: Dec 24, 2021 | 11:52 AM

ಮೈಸೂರು: ದೇಶದಲ್ಲೇ ಮೊದಲ ಬಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಸರಸ್ವತಿಪುರಂನ ತೃತೀಯ ಲಿಂಗಿಗಳ ಕಚೇರಿಯ ಆವರಣದಲ್ಲಿ ತೃತೀಯ ಲಿಂಗಿಗಳಿಗೆ ಇ ಶ್ರಮ್ ಕಾರ್ಡ್ ವಿತರಣೆ ಮಾಡಲಾಗಿದೆ.

ಕೇಂದ್ರ ಕಾರ್ಮಿಕ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಟ್ವಿನ್ಸ್ ಸಿಎಸ್‌ಸಿ ಡಿಜಿಟಲ್ ಸೇವಾ ಕೇಂದ್ರದಿಂದ ತೃತೀಯ ಲಿಂಗಿಗಳಿಗೆ ಇ ಶ್ರಮ್ ಕಾರ್ಡ್ ನೊಂದಣಿ ಕಾರ್ಯ ನಡೆದಿತ್ತು. ತೃತೀಯಲಿಂಗಿಗಳ ಸಂಘದ ಮುಖ್ಯಸ್ಥರಾದ ಪ್ರಣತಿ ಪ್ರಕಾಶ್ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಮಂದಿ ತೃತೀಯ ಲಿಂಗಿಗಳಿಗೆ ಒಂದು ದಿನದ ಅಭಿಯಾನದ ಮೂಲಕ ಇ-ಶ್ರಮ್ ಕಾರ್ಡ್ ನೊಂದಣಿ ಕಾರ್ಯ ನಡೆದಿದೆ.

ಅಸಂಘಟಿತ ಕಾರ್ಮಿಕ ಅಭಿವೃದ್ಧಿ ಕಲ್ಯಾಣ ಯೋಜನೆಯಡಿ ಜಾರಿ ದೇಶಾದ್ಯಂತ ಅಸಂಘಟಿತ ಕಾರ್ಮಿಕರನ್ನು ಇ- ಶ್ರಮ್ ವ್ಯಾಪ್ತಿಯಲ್ಲಿ ಒಗ್ಗೂಡಿಸುವ ಕೆಲಸ ಇದಾಗಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ, ಕೃಷಿ ಮೀನುಗಾರರು, ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‌ಗಳು, ವ್ಯಾಪಾರಿಗಳು ಸೇರಿದಂತೆ ಸರ್ಕಾರವು ಬೀದಿಬದಿ ಗುರುತಿಸಿರುವ ಕೇಂದ್ರ ಸುಮಾರು 156 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಇತರೆ ಕಾರ್ಮಿಕರು ವರ್ಗಗಳಡಿ ನೋಂದಣಿಯಾಗಬಹುದಾಗಿದೆ.

ನೋಂದಣಿ ವಿಧಾನ ಮತ್ತು ಬೇಕಾಗುವ ದಾಖಲೆಗಳ ಬಗ್ಗೆ ಇ-ಶ್ರಮ್‌ ಪೋರ್ಟಲ್‌ ನಲ್ಲಿ ಸ್ವಯಂ ಅಥವಾ ಸಾಮಾನ್ಯ ಸೇವಾ ಕೇಂದ್ರದ ಮೂಲಕ ನೋಂದಣಿ ಮಾಡಿಕೊಂಡು ಯುಎನ್‌ ಗುರುತಿನ ಚೀಟಿ ಪಡೆಯಬಹುದಾಗಿದೆ. ನೋಂದಣಿಗೆ ಆಧಾರ್‌ ಕಾರ್ಡ್‌, ಆಧಾರ್‌ ಸಂಖ್ಯೆಗೆ ಜೋಡಣೆಯಾದ ಮೊಬೈಲ್‌ ಸಂಖ್ಯೆ ಹಾಗೂ ಬ್ಯಾಂಕ್‌ ಖಾತೆ ವಿವರಗಳಿರಬೇಕು.

ನೋಂದಣಿಯಿಂದ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಯೋಜನೆ ಪಡೆಯಬಹುದಾಗಿದೆ.1 ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾಬಿಮಾ ಯೋಜನೆ ಪ್ರಯೋಜನ (ಅಪಘಾತದಿಂದ ಮರಣ ಹೊಂದಿದ್ದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ರೂ. 2 ಲಕ್ಷ ಹಾಗೂ ಭಾಗಶ: ಅಂಗವಿಕಲತೆ ಹೊಂದಿದ್ದಲ್ಲಿ 1 ಲಕ್ಷ ಪಡೆಯಬಹುದಾಗಿದೆ)

ಇ-ಶ್ರಮ್‌ ಪೋರ್ಟಲ್‌ನಲ್ಲಿ ನೋಂದಣಿ ಉಚಿತವಾಗಿದ್ದು, ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿ ಪಡೆಯಬಹುದಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಏರಿಕೆ; ಬೂಸ್ಟರ್ ಡೋಸ್​​ಗಳ ಅಗತ್ಯವನ್ನು ನಿರ್ಣಯಿಸಲು ಅಧ್ಯಯನ ಪ್ರಾರಂಭಿಸಿದ ಕೇಂದ್ರ

ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ