AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕೈ ಕೈ ಮಿಲಾಯಿಸಿ, ದಾಯಾದಿಗಳಂತೆ ಬಡಿದಾಡಿಕೊಂಡ ಅಣ್ಣ ತಮ್ಮಂದಿರು -ಕಾರಣ ಏನು?

ಮೈಸೂರು ಕಾಂಗ್ರೆಸ್ ಮುಖಂಡ ವಿಜಯಕುಮಾರ್ ಅವರಿಗೆ ಮೂವರು ಸಹೋದರರು. ಅವರ ತಾತನಿಗೆ ಸೇರಿದ ಆಸ್ತಿ ವಿಚಾರವಾಗಿ ವಿಜಯಕುಮಾರ್ ಹಾಗೂ ಮೂವರು ಸಹೋದರರ ನಡುವೆ ಸಾಕಷ್ಟು ದಿನಗಳಿಂದ ಜಗಳ ನಡೆಯುತ್ತಿತ್ತು. ಇದು ವಿಕೋಪಕ್ಕೆ ಹೋಗಿ ಕೈ ಕೈ ಮಿಲಾಯಿಸುವ ಹಂತ ತಲುಪಿದೆ.

ಮೈಸೂರು ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕೈ ಕೈ ಮಿಲಾಯಿಸಿ, ದಾಯಾದಿಗಳಂತೆ ಬಡಿದಾಡಿಕೊಂಡ ಅಣ್ಣ ತಮ್ಮಂದಿರು -ಕಾರಣ ಏನು?
ಮೈಸೂರು ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಅಣ್ಣ ತಮ್ಮಂದಿರು
ರಾಮ್​, ಮೈಸೂರು
| Edited By: |

Updated on: Oct 28, 2023 | 11:08 AM

Share

ಹುಟ್ಟುತ್ತಾ ಅಣ್ಣ ತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು (family quarrel) ಅನ್ನೋ ಮಾತು ಸರ್ವಕಾಲಕ್ಕೂ ಪ್ರಸ್ತುತ. ಇದಕ್ಕೆ ಸಾಕ್ಷಿ ಮೈಸೂರಿನಲ್ಲಿ ನಡೆದಿರುವ ಘನಘೋರ ಗಲಾಟೆ‌. ಆಸ್ತಿಗಾಗಿ ಸಹೋದರ ನಡುವೆ ನಡೆದ ಗಲಾಟೆ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಇದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ. ಹೊಡೆದಾಟ ಬಡಿದಾಟ ಅರುಚಾಟ ಕಿರುಚಾಟ. ಎಸ್ ಇದನ್ನು ನೋಡಿದ್ರೆ ಇವರೆಲ್ಲಾ ಮನುಷ್ಯರಾ ? ಅಥವಾ…. ಅನ್ನೋ ಅಭಿಪ್ರಾಯ ಮೂಡುತ್ತದೆ. ಅಂದ್ಹಾಗೆ ಇದು ಮೈಸೂರಿನ ಸಿದ್ದಲಿಂಗಪುರದಲ್ಲಿ (Mysore) ನಡೆದಿರುವ ಗಲಾಟೆ. ಇದು ಯಾರೋ ಅಪರಿಚಿತರ ನಡುವೆ ನಡೆದ ಗಲಾಟೆಯಲ್ಲ. ಸ್ವಂತ ಅಣ್ಣ ತಮ್ಮಂದಿರು ಹಾಗೂ ಅವರ ಸಂಬಂಧಿಕರ ನಡುವೆ ನಡೆದ ಗಲಾಟೆ.

ಇಲ್ಲಿ ಈ ರೀತಿ ಹಲ್ಲೆ ನಡೆಸಿರುವವರು ಕಾಂಗ್ರೆಸ್ ಮುಖಂಡ (Congress) ವಿಜಯಕುಮಾರ್ ಹಾಗೂ ಅವರ ಪುತ್ರ ಅಭಿಲಾಷ್. ವಿಜಯಕುಮಾರ್ ಅವರಿಗೆ ಮೂವರು ಸಹೋದರರು. ಅವರ ತಾತನಿಗೆ ಸೇರಿದ ಆಸ್ತಿ ವಿಚಾರವಾಗಿ ವಿಜಯಕುಮಾರ್ ಹಾಗೂ ಮೂವರು ಸಹೋದರರ ನಡುವೆ ಸಾಕಷ್ಟು ದಿನಗಳಿಂದ ಜಗಳ ನಡೆಯುತ್ತಲೆ ಇದೆಯಂತೆ. ಮೊನ್ನೆ ಇದು ತಾರಕಕ್ಕೇರಿದೆ. ಮಾತುಕತೆ ವಿಕೋಪಕ್ಕೆ ಹೋಗಿ ಕೈ ಕೈ ಮಿಲಾಯಿಸುವ ಹಂತ ತಲುಪಿದೆ.

ಘಟನೆಯಲ್ಲಿ ಅಂಬರೀಶ್, ಎಲ್ಲಮ್ಮ, ನವೀನ್ ಕುಮಾರ್, ಸುಷ್ಮಾ, ಜಗನ್ನಾಥ್, ಜಯಲಕ್ಷ್ಮಿಗೆ ಎಂಬುವವರಿಗೆ ಗಾಯವಾಗಿದೆ. ಗಾಯಾಳುಗಳಿಗೆ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೊನ್ನೆ ವಿಜಯಕುಮಾರ್ ಅವರ ಸಹೋದರರ‌ ಜೊತೆ ಆಸ್ತಿ ವಿವಾದದ ಸಂಬಂಧ ಮಾತನಾಡುತ್ತಿದ್ದರಂತೆ ಸುಮಾರು ಅರ್ಧ ಗಂಟೆ ಮಾತುಕತೆ ನಡೆದಿತ್ತಂತೆ. ಈ ವೇಳೆ ವಿಜಯಕುಮಾರ್ ಮಗ ಅಭಿಲಾಷ್ ಬಂದು ಏಕಾಏಕಿ ತನ್ನ ಬಳಿ ಇದ್ದ ಕಬ್ಬಿಣದ ರಾಡಿನಿಂದ ಹಲ್ಲೆ‌ ನಡೆಸಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಮನ ಬಂದಂತೆ ಎಲ್ಲರಿಗೂ ಥಳಿಸಿದ್ದಾನೆ.

ಈ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಇನ್ನು ಪೊಲೀಸರಿಗೆ ಸಿಕ್ಕಿಲ್ಲ ಆದರೆ ಆರೋಪಿಗಳನ್ನು ಉದ್ದೇಶಪೂರ್ವಕವಾಗಿಯೇ ಬಂಧಿಸುತ್ತಿಲ್ಲ ಅನ್ನೋದು ಹಲ್ಲೆಗೊಳಗಾದವರ ಆರೋಪ. ಇದೆಲ್ಲಾ ಏನೇ ಇರಲಿ ಆಸ್ತಿ ವಿಚಾರಕ್ಕೆ ಅಣ್ಣ ತಮ್ಮಂದಿರೇ ಈ ರೀತಿ ಹೊಡೆದಾಡಿಕೊಂಡಿರೋದು ನಿಜಕ್ಕೂ ದುರಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು