AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕೈ ಕೈ ಮಿಲಾಯಿಸಿ, ದಾಯಾದಿಗಳಂತೆ ಬಡಿದಾಡಿಕೊಂಡ ಅಣ್ಣ ತಮ್ಮಂದಿರು -ಕಾರಣ ಏನು?

ಮೈಸೂರು ಕಾಂಗ್ರೆಸ್ ಮುಖಂಡ ವಿಜಯಕುಮಾರ್ ಅವರಿಗೆ ಮೂವರು ಸಹೋದರರು. ಅವರ ತಾತನಿಗೆ ಸೇರಿದ ಆಸ್ತಿ ವಿಚಾರವಾಗಿ ವಿಜಯಕುಮಾರ್ ಹಾಗೂ ಮೂವರು ಸಹೋದರರ ನಡುವೆ ಸಾಕಷ್ಟು ದಿನಗಳಿಂದ ಜಗಳ ನಡೆಯುತ್ತಿತ್ತು. ಇದು ವಿಕೋಪಕ್ಕೆ ಹೋಗಿ ಕೈ ಕೈ ಮಿಲಾಯಿಸುವ ಹಂತ ತಲುಪಿದೆ.

ಮೈಸೂರು ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕೈ ಕೈ ಮಿಲಾಯಿಸಿ, ದಾಯಾದಿಗಳಂತೆ ಬಡಿದಾಡಿಕೊಂಡ ಅಣ್ಣ ತಮ್ಮಂದಿರು -ಕಾರಣ ಏನು?
ಮೈಸೂರು ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಅಣ್ಣ ತಮ್ಮಂದಿರು
ರಾಮ್​, ಮೈಸೂರು
| Edited By: |

Updated on: Oct 28, 2023 | 11:08 AM

Share

ಹುಟ್ಟುತ್ತಾ ಅಣ್ಣ ತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು (family quarrel) ಅನ್ನೋ ಮಾತು ಸರ್ವಕಾಲಕ್ಕೂ ಪ್ರಸ್ತುತ. ಇದಕ್ಕೆ ಸಾಕ್ಷಿ ಮೈಸೂರಿನಲ್ಲಿ ನಡೆದಿರುವ ಘನಘೋರ ಗಲಾಟೆ‌. ಆಸ್ತಿಗಾಗಿ ಸಹೋದರ ನಡುವೆ ನಡೆದ ಗಲಾಟೆ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಇದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ. ಹೊಡೆದಾಟ ಬಡಿದಾಟ ಅರುಚಾಟ ಕಿರುಚಾಟ. ಎಸ್ ಇದನ್ನು ನೋಡಿದ್ರೆ ಇವರೆಲ್ಲಾ ಮನುಷ್ಯರಾ ? ಅಥವಾ…. ಅನ್ನೋ ಅಭಿಪ್ರಾಯ ಮೂಡುತ್ತದೆ. ಅಂದ್ಹಾಗೆ ಇದು ಮೈಸೂರಿನ ಸಿದ್ದಲಿಂಗಪುರದಲ್ಲಿ (Mysore) ನಡೆದಿರುವ ಗಲಾಟೆ. ಇದು ಯಾರೋ ಅಪರಿಚಿತರ ನಡುವೆ ನಡೆದ ಗಲಾಟೆಯಲ್ಲ. ಸ್ವಂತ ಅಣ್ಣ ತಮ್ಮಂದಿರು ಹಾಗೂ ಅವರ ಸಂಬಂಧಿಕರ ನಡುವೆ ನಡೆದ ಗಲಾಟೆ.

ಇಲ್ಲಿ ಈ ರೀತಿ ಹಲ್ಲೆ ನಡೆಸಿರುವವರು ಕಾಂಗ್ರೆಸ್ ಮುಖಂಡ (Congress) ವಿಜಯಕುಮಾರ್ ಹಾಗೂ ಅವರ ಪುತ್ರ ಅಭಿಲಾಷ್. ವಿಜಯಕುಮಾರ್ ಅವರಿಗೆ ಮೂವರು ಸಹೋದರರು. ಅವರ ತಾತನಿಗೆ ಸೇರಿದ ಆಸ್ತಿ ವಿಚಾರವಾಗಿ ವಿಜಯಕುಮಾರ್ ಹಾಗೂ ಮೂವರು ಸಹೋದರರ ನಡುವೆ ಸಾಕಷ್ಟು ದಿನಗಳಿಂದ ಜಗಳ ನಡೆಯುತ್ತಲೆ ಇದೆಯಂತೆ. ಮೊನ್ನೆ ಇದು ತಾರಕಕ್ಕೇರಿದೆ. ಮಾತುಕತೆ ವಿಕೋಪಕ್ಕೆ ಹೋಗಿ ಕೈ ಕೈ ಮಿಲಾಯಿಸುವ ಹಂತ ತಲುಪಿದೆ.

ಘಟನೆಯಲ್ಲಿ ಅಂಬರೀಶ್, ಎಲ್ಲಮ್ಮ, ನವೀನ್ ಕುಮಾರ್, ಸುಷ್ಮಾ, ಜಗನ್ನಾಥ್, ಜಯಲಕ್ಷ್ಮಿಗೆ ಎಂಬುವವರಿಗೆ ಗಾಯವಾಗಿದೆ. ಗಾಯಾಳುಗಳಿಗೆ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೊನ್ನೆ ವಿಜಯಕುಮಾರ್ ಅವರ ಸಹೋದರರ‌ ಜೊತೆ ಆಸ್ತಿ ವಿವಾದದ ಸಂಬಂಧ ಮಾತನಾಡುತ್ತಿದ್ದರಂತೆ ಸುಮಾರು ಅರ್ಧ ಗಂಟೆ ಮಾತುಕತೆ ನಡೆದಿತ್ತಂತೆ. ಈ ವೇಳೆ ವಿಜಯಕುಮಾರ್ ಮಗ ಅಭಿಲಾಷ್ ಬಂದು ಏಕಾಏಕಿ ತನ್ನ ಬಳಿ ಇದ್ದ ಕಬ್ಬಿಣದ ರಾಡಿನಿಂದ ಹಲ್ಲೆ‌ ನಡೆಸಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಮನ ಬಂದಂತೆ ಎಲ್ಲರಿಗೂ ಥಳಿಸಿದ್ದಾನೆ.

ಈ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಇನ್ನು ಪೊಲೀಸರಿಗೆ ಸಿಕ್ಕಿಲ್ಲ ಆದರೆ ಆರೋಪಿಗಳನ್ನು ಉದ್ದೇಶಪೂರ್ವಕವಾಗಿಯೇ ಬಂಧಿಸುತ್ತಿಲ್ಲ ಅನ್ನೋದು ಹಲ್ಲೆಗೊಳಗಾದವರ ಆರೋಪ. ಇದೆಲ್ಲಾ ಏನೇ ಇರಲಿ ಆಸ್ತಿ ವಿಚಾರಕ್ಕೆ ಅಣ್ಣ ತಮ್ಮಂದಿರೇ ಈ ರೀತಿ ಹೊಡೆದಾಡಿಕೊಂಡಿರೋದು ನಿಜಕ್ಕೂ ದುರಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ
ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ 'ಕೈ' ಶಾಸಕ: ತನ್ವೀರ್​​ ಸೇಠ್​​ ಗರಂ
ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ 'ಕೈ' ಶಾಸಕ: ತನ್ವೀರ್​​ ಸೇಠ್​​ ಗರಂ
SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ!
SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ!
ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು?
ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು?
ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು
ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು
ಉತ್ಖನನದ ವೇಳೆ ಸಾವಿರಾರು ವರ್ಷಗಳ ಹಿಂದಿನ ಅಸ್ಥಿಪಂಜರ ಪತ್ತೆ
ಉತ್ಖನನದ ವೇಳೆ ಸಾವಿರಾರು ವರ್ಷಗಳ ಹಿಂದಿನ ಅಸ್ಥಿಪಂಜರ ಪತ್ತೆ
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು