AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾ ಕೊಠಡಿಯಲ್ಲಿ ಬಿದ್ದು ಮೃತಪಟ್ಟ ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಅನುಶ್ರೀ ಕುಟುಂಬಕ್ಕೆ ಶಿಕ್ಷಣ ಇಲಾಖೆಯಿಂದ ಒಂದು ಲಕ್ಷ ಪರಿಹಾರ

ಪರೀಕ್ಷಾ ಕೇಂದ್ರದಲ್ಲಿ ಕುಳಿತಿದ್ದ ಅನುಶ್ರೀಯನ್ನು 15 ನಿಮಿಷ ಬಳಿಕ ಬೇರೆ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಈ ವೇಳೆ ಆಘಾತದಿಂದ ಕುಸಿದು ಬಿದ್ದಿದ್ದಳು. ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಳು.

ಪರೀಕ್ಷಾ ಕೊಠಡಿಯಲ್ಲಿ ಬಿದ್ದು ಮೃತಪಟ್ಟ ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಅನುಶ್ರೀ ಕುಟುಂಬಕ್ಕೆ ಶಿಕ್ಷಣ ಇಲಾಖೆಯಿಂದ ಒಂದು ಲಕ್ಷ ಪರಿಹಾರ
ಮೃತ ವಿದ್ಯಾರ್ಥಿನಿ ಅನುಶ್ರೀ
TV9 Web
| Edited By: sandhya thejappa|

Updated on:Mar 31, 2022 | 8:56 AM

Share

ಮೈಸೂರು: ಮಾರ್ಚ್ 28ಕ್ಕೆ ಪರೀಕ್ಷಾ ಕೊಠಡಿಯಲ್ಲಿ ಬಿದ್ದು ಮೃತಪಟ್ಟ ಎಸ್ಎಸ್ಎಲ್​ಸಿ (SSLC) ವಿದ್ಯಾರ್ಥಿನಿ ಅನುಶ್ರೀ ಕುಟುಂಬಕ್ಕೆ ಶಿಕ್ಷಣ ಇಲಾಖೆ (Education Department) ಒಂದು ಲಕ್ಷ ಪರಿಹಾರ ನೀಡಿದೆ. ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ವಿದ್ಯಾರ್ಥಿನಿ ಕುಟುಂಬಕ್ಕೆ ಒಂದು ಲಕ್ಷ ಚೆಕ್ ವಿತರಣೆ ಮಾಡಿದ್ದಾರೆ. ಟಿ ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ವಿದ್ಯಾರ್ಥಿನಿ ಅನುಶ್ರೀ, ಮೊದಲ ದಿನ ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯುವ ವೇಳೆ ಗೊಂದಲಗೊಂಡು ಆತಂಕದಲ್ಲಿ ಕುಸಿದು ಬಿದ್ದಿದ್ದಳು.

ಪರೀಕ್ಷಾ ಕೇಂದ್ರದಲ್ಲಿ ಕುಳಿತಿದ್ದ ಅನುಶ್ರೀಯನ್ನು 15 ನಿಮಿಷ ಬಳಿಕ ಬೇರೆ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಈ ವೇಳೆ ಆಘಾತದಿಂದ ಕುಸಿದು ಬಿದ್ದಿದ್ದಳು. ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಳು. ಈಕೆ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.

ಮಾರ್ಚ್​ 28ಕ್ಕೆ ತಕ್ಷಣ ಸಾರ್ವಜನಿಕ ಆಸ್ಪತ್ರೆಗೆ ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಭೇಟಿ ನೀಡಿದ್ದರು. ಆರೋಗ್ಯಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಿದ್ದು ವಿದ್ಯಾರ್ಥಿನಿ ಅನುಶ್ರೀ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರೀತಿಯ ಮುಂಜಾಗ್ರತ ಕ್ರಮವನ್ನು ಕೈಗೊಳ್ಳಲಾಗಿತ್ತು. ಕೊವಿಡ್ ಪರೀಕ್ಷೆ ಹಾಗೂ ವಿದ್ಯಾರ್ಥಿಗಳಿಗೆ ತಾಪಮಾನ ಪರೀಕ್ಷೆ ಎಲ್ಲವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸಿದ್ದರು. ಘಟನೆ ಬಗ್ಗೆ ತಿಳಿದು ಶಿಕ್ಷಣ ಸಚಿವರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ ಎಂದು ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಹೇಳಿಕೆ ನೀಡಿದ್ದರು.ಘಟನೆ ಬಗ್ಗೆ ತಿಳಿದು ಶಿಕ್ಷಣ ಸಚಿವರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ ಎಂದು ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಹೇಳಿಕೆ ನೀಡಿದ್ದರು.

ಇದನ್ನೂ ಓದಿ

‘ಕೆಜಿಎಫ್​ 2’, ಉಪೇಂದ್ರ ಮತ್ತು ಸ್ಯಾಂಡಲ್​ವುಡ್​ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಹೇಳೋದು ಏನು?

ಕಂಟೇನರ್ ಹಾಗೂ ಲಾರಿ ನಡುವೆ ಡಿಕ್ಕಿ; ಅನಾನಸ್ ತುಂಬಿಕೊಂಡ ಲಾರಿ ಬೆಂಕಿಗಾಹುತಿ

Published On - 8:48 am, Thu, 31 March 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ