AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಆನೆ ಬಲರಾಮನಿಗೆ ಗುಂಡೇಟು; ಜಮೀನು ಮಾಲೀಕ ಅರೆಸ್ಟ್, ಸಿಂಗಲ್ ಬ್ಯಾರಲ್ ಬಂದೂಕು ಹಾಗೂ ಕಾರ್ಟರಿಡ್ಜ್​​ ವಶ

ಡಿ.15ರ ಗುರುವಾರ ರಾತ್ರಿ ದಸರಾ ಆನೆ ಬಲರಾಮ ಪಿರಿಯಾಪಟ್ಟಣ ತಾಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಹೋಗಿದ್ದು ಇದರಿಂದ ಸಿಟ್ಟಿಗೆದ್ದ ಜಮೀನಿನ ಮಾಲೀಕ ಸುರೇಶ್ ಆನೆ ಮೇಲೆ ಗುಂಡು ಹಾರಿಸಿದ್ದ.

ದಸರಾ ಆನೆ ಬಲರಾಮನಿಗೆ ಗುಂಡೇಟು; ಜಮೀನು ಮಾಲೀಕ ಅರೆಸ್ಟ್, ಸಿಂಗಲ್ ಬ್ಯಾರಲ್ ಬಂದೂಕು ಹಾಗೂ ಕಾರ್ಟರಿಡ್ಜ್​​ ವಶ
ಬಂಧಿತ ಆರೋಪಿ ಸುರೇಶ್
TV9 Web
| Edited By: ಆಯೇಷಾ ಬಾನು|

Updated on:Dec 17, 2022 | 12:16 PM

Share

ಮೈಸೂರು: ದಸರಾ ಆನೆ ಮೇಲೆ(Mysore Dasara Elephant) ಗುಂಡಿನ ದಾಳಿ ಮಾಡಿದ್ದ ಆರೋಪಿ ಸುರೇಶ್ ಎಂಬಾತನನ್ನು ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿ ಬಂಧಿಸಲಾಗಿದೆ. 14 ಬಾರಿ ಚಿನ್ನದ ಅಂಬಾರಿಯನ್ನು ಹೊತ್ತು ದಸರಾ‌ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಬಲರಾಮ ಆನೆ ಮೇಲೆ ಸುರೇಶ್ ಗುಂಡು ಹಾರಿಸಿದ್ದ. ಸದ್ಯ ಸುರೇಶ್​ನನ್ನು ಬಂಧಿಸಲಾಗಿದೆ.

ಡಿ.15ರ ಗುರುವಾರ ರಾತ್ರಿ ದಸರಾ ಆನೆ ಬಲರಾಮ ಪಿರಿಯಾಪಟ್ಟಣ ತಾಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಹೋಗಿದ್ದು ಇದರಿಂದ ಸಿಟ್ಟಿಗೆದ್ದ ಜಮೀನಿನ ಮಾಲೀಕ ಸುರೇಶ್ ಆನೆ ಮೇಲೆ ಗುಂಡು ಹಾರಿಸಿದ್ದ. ಈ ವೇಳೆ ಆನೆಯ ತೊಡೆ ಬಳಿ ಗುಂಡು ಹೊಕ್ಕಿತ್ತು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಶುವೈದ್ಯಾಧಿಕಾರಿ ಡಾ.ರಮೇಶ್‌ ಆನೆ ಬಲರಾಮನಿಗೆ ಚಿಕಿತ್ಸೆ ನೀಡುತ್ತಿದ್ದು ಚೇತರಿಕೆ ಕಾಣುತ್ತಿದೆ. ಬಲರಾಮನ ಮೇಲೆ ಗುಂಡು ಹಾರಿಸಿದ ಹಿನ್ನೆಲೆ ವನ್ಯ ಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿ ಸುರೇಶ್​ನನ್ನು ಬಂಧಿಸಿ ಸಿಂಗಲ್ ಬ್ಯಾರಲ್ ಬಂದೂಕು ಹಾಗೂ ಕಾರ್ಟರಿಡ್ಜ್​​ ವಶಕ್ಕೆ ಪಡೆಯಲಾಗಿದೆ.

Dasara Elephant

ಆರೋಪಿ ಸುರೇಶ್​ ವಿರುದ್ಧ ಪ್ರಕರಣ ದಾಖಲಿಸಿ ಅರಣ್ಯ ಇಲಾಖೆ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ದಸರಾ ಆನೆ ಬಲರಾಮನನ್ನು 1987 ರಲ್ಲಿ ಕೊಡಗಿನ ಸೋಮವಾರಪೇಟೆ ಬಳಿಯ ಕಟ್ಟೆಪುರ ಅರಣ್ಯದಲ್ಲಿ ಸೆರೆಹಿಡಿಯಲಾಗಿತ್ತು. 64 ವರ್ಷ ಪ್ರಾಯದ ಬಲರಾಮ 8 ಅಡಿ 10 ಇಂಚು ಇದ್ದು, ಸದ್ಯ 4535 ಕೆಜಿ ತೂಕವಿದೆ.

ಇದನ್ನೂ ಓದಿ: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೇಸರಿ ಕಂಡು ಕೆರಳಿದ ಕೋಮು ಗಲಭೆ ಸಂಚಿನ ಸಂಚುಕೋರರು

Published On - 11:53 am, Sat, 17 December 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ