AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಸಾವಿಗೆ ನ್ಯಾಯ ಸಿಗಲಿಲ್ಲ ಎಂದು ದಯಾಮರಣಕ್ಕೆ ಮುಂದಾದ ಕುಟುಂಬ; ಮೈಸೂರು ಡಿಸಿ, ಎಸ್ಪಿಗೆ ಮನವಿ

ಮನೆಯಲ್ಲಿದ್ದ ಸ್ವಾಮಿ ಎಳೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಪಾಪಣ್ಣ ಕುಟುಂಬಸ್ಥರ ಹಲ್ಲೆಯಿಂದ ಸ್ವಾಮಿ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಅಲ್ಲದೆ ಗ್ರಾಮ ಪಂಚಾಯಿತಿ ಸದಸ್ಯನಾಗಿರುವ ಪಾಪಣ್ಣ ತಮ್ಮ ಶಿವಣ್ಣ, ಪ್ರಭಾವ ಬಳಸಿ ಮರಣೋತ್ತರ ಪರೀಕ್ಷೆಗೆ ಬಿಟ್ಟಿಲ್ಲವೆಂದು ಆರೋಪಿಸಿದ್ದಾರೆ.

ಮಗನ ಸಾವಿಗೆ ನ್ಯಾಯ ಸಿಗಲಿಲ್ಲ ಎಂದು ದಯಾಮರಣಕ್ಕೆ ಮುಂದಾದ ಕುಟುಂಬ; ಮೈಸೂರು ಡಿಸಿ, ಎಸ್ಪಿಗೆ ಮನವಿ
ಚೋಳಮ್ಮ ಕುಟುಂಬ
TV9 Web
| Edited By: |

Updated on:May 17, 2022 | 2:51 PM

Share

ಮೈಸೂರು: ಮಗನ ಸಾವಿಗೆ ನ್ಯಾಯ ಸಿಗದ ಹಿನ್ನೆಲೆ ಮೈಸೂರಿನ ಕುಟುಂಬವೊಂದು ದಯಾಮರಣಕ್ಕೆ(Euthanasia) ಅರ್ಜಿ ಸಲ್ಲಿಸಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಚೋಳಮ್ಮ ಕುಟುಂಬ ತನ್ನ ಮಗನ ಸಾವಿಗೆ ನ್ಯಾಗ ಸಿಕ್ಕಿಲ್ಲವೆಂದು ಮೈಸೂರು ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ದಯಾಮರಣಕ್ಕೆ ಒಪ್ಪಿಗೆ ನೀಡುವಂತೆ ಮನವಿ ಮಾಡಿಕೊಂಡಿದೆ.

ಘಟನೆ ಹಿನ್ನೆಲೆ ಫೆಬ್ರವರಿ 14ರಂದು ಚೋಳಮ್ಮನವರ ಪುತ್ರ ಸ್ವಾಮಿ ಮೃತಪಟ್ಟಿದ್ದರು. ಅದೇ ಗ್ರಾಮದ ಯುವತಿಯನ್ನು ಸ್ವಾಮಿ ಪ್ರೀತಿಸುತ್ತಿದ್ದ ಎಂಬ ಆರೋಪವಿದೆ. ಏಕೆಂದರೆ ಮೃತ ಸ್ವಾಮಿ ತನ್ನ ಕೈ ಮೇಲೆ ಆಕೆಯ ಹೆಸರು ಹಚ್ಚೆ ಹಾಕಿಸಿಕೊಂಡಿದ್ದ. ಗ್ರಾಮದ ಪಾಪಣ್ಣ ಎಂಬುವವರ ಮನೆಯಲ್ಲಿ 2 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ಸ್ವಾಮಿ, ಪಾಪಣ್ಣನ ಮಗಳನ್ನೇ ಪ್ರೀತಿಸಿದ್ದ ಎನ್ನಲಾಗಿದೆ. ಪ್ರೇಮಿಗಳ ದಿನಾಚರಣೆ ವೇಳೆ ಪಾಪಣ್ಣನ ಮಗಳ ಹೆಸರನ್ನು ಕೈ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದ. ಇದೇ ವಿಚಾರಕ್ಕೆ 2 ಕುಟುಂಬಗಳ ನಡುವೆ ಜಗಳವಾಗಿತ್ತು. ಆಗ ಸ್ವಾಮಿ ಕುಟುಂಬದವರ ಮೇಲೆ ಪಾಪಣ್ಣ ಕಡೆಯವರು ರಸ್ತೆಯಲ್ಲಿ ಹಲ್ಲೆ ಮಾಡಿದ್ದರು.

ಮನೆಯಲ್ಲಿದ್ದ ಸ್ವಾಮಿ ಎಳೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಪಾಪಣ್ಣ ಕುಟುಂಬಸ್ಥರ ಹಲ್ಲೆಯಿಂದ ಸ್ವಾಮಿ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಅಲ್ಲದೆ ಗ್ರಾಮ ಪಂಚಾಯಿತಿ ಸದಸ್ಯನಾಗಿರುವ ಪಾಪಣ್ಣ ತಮ್ಮ ಶಿವಣ್ಣ, ಪ್ರಭಾವ ಬಳಸಿ ಮರಣೋತ್ತರ ಪರೀಕ್ಷೆಗೆ ಬಿಟ್ಟಿಲ್ಲವೆಂದು ಆರೋಪಿಸಿದ್ದಾರೆ. ಪುತ್ರನನ್ನು ಕಳೆದುಕೊಂಡ ತಾಯಿ ನ್ಯಾಯಕ್ಕಾಗಿ ಅಲೆದಾಡಿದ್ದಾರೆ. ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಅಥವಾ ದಯಾಮರಣ ನೀಡಿ ಎಂದು ಮೈಸೂರು ಡಿಸಿ, ಎಸ್ಪಿಗೆ ನೊಂದ ತಾಯಿ ಚೋಳಮ್ಮ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಏನಿದು ದಯಾಮರಣ? ಆರೋಗ್ಯ ಸಮಸ್ಯೆ ಅಥವಾ ಜೀವನವನ್ನೇ ನಡೆಸಲು ಸಾಧ್ಯವಿಲ್ಲ ಎಂಬ ಸ್ಥಿತಿಗೆ ಮನುಷ್ಯ ತಲುಪಿದಾಗ ಮುಂದೆ ಈ ಸಮಸ್ಯೆಯನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲದ ಸಂದರ್ಭದಲ್ಲಿ ತನಗೆ ಮರಣದ ದಯೆಯನ್ನು ನೀಡಿ ಎಂದು ಅರ್ಜಿ ಮೂಲಕ ಕೇಳಿಕೊಳ್ಳುವುದೇ ದಯಾಮರಣ. ಹಲವು ರಾಷ್ಟ್ರಗಳಲ್ಲಿ ದಯಾಮರಣಕ್ಕೆ ಅನುಮತಿ ಇದೆ.

Published On - 2:51 pm, Tue, 17 May 22

ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್