AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಸುಟ್ಟುಹೋದ ಲೈಬ್ರೆರಿಯನ್ನು ಆರು ತಿಂಗಳಾದರೂ ಕಟ್ಟಿಸದ ಸರ್ಕಾರ; ಮರದಡಿಯೇ ತಾತ್ಕಾಲಿಕ ಗ್ರಂಥಾಲಯ

ಕನ್ನಡ ಹಾಗೂ ಪುಸ್ತಕ ಪ್ರೇಮಿಯಾಗಿದ್ದ ಸೈಯದ್ ಇಸಾಕ್, ಮೈಸೂರಿನ ರಾಜೀವ್ ನಗರದಲ್ಲಿ ಕಳೆದ 11 ವರ್ಷದಿಂದ ಗ್ರಂಥಾಲಯ ನಡೆಸಿಕೊಂಡು ಬರುತ್ತಿದ್ದಾರೆ. 10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಇಸಾಕ್ ಸಂಗ್ರಹಿಸಿದ್ದಾರೆ.

ಮೈಸೂರು: ಸುಟ್ಟುಹೋದ ಲೈಬ್ರೆರಿಯನ್ನು ಆರು ತಿಂಗಳಾದರೂ ಕಟ್ಟಿಸದ ಸರ್ಕಾರ; ಮರದಡಿಯೇ ತಾತ್ಕಾಲಿಕ ಗ್ರಂಥಾಲಯ
ಸೈಯದ್ ಇಸಾಕ್ ಗ್ರಂಥಾಲಯ
Follow us
TV9 Web
| Updated By: preethi shettigar

Updated on:Oct 19, 2021 | 1:22 PM

ಮೈಸೂರು: ಸುಟ್ಟುಹೋದ ಗ್ರಂಥಾಲಯವನ್ನು ಆರು ತಿಂಗಳಾದರೂ ಕಟ್ಟಿಸದ ಸರ್ಕಾರದ ವಿರುದ್ಧ ಗ್ರಂಥಾಲಯದ ಮಾಲೀಕರಾದ ಸೈಯದ್ ಇಸಾಕ್ ಬೇಸರ ವ್ಯಕ್ತಪಡಿಸಿದ್ದಾರೆ. ಆರು ತಿಂಗಳ ಹಿಂದೆ ಮೈಸೂರು ಜಿಲ್ಲೆ ರಾಜೀವ್ ನಗರದಲ್ಲಿ ಸೈಯದ್ ಇಸಾಕ್ ಅವರ ಗ್ರಂಥಾಲಯ ಸುಟ್ಟು ಹೋಗಿತ್ತು. ಈ ವೇಳೆ ಹಲವರು ಗ್ರಂಥಾಲಯ ಕಟ್ಟಿಕೊಡಲು ಮುಂದಾಗಿದ್ದರು. ಆದರೆ ಸರ್ಕಾರ ತಾವೇ ಗ್ರಂಥಾಲಯ ಕಟ್ಟಿಸಿಕೊಡುವುದಾಗಿ ಹೇಳಿತ್ತು. ಹೀಗೆ ಭರವಸೆಕೊಟ್ಟು 6 ತಿಂಗಳಾದರೂ ಈ ಬಗ್ಗೆ ಸರ್ಕಾರ ಗಮನಹರಿಸಿಲ್ಲ.

ಕನ್ನಡ ಹಾಗೂ ಪುಸ್ತಕ ಪ್ರೇಮಿಯಾಗಿದ್ದ ಸೈಯದ್ ಇಸಾಕ್, ಮೈಸೂರಿನ ರಾಜೀವ್ ನಗರದಲ್ಲಿ ಕಳೆದ 11 ವರ್ಷದಿಂದ ಗ್ರಂಥಾಲಯ ನಡೆಸಿಕೊಂಡು ಬರುತ್ತಿದ್ದಾರೆ. 10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಇಸಾಕ್ ಸಂಗ್ರಹಿಸಿದ್ದಾರೆ.

ಸ್ವಂತ ಹಣದಿಂದ ಗ್ರಂಥಾಲಯ ನಡೆಸುತ್ತಿದ್ದ ಇಸಾಕ್​ ಅವರ ಗ್ರಂಥಾಲಯ 6 ತಿಂಗಳ ಹಿಂದೆ ಸುಟ್ಟುಹೋಗಿತ್ತು. ಆದರೆ ಇದೀಗಾ ಘಟನೆ ನಡೆದು ಆರು ತಿಂಗಳು ಕಳೆದರೂ ಇನ್ನು ಕಟ್ಟಡ ಕಾಮಗಾರಿ ಪ್ರಾರಂಭವಾಗಿಲ್ಲ. ಈಗಾಗಲು ಪ್ರತಿದಿನ ಮರದಡಿ ಪುಸ್ತಕ ಹಾಗೂ ದಿನಪತ್ರಿಕೆಯನ್ನು ಇಟ್ಟುಕೊಂಡು ಸೈಯದ್ ಇಸಾಕ್‌ ಗ್ರಂಥಾಲಯ ನಡೆಸುತ್ತಿದ್ದಾರೆ.

ಮಳೆ ಬಂದರೆ ಇಡೀ ಪುಸ್ತಕಗಳನ್ನು ಚೀಲಕ್ಕೆ ತುಂಬಿಕೊಂಡು ಓಡುವ ಪರಿಸ್ಥಿತಿ ಇದೆ. ಸದ್ಯ ಸೂರಿಲ್ಲದೆ ಸೈಯದ್ ಇಸಾಕ್‌ ಪರದಾಡುತ್ತಿದ್ದಾರೆ. ಗ್ರಂಥಾಲಯ ಕಟ್ಟಿಸಿಕೊಡದಿದ್ದರೆ ತಾವೇ ಮತ್ತೆ ಹಳೆ ಮಾದರಿಯಲ್ಲಿ ಶೆಡ್ ಹಾಕಿಕೊಳ್ಳುತ್ತೇನೆ ಎಂದು ಸೈಯದ್ ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಇಸಾಕ್ ಗ್ರಂಥಾಲಯಕ್ಕೆ ಬೆಂಕಿ ಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಹಾವೇರಿ: ಆಕಸ್ಮಿಕ ಬೆಂಕಿ ಅವಘಡ; ಸುಟ್ಟು ಕರಕಲಾದ ಮನೆ

Published On - 1:10 pm, Tue, 19 October 21

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್