AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ. ಯಾಲಕ್ಕಿಗೌಡ (65) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.

ಮೈಸೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ರೈತ
ಕಿರಣ್ ಹನುಮಂತ್​ ಮಾದಾರ್
|

Updated on: May 23, 2023 | 7:02 AM

Share

ಮೈಸೂರು: ದೇಶದ ಬೆನ್ನೇಲುಬು ರೈತ(Former), ಆದರೆ ಆತನ ಗೋಳು ಕೇಳುವವರಾರು, ಒಮ್ಮೆ ಬೆಳೆ ಚೆನ್ನಾಗಿ ಬಂದರೆ, ಸರಿಯಾದ ಬೆಲೆ ಸಿಗಲ್ಲ. ಬೆಲೆ ಸರಿಯಾಗಿ ಸಿಕ್ಕರೆ, ಬೆಳೆ ಚೆನ್ನಾಗಿ ಬರಲ್ಲ. ಎಷ್ಟೋ ಸಾಲಸೋಲ ಮಾಡಿ ಬೆಳೆದ ಬೆಳೆ, ಫಲ ಕೊಡದೇ ಇದ್ದಾಗ ರೈತನ ಪಾಡು ಹೇಳತೀರದು. ಈ ಕಾರಣಕ್ಕೆ ಎಷ್ಟೋ ರೈತರು ನೇಣಿಗೆ ಶರಣಾಗಿದ್ದಾರೆ. ಅದರಂತೆ ಇದೀಗ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ. ಯಾಲಕ್ಕಿಗೌಡ (65) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.

3 ಎಕರೆ ಜಮೀನು ಹೊಂದಿದ್ದ ಯಾಲಕ್ಕಿ ಗೌಡ, ತಂಬಾಕು ಬ್ಯಾರನ್ ಹೊಂದಿದ್ದರು. ಹೊಗೆಸೊಪ್ಪು, ಶುಂಠಿ ಬೆಳೆ ಬೆಳೆದಿದ್ದ ರೈತ. ಕೃಷಿ ಚಟುವಟಿಕೆಗಾಗಿ ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿಯ ಐಓಬಿ ಬ್ಯಾಂಕಿನಲ್ಲಿ 12ಲಕ್ಷ ಹಾಗೂ ಗ್ರಾಮದಲ್ಲಿ 6 ಲಕ್ಷ ಕೈ ಸಾಲ ಪಡೆದಿದ್ದರು. ಆದರೆ, ನಾಲ್ಕು ವರ್ಷಗಳಿಂದ ಬೆಳೆ ಕೈ ಕೊಟ್ಟು ನಷ್ಟ ಅನುಭವಿಸಿದ ಕಾರಣ, ಸಾಲ ತೀರಿಸಲಾಗಿಲ್ಲ. ಇದರಿಂದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪ್ರವಾಸಿಗರ ಸಾವಿನ ಸ್ಪಾಟ್ ಆಗುತ್ತಿದೆ ಮುಳ್ಳಯ್ಯನಗಿರಿ ಶಿಖರ; ಸಾಲು ಸಾಲು ಅಪಘಾತ, ಪ್ರಪಾತಕ್ಕೆ ಬೀಳುತ್ತಿವೆ ಪ್ರವಾಸಿಗರ ಕಾರು

ಇನ್ನು ಕರ್ನಾಟಕದಲ್ಲಿ 2019 ರಿಂದ 2022ರ ನಡುವೆ 3,173 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ 2022-23ನೇ ಸಾಲಿನಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಶೇ. 70ರಷ್ಟು ಕಡಿಮೆಯಾಗಿವೆ. ಈ ವರ್ಷದಲ್ಲಿ 188 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, 98 ಮಂದಿಗೆ ಪರಿಹಾರ ಧನ ವಿತರಣೆ ಬಾಕಿ ಉಳಿಸಿಕೊಂಡಿದೆ. ಉತ್ತಮ ಮಳೆಯಿಂದಾಗಿ ಬೆಳೆಗೆ ನೀರಿನ ಕೊರತೆ ಎದುರಾಗಿಲ್ಲ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!