AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕೈ ಕೈ ಮಿಲಾಯಿಸಿ, ದಾಯಾದಿಗಳಂತೆ ಬಡಿದಾಡಿಕೊಂಡ ಅಣ್ಣ ತಮ್ಮಂದಿರು -ಕಾರಣ ಏನು?

ಮೈಸೂರು ಕಾಂಗ್ರೆಸ್ ಮುಖಂಡ ವಿಜಯಕುಮಾರ್ ಅವರಿಗೆ ಮೂವರು ಸಹೋದರರು. ಅವರ ತಾತನಿಗೆ ಸೇರಿದ ಆಸ್ತಿ ವಿಚಾರವಾಗಿ ವಿಜಯಕುಮಾರ್ ಹಾಗೂ ಮೂವರು ಸಹೋದರರ ನಡುವೆ ಸಾಕಷ್ಟು ದಿನಗಳಿಂದ ಜಗಳ ನಡೆಯುತ್ತಿತ್ತು. ಇದು ವಿಕೋಪಕ್ಕೆ ಹೋಗಿ ಕೈ ಕೈ ಮಿಲಾಯಿಸುವ ಹಂತ ತಲುಪಿದೆ.

ಮೈಸೂರು ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕೈ ಕೈ ಮಿಲಾಯಿಸಿ, ದಾಯಾದಿಗಳಂತೆ ಬಡಿದಾಡಿಕೊಂಡ ಅಣ್ಣ ತಮ್ಮಂದಿರು -ಕಾರಣ ಏನು?
ಮೈಸೂರು ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಅಣ್ಣ ತಮ್ಮಂದಿರು
ರಾಮ್​, ಮೈಸೂರು
| Edited By: ಸಾಧು ಶ್ರೀನಾಥ್​|

Updated on: Oct 28, 2023 | 11:08 AM

Share

ಹುಟ್ಟುತ್ತಾ ಅಣ್ಣ ತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು (family quarrel) ಅನ್ನೋ ಮಾತು ಸರ್ವಕಾಲಕ್ಕೂ ಪ್ರಸ್ತುತ. ಇದಕ್ಕೆ ಸಾಕ್ಷಿ ಮೈಸೂರಿನಲ್ಲಿ ನಡೆದಿರುವ ಘನಘೋರ ಗಲಾಟೆ‌. ಆಸ್ತಿಗಾಗಿ ಸಹೋದರ ನಡುವೆ ನಡೆದ ಗಲಾಟೆ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಇದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ. ಹೊಡೆದಾಟ ಬಡಿದಾಟ ಅರುಚಾಟ ಕಿರುಚಾಟ. ಎಸ್ ಇದನ್ನು ನೋಡಿದ್ರೆ ಇವರೆಲ್ಲಾ ಮನುಷ್ಯರಾ ? ಅಥವಾ…. ಅನ್ನೋ ಅಭಿಪ್ರಾಯ ಮೂಡುತ್ತದೆ. ಅಂದ್ಹಾಗೆ ಇದು ಮೈಸೂರಿನ ಸಿದ್ದಲಿಂಗಪುರದಲ್ಲಿ (Mysore) ನಡೆದಿರುವ ಗಲಾಟೆ. ಇದು ಯಾರೋ ಅಪರಿಚಿತರ ನಡುವೆ ನಡೆದ ಗಲಾಟೆಯಲ್ಲ. ಸ್ವಂತ ಅಣ್ಣ ತಮ್ಮಂದಿರು ಹಾಗೂ ಅವರ ಸಂಬಂಧಿಕರ ನಡುವೆ ನಡೆದ ಗಲಾಟೆ.

ಇಲ್ಲಿ ಈ ರೀತಿ ಹಲ್ಲೆ ನಡೆಸಿರುವವರು ಕಾಂಗ್ರೆಸ್ ಮುಖಂಡ (Congress) ವಿಜಯಕುಮಾರ್ ಹಾಗೂ ಅವರ ಪುತ್ರ ಅಭಿಲಾಷ್. ವಿಜಯಕುಮಾರ್ ಅವರಿಗೆ ಮೂವರು ಸಹೋದರರು. ಅವರ ತಾತನಿಗೆ ಸೇರಿದ ಆಸ್ತಿ ವಿಚಾರವಾಗಿ ವಿಜಯಕುಮಾರ್ ಹಾಗೂ ಮೂವರು ಸಹೋದರರ ನಡುವೆ ಸಾಕಷ್ಟು ದಿನಗಳಿಂದ ಜಗಳ ನಡೆಯುತ್ತಲೆ ಇದೆಯಂತೆ. ಮೊನ್ನೆ ಇದು ತಾರಕಕ್ಕೇರಿದೆ. ಮಾತುಕತೆ ವಿಕೋಪಕ್ಕೆ ಹೋಗಿ ಕೈ ಕೈ ಮಿಲಾಯಿಸುವ ಹಂತ ತಲುಪಿದೆ.

ಘಟನೆಯಲ್ಲಿ ಅಂಬರೀಶ್, ಎಲ್ಲಮ್ಮ, ನವೀನ್ ಕುಮಾರ್, ಸುಷ್ಮಾ, ಜಗನ್ನಾಥ್, ಜಯಲಕ್ಷ್ಮಿಗೆ ಎಂಬುವವರಿಗೆ ಗಾಯವಾಗಿದೆ. ಗಾಯಾಳುಗಳಿಗೆ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೊನ್ನೆ ವಿಜಯಕುಮಾರ್ ಅವರ ಸಹೋದರರ‌ ಜೊತೆ ಆಸ್ತಿ ವಿವಾದದ ಸಂಬಂಧ ಮಾತನಾಡುತ್ತಿದ್ದರಂತೆ ಸುಮಾರು ಅರ್ಧ ಗಂಟೆ ಮಾತುಕತೆ ನಡೆದಿತ್ತಂತೆ. ಈ ವೇಳೆ ವಿಜಯಕುಮಾರ್ ಮಗ ಅಭಿಲಾಷ್ ಬಂದು ಏಕಾಏಕಿ ತನ್ನ ಬಳಿ ಇದ್ದ ಕಬ್ಬಿಣದ ರಾಡಿನಿಂದ ಹಲ್ಲೆ‌ ನಡೆಸಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಮನ ಬಂದಂತೆ ಎಲ್ಲರಿಗೂ ಥಳಿಸಿದ್ದಾನೆ.

ಈ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಇನ್ನು ಪೊಲೀಸರಿಗೆ ಸಿಕ್ಕಿಲ್ಲ ಆದರೆ ಆರೋಪಿಗಳನ್ನು ಉದ್ದೇಶಪೂರ್ವಕವಾಗಿಯೇ ಬಂಧಿಸುತ್ತಿಲ್ಲ ಅನ್ನೋದು ಹಲ್ಲೆಗೊಳಗಾದವರ ಆರೋಪ. ಇದೆಲ್ಲಾ ಏನೇ ಇರಲಿ ಆಸ್ತಿ ವಿಚಾರಕ್ಕೆ ಅಣ್ಣ ತಮ್ಮಂದಿರೇ ಈ ರೀತಿ ಹೊಡೆದಾಡಿಕೊಂಡಿರೋದು ನಿಜಕ್ಕೂ ದುರಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು