AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಆನೆ ಬಲರಾಮನಿಗೆ ಗುಂಡೇಟು; ಜಮೀನು ಮಾಲೀಕ ಅರೆಸ್ಟ್, ಸಿಂಗಲ್ ಬ್ಯಾರಲ್ ಬಂದೂಕು ಹಾಗೂ ಕಾರ್ಟರಿಡ್ಜ್​​ ವಶ

ಡಿ.15ರ ಗುರುವಾರ ರಾತ್ರಿ ದಸರಾ ಆನೆ ಬಲರಾಮ ಪಿರಿಯಾಪಟ್ಟಣ ತಾಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಹೋಗಿದ್ದು ಇದರಿಂದ ಸಿಟ್ಟಿಗೆದ್ದ ಜಮೀನಿನ ಮಾಲೀಕ ಸುರೇಶ್ ಆನೆ ಮೇಲೆ ಗುಂಡು ಹಾರಿಸಿದ್ದ.

ದಸರಾ ಆನೆ ಬಲರಾಮನಿಗೆ ಗುಂಡೇಟು; ಜಮೀನು ಮಾಲೀಕ ಅರೆಸ್ಟ್, ಸಿಂಗಲ್ ಬ್ಯಾರಲ್ ಬಂದೂಕು ಹಾಗೂ ಕಾರ್ಟರಿಡ್ಜ್​​ ವಶ
ಬಂಧಿತ ಆರೋಪಿ ಸುರೇಶ್
TV9 Web
| Updated By: ಆಯೇಷಾ ಬಾನು|

Updated on:Dec 17, 2022 | 12:16 PM

Share

ಮೈಸೂರು: ದಸರಾ ಆನೆ ಮೇಲೆ(Mysore Dasara Elephant) ಗುಂಡಿನ ದಾಳಿ ಮಾಡಿದ್ದ ಆರೋಪಿ ಸುರೇಶ್ ಎಂಬಾತನನ್ನು ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿ ಬಂಧಿಸಲಾಗಿದೆ. 14 ಬಾರಿ ಚಿನ್ನದ ಅಂಬಾರಿಯನ್ನು ಹೊತ್ತು ದಸರಾ‌ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಬಲರಾಮ ಆನೆ ಮೇಲೆ ಸುರೇಶ್ ಗುಂಡು ಹಾರಿಸಿದ್ದ. ಸದ್ಯ ಸುರೇಶ್​ನನ್ನು ಬಂಧಿಸಲಾಗಿದೆ.

ಡಿ.15ರ ಗುರುವಾರ ರಾತ್ರಿ ದಸರಾ ಆನೆ ಬಲರಾಮ ಪಿರಿಯಾಪಟ್ಟಣ ತಾಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಹೋಗಿದ್ದು ಇದರಿಂದ ಸಿಟ್ಟಿಗೆದ್ದ ಜಮೀನಿನ ಮಾಲೀಕ ಸುರೇಶ್ ಆನೆ ಮೇಲೆ ಗುಂಡು ಹಾರಿಸಿದ್ದ. ಈ ವೇಳೆ ಆನೆಯ ತೊಡೆ ಬಳಿ ಗುಂಡು ಹೊಕ್ಕಿತ್ತು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಶುವೈದ್ಯಾಧಿಕಾರಿ ಡಾ.ರಮೇಶ್‌ ಆನೆ ಬಲರಾಮನಿಗೆ ಚಿಕಿತ್ಸೆ ನೀಡುತ್ತಿದ್ದು ಚೇತರಿಕೆ ಕಾಣುತ್ತಿದೆ. ಬಲರಾಮನ ಮೇಲೆ ಗುಂಡು ಹಾರಿಸಿದ ಹಿನ್ನೆಲೆ ವನ್ಯ ಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿ ಸುರೇಶ್​ನನ್ನು ಬಂಧಿಸಿ ಸಿಂಗಲ್ ಬ್ಯಾರಲ್ ಬಂದೂಕು ಹಾಗೂ ಕಾರ್ಟರಿಡ್ಜ್​​ ವಶಕ್ಕೆ ಪಡೆಯಲಾಗಿದೆ.

Dasara Elephant

ಆರೋಪಿ ಸುರೇಶ್​ ವಿರುದ್ಧ ಪ್ರಕರಣ ದಾಖಲಿಸಿ ಅರಣ್ಯ ಇಲಾಖೆ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ದಸರಾ ಆನೆ ಬಲರಾಮನನ್ನು 1987 ರಲ್ಲಿ ಕೊಡಗಿನ ಸೋಮವಾರಪೇಟೆ ಬಳಿಯ ಕಟ್ಟೆಪುರ ಅರಣ್ಯದಲ್ಲಿ ಸೆರೆಹಿಡಿಯಲಾಗಿತ್ತು. 64 ವರ್ಷ ಪ್ರಾಯದ ಬಲರಾಮ 8 ಅಡಿ 10 ಇಂಚು ಇದ್ದು, ಸದ್ಯ 4535 ಕೆಜಿ ತೂಕವಿದೆ.

ಇದನ್ನೂ ಓದಿ: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೇಸರಿ ಕಂಡು ಕೆರಳಿದ ಕೋಮು ಗಲಭೆ ಸಂಚಿನ ಸಂಚುಕೋರರು

Published On - 11:53 am, Sat, 17 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ