AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಸುಟ್ಟುಹೋದ ಲೈಬ್ರೆರಿಯನ್ನು ಆರು ತಿಂಗಳಾದರೂ ಕಟ್ಟಿಸದ ಸರ್ಕಾರ; ಮರದಡಿಯೇ ತಾತ್ಕಾಲಿಕ ಗ್ರಂಥಾಲಯ

ಕನ್ನಡ ಹಾಗೂ ಪುಸ್ತಕ ಪ್ರೇಮಿಯಾಗಿದ್ದ ಸೈಯದ್ ಇಸಾಕ್, ಮೈಸೂರಿನ ರಾಜೀವ್ ನಗರದಲ್ಲಿ ಕಳೆದ 11 ವರ್ಷದಿಂದ ಗ್ರಂಥಾಲಯ ನಡೆಸಿಕೊಂಡು ಬರುತ್ತಿದ್ದಾರೆ. 10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಇಸಾಕ್ ಸಂಗ್ರಹಿಸಿದ್ದಾರೆ.

ಮೈಸೂರು: ಸುಟ್ಟುಹೋದ ಲೈಬ್ರೆರಿಯನ್ನು ಆರು ತಿಂಗಳಾದರೂ ಕಟ್ಟಿಸದ ಸರ್ಕಾರ; ಮರದಡಿಯೇ ತಾತ್ಕಾಲಿಕ ಗ್ರಂಥಾಲಯ
ಸೈಯದ್ ಇಸಾಕ್ ಗ್ರಂಥಾಲಯ
TV9 Web
| Edited By: |

Updated on:Oct 19, 2021 | 1:22 PM

Share

ಮೈಸೂರು: ಸುಟ್ಟುಹೋದ ಗ್ರಂಥಾಲಯವನ್ನು ಆರು ತಿಂಗಳಾದರೂ ಕಟ್ಟಿಸದ ಸರ್ಕಾರದ ವಿರುದ್ಧ ಗ್ರಂಥಾಲಯದ ಮಾಲೀಕರಾದ ಸೈಯದ್ ಇಸಾಕ್ ಬೇಸರ ವ್ಯಕ್ತಪಡಿಸಿದ್ದಾರೆ. ಆರು ತಿಂಗಳ ಹಿಂದೆ ಮೈಸೂರು ಜಿಲ್ಲೆ ರಾಜೀವ್ ನಗರದಲ್ಲಿ ಸೈಯದ್ ಇಸಾಕ್ ಅವರ ಗ್ರಂಥಾಲಯ ಸುಟ್ಟು ಹೋಗಿತ್ತು. ಈ ವೇಳೆ ಹಲವರು ಗ್ರಂಥಾಲಯ ಕಟ್ಟಿಕೊಡಲು ಮುಂದಾಗಿದ್ದರು. ಆದರೆ ಸರ್ಕಾರ ತಾವೇ ಗ್ರಂಥಾಲಯ ಕಟ್ಟಿಸಿಕೊಡುವುದಾಗಿ ಹೇಳಿತ್ತು. ಹೀಗೆ ಭರವಸೆಕೊಟ್ಟು 6 ತಿಂಗಳಾದರೂ ಈ ಬಗ್ಗೆ ಸರ್ಕಾರ ಗಮನಹರಿಸಿಲ್ಲ.

ಕನ್ನಡ ಹಾಗೂ ಪುಸ್ತಕ ಪ್ರೇಮಿಯಾಗಿದ್ದ ಸೈಯದ್ ಇಸಾಕ್, ಮೈಸೂರಿನ ರಾಜೀವ್ ನಗರದಲ್ಲಿ ಕಳೆದ 11 ವರ್ಷದಿಂದ ಗ್ರಂಥಾಲಯ ನಡೆಸಿಕೊಂಡು ಬರುತ್ತಿದ್ದಾರೆ. 10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಇಸಾಕ್ ಸಂಗ್ರಹಿಸಿದ್ದಾರೆ.

ಸ್ವಂತ ಹಣದಿಂದ ಗ್ರಂಥಾಲಯ ನಡೆಸುತ್ತಿದ್ದ ಇಸಾಕ್​ ಅವರ ಗ್ರಂಥಾಲಯ 6 ತಿಂಗಳ ಹಿಂದೆ ಸುಟ್ಟುಹೋಗಿತ್ತು. ಆದರೆ ಇದೀಗಾ ಘಟನೆ ನಡೆದು ಆರು ತಿಂಗಳು ಕಳೆದರೂ ಇನ್ನು ಕಟ್ಟಡ ಕಾಮಗಾರಿ ಪ್ರಾರಂಭವಾಗಿಲ್ಲ. ಈಗಾಗಲು ಪ್ರತಿದಿನ ಮರದಡಿ ಪುಸ್ತಕ ಹಾಗೂ ದಿನಪತ್ರಿಕೆಯನ್ನು ಇಟ್ಟುಕೊಂಡು ಸೈಯದ್ ಇಸಾಕ್‌ ಗ್ರಂಥಾಲಯ ನಡೆಸುತ್ತಿದ್ದಾರೆ.

ಮಳೆ ಬಂದರೆ ಇಡೀ ಪುಸ್ತಕಗಳನ್ನು ಚೀಲಕ್ಕೆ ತುಂಬಿಕೊಂಡು ಓಡುವ ಪರಿಸ್ಥಿತಿ ಇದೆ. ಸದ್ಯ ಸೂರಿಲ್ಲದೆ ಸೈಯದ್ ಇಸಾಕ್‌ ಪರದಾಡುತ್ತಿದ್ದಾರೆ. ಗ್ರಂಥಾಲಯ ಕಟ್ಟಿಸಿಕೊಡದಿದ್ದರೆ ತಾವೇ ಮತ್ತೆ ಹಳೆ ಮಾದರಿಯಲ್ಲಿ ಶೆಡ್ ಹಾಕಿಕೊಳ್ಳುತ್ತೇನೆ ಎಂದು ಸೈಯದ್ ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಇಸಾಕ್ ಗ್ರಂಥಾಲಯಕ್ಕೆ ಬೆಂಕಿ ಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಹಾವೇರಿ: ಆಕಸ್ಮಿಕ ಬೆಂಕಿ ಅವಘಡ; ಸುಟ್ಟು ಕರಕಲಾದ ಮನೆ

Published On - 1:10 pm, Tue, 19 October 21

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್