AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮುಂದುವರೆದ ಕಾಡಾನೆಗಳ ಆತಂಕ; ಅರಣ್ಯ ಕಚೇರಿ ಎದುರು ವಿಷದ ಬಾಟಲಿ ಹಿಡಿದು ರೈತರ ಪ್ರತಿಭಟನೆ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಪೆಂಜಳ್ಳಿ ಗ್ರಾಮದ ಬಳಿ ರಸ್ತೆಗಳಲ್ಲಿ 2 ಕಾಡಾನೆಗಳ ಓಡಾಟ ಕಂಡು ಬಂದಿದೆ. ಮೈಸೂರು ಜಿಲ್ಲೆಯ ನಂಜನಗೂಡು ಅರಣ್ಯ ಕಚೇರಿ ಎದುರು ವಿಷದ ಬಾಟಲಿ ಹಿಡಿದು ಮದುವಿನಹಳ್ಳಿ ಗ್ರಾಮದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮೈಸೂರಿನಲ್ಲಿ ಮುಂದುವರೆದ ಕಾಡಾನೆಗಳ ಆತಂಕ; ಅರಣ್ಯ ಕಚೇರಿ ಎದುರು ವಿಷದ ಬಾಟಲಿ ಹಿಡಿದು ರೈತರ ಪ್ರತಿಭಟನೆ
ಮೈಸೂರಿನಲ್ಲಿ ಮುಂದುವರೆದ ಕಾಡಾನೆಗಳ ಆತಂಕ
TV9 Web
| Edited By: |

Updated on: Apr 26, 2022 | 9:34 AM

Share

ಮೈಸೂರು: ಜಿಲ್ಲೆಯಲ್ಲಿ ಕಾಡಾನೆಗಳ ಆತಂಕ ಮುಂದುವರಿದಿದೆ, ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಗ್ರಾಮದ ಬಳಿ ರಸ್ತೆಗಳಲ್ಲಿ ಓಡಾಡುತ್ತಿವೆ. ಹೀಗಾಗಿ ಕಾಡಾನೆ ಹಾವಳಿಯಿಂದ ಬೇಸತ್ತು ವಿಷದ ಬಾಟಲಿ ಹಿಡಿದು ರೈತರು ಧರಣಿಗೆ ಮುಂದಾಗಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಅರಣ್ಯ ಕಚೇರಿ ಎದುರು ವಿಷದ ಬಾಟಲಿ ಹಿಡಿದು ಮದುವಿನಹಳ್ಳಿ ಗ್ರಾಮದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಡಂಚಿನ ಗ್ರಾಮಗಳಲ್ಲಿ ಪದೇಪದೆ ಆನೆಗಳ ದಾಳಿಯಿಂದ ಬೆಳೆ ನಾಶವಾಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕಳೆದ ಮೂರು ದಿನಗಳಿಂದ ಕಾಡಾನೆ ಹಾವಳಿ ಹೆಚ್ಚಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜವಾಗ್ತಿಲ್ಲ. ಕಾಡಾನೆ ದಾಳಿ ತಡೆಯಲು ಹಾಕಿದ್ದ ಕಬ್ಬಿಣದ ತಡೆಗೋಡೆ ಮುರಿದಿದೆ. ಹಾಗಾಗಿ ಆನೆಗಳು ಸುಲಭವಾಗಿ ರೈತರ ಜಮೀನುಗಳಿಗೆ ನುಗ್ಗುತ್ತಿವೆ. ಕಾಡಾನೆ ಹಾವಳಿ ನಿಯಂತ್ರಿಸದ ಅರಣ್ಯ ಸಿಬ್ಬಂದಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಕಾಡಾನೆ ಹಾವಳಿ ನಿಯಂತ್ರಿಸುವಂತೆ ಆಗ್ರಹಿಸಿ ವಿಷದ ಬಾಟಲಿ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಪೆಂಜಳ್ಳಿ ಗ್ರಾಮದ ಬಳಿ ರಸ್ತೆಗಳಲ್ಲಿ 2 ಕಾಡಾನೆಗಳ ಓಡಾಟ ಕಂಡು ಬಂದಿದೆ. ಕಾಡಾನೆ ನೋಡಲು ನೂರಾರು ಜನ ಜಮಾಯಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೆಗಳನ್ನು ಮರಳಿ ಕಾಡಿಗೆ ಓಡಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಆದ್ರೆ ಪ್ರತಿ ಬಾರಿ ಕಾಡಿನಿಂದ ನಾಡಿಗೆ ಬರುವ ಆನೆಗಳಿಂದ ಸಮಸ್ಯೆ ಎದುರಾಗಿದ್ದು ಆನೆಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ಕಾಡಂಚಿನ ಗ್ರಾಮಗಳ ನಿವಾಸಿಗಳು ಆಗ್ರಹಿಸಿದ್ದಾರೆ.

mys elephant

ಆನೆಗಳ ದಾಳಿಯಿಂದ ರೈತರು ಕಂಗಾಲು

ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಆತಂಕ: ಅಮೆರಿಕದ USCIRF ಸಂಸ್ಥೆಯಿಂದ ಭಾರತದ ಬಗ್ಗೆ ಸತತ 3ನೇ ಬಾರಿಗೆ ಆಕ್ಷೇಪ

ಋತುವಿಲಾಸಿನಿ : ಸಾವು ಆವರಿಸುವ ಹೊತ್ತಿನಲ್ಲಿ ನೀನು ಹೊರಗಿರಬೇಕು ಅಂತ ಬಯಸುವವಳು ನಾನು

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು