AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಆನೆ ಬಲರಾಮನಿಗೆ ಗುಂಡೇಟು; ಜಮೀನು ಮಾಲೀಕ ಅರೆಸ್ಟ್, ಸಿಂಗಲ್ ಬ್ಯಾರಲ್ ಬಂದೂಕು ಹಾಗೂ ಕಾರ್ಟರಿಡ್ಜ್​​ ವಶ

ಡಿ.15ರ ಗುರುವಾರ ರಾತ್ರಿ ದಸರಾ ಆನೆ ಬಲರಾಮ ಪಿರಿಯಾಪಟ್ಟಣ ತಾಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಹೋಗಿದ್ದು ಇದರಿಂದ ಸಿಟ್ಟಿಗೆದ್ದ ಜಮೀನಿನ ಮಾಲೀಕ ಸುರೇಶ್ ಆನೆ ಮೇಲೆ ಗುಂಡು ಹಾರಿಸಿದ್ದ.

ದಸರಾ ಆನೆ ಬಲರಾಮನಿಗೆ ಗುಂಡೇಟು; ಜಮೀನು ಮಾಲೀಕ ಅರೆಸ್ಟ್, ಸಿಂಗಲ್ ಬ್ಯಾರಲ್ ಬಂದೂಕು ಹಾಗೂ ಕಾರ್ಟರಿಡ್ಜ್​​ ವಶ
ಬಂಧಿತ ಆರೋಪಿ ಸುರೇಶ್
TV9 Web
| Updated By: ಆಯೇಷಾ ಬಾನು|

Updated on:Dec 17, 2022 | 12:16 PM

Share

ಮೈಸೂರು: ದಸರಾ ಆನೆ ಮೇಲೆ(Mysore Dasara Elephant) ಗುಂಡಿನ ದಾಳಿ ಮಾಡಿದ್ದ ಆರೋಪಿ ಸುರೇಶ್ ಎಂಬಾತನನ್ನು ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿ ಬಂಧಿಸಲಾಗಿದೆ. 14 ಬಾರಿ ಚಿನ್ನದ ಅಂಬಾರಿಯನ್ನು ಹೊತ್ತು ದಸರಾ‌ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಬಲರಾಮ ಆನೆ ಮೇಲೆ ಸುರೇಶ್ ಗುಂಡು ಹಾರಿಸಿದ್ದ. ಸದ್ಯ ಸುರೇಶ್​ನನ್ನು ಬಂಧಿಸಲಾಗಿದೆ.

ಡಿ.15ರ ಗುರುವಾರ ರಾತ್ರಿ ದಸರಾ ಆನೆ ಬಲರಾಮ ಪಿರಿಯಾಪಟ್ಟಣ ತಾಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಹೋಗಿದ್ದು ಇದರಿಂದ ಸಿಟ್ಟಿಗೆದ್ದ ಜಮೀನಿನ ಮಾಲೀಕ ಸುರೇಶ್ ಆನೆ ಮೇಲೆ ಗುಂಡು ಹಾರಿಸಿದ್ದ. ಈ ವೇಳೆ ಆನೆಯ ತೊಡೆ ಬಳಿ ಗುಂಡು ಹೊಕ್ಕಿತ್ತು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಶುವೈದ್ಯಾಧಿಕಾರಿ ಡಾ.ರಮೇಶ್‌ ಆನೆ ಬಲರಾಮನಿಗೆ ಚಿಕಿತ್ಸೆ ನೀಡುತ್ತಿದ್ದು ಚೇತರಿಕೆ ಕಾಣುತ್ತಿದೆ. ಬಲರಾಮನ ಮೇಲೆ ಗುಂಡು ಹಾರಿಸಿದ ಹಿನ್ನೆಲೆ ವನ್ಯ ಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿ ಸುರೇಶ್​ನನ್ನು ಬಂಧಿಸಿ ಸಿಂಗಲ್ ಬ್ಯಾರಲ್ ಬಂದೂಕು ಹಾಗೂ ಕಾರ್ಟರಿಡ್ಜ್​​ ವಶಕ್ಕೆ ಪಡೆಯಲಾಗಿದೆ.

Dasara Elephant

ಆರೋಪಿ ಸುರೇಶ್​ ವಿರುದ್ಧ ಪ್ರಕರಣ ದಾಖಲಿಸಿ ಅರಣ್ಯ ಇಲಾಖೆ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ದಸರಾ ಆನೆ ಬಲರಾಮನನ್ನು 1987 ರಲ್ಲಿ ಕೊಡಗಿನ ಸೋಮವಾರಪೇಟೆ ಬಳಿಯ ಕಟ್ಟೆಪುರ ಅರಣ್ಯದಲ್ಲಿ ಸೆರೆಹಿಡಿಯಲಾಗಿತ್ತು. 64 ವರ್ಷ ಪ್ರಾಯದ ಬಲರಾಮ 8 ಅಡಿ 10 ಇಂಚು ಇದ್ದು, ಸದ್ಯ 4535 ಕೆಜಿ ತೂಕವಿದೆ.

ಇದನ್ನೂ ಓದಿ: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೇಸರಿ ಕಂಡು ಕೆರಳಿದ ಕೋಮು ಗಲಭೆ ಸಂಚಿನ ಸಂಚುಕೋರರು

Published On - 11:53 am, Sat, 17 December 22

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ