AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮುಂದುವರೆದ ಕಾಡಾನೆಗಳ ಆತಂಕ; ಅರಣ್ಯ ಕಚೇರಿ ಎದುರು ವಿಷದ ಬಾಟಲಿ ಹಿಡಿದು ರೈತರ ಪ್ರತಿಭಟನೆ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಪೆಂಜಳ್ಳಿ ಗ್ರಾಮದ ಬಳಿ ರಸ್ತೆಗಳಲ್ಲಿ 2 ಕಾಡಾನೆಗಳ ಓಡಾಟ ಕಂಡು ಬಂದಿದೆ. ಮೈಸೂರು ಜಿಲ್ಲೆಯ ನಂಜನಗೂಡು ಅರಣ್ಯ ಕಚೇರಿ ಎದುರು ವಿಷದ ಬಾಟಲಿ ಹಿಡಿದು ಮದುವಿನಹಳ್ಳಿ ಗ್ರಾಮದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮೈಸೂರಿನಲ್ಲಿ ಮುಂದುವರೆದ ಕಾಡಾನೆಗಳ ಆತಂಕ; ಅರಣ್ಯ ಕಚೇರಿ ಎದುರು ವಿಷದ ಬಾಟಲಿ ಹಿಡಿದು ರೈತರ ಪ್ರತಿಭಟನೆ
ಮೈಸೂರಿನಲ್ಲಿ ಮುಂದುವರೆದ ಕಾಡಾನೆಗಳ ಆತಂಕ
TV9 Web
| Edited By: |

Updated on: Apr 26, 2022 | 9:34 AM

Share

ಮೈಸೂರು: ಜಿಲ್ಲೆಯಲ್ಲಿ ಕಾಡಾನೆಗಳ ಆತಂಕ ಮುಂದುವರಿದಿದೆ, ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಗ್ರಾಮದ ಬಳಿ ರಸ್ತೆಗಳಲ್ಲಿ ಓಡಾಡುತ್ತಿವೆ. ಹೀಗಾಗಿ ಕಾಡಾನೆ ಹಾವಳಿಯಿಂದ ಬೇಸತ್ತು ವಿಷದ ಬಾಟಲಿ ಹಿಡಿದು ರೈತರು ಧರಣಿಗೆ ಮುಂದಾಗಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಅರಣ್ಯ ಕಚೇರಿ ಎದುರು ವಿಷದ ಬಾಟಲಿ ಹಿಡಿದು ಮದುವಿನಹಳ್ಳಿ ಗ್ರಾಮದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಡಂಚಿನ ಗ್ರಾಮಗಳಲ್ಲಿ ಪದೇಪದೆ ಆನೆಗಳ ದಾಳಿಯಿಂದ ಬೆಳೆ ನಾಶವಾಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕಳೆದ ಮೂರು ದಿನಗಳಿಂದ ಕಾಡಾನೆ ಹಾವಳಿ ಹೆಚ್ಚಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜವಾಗ್ತಿಲ್ಲ. ಕಾಡಾನೆ ದಾಳಿ ತಡೆಯಲು ಹಾಕಿದ್ದ ಕಬ್ಬಿಣದ ತಡೆಗೋಡೆ ಮುರಿದಿದೆ. ಹಾಗಾಗಿ ಆನೆಗಳು ಸುಲಭವಾಗಿ ರೈತರ ಜಮೀನುಗಳಿಗೆ ನುಗ್ಗುತ್ತಿವೆ. ಕಾಡಾನೆ ಹಾವಳಿ ನಿಯಂತ್ರಿಸದ ಅರಣ್ಯ ಸಿಬ್ಬಂದಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಕಾಡಾನೆ ಹಾವಳಿ ನಿಯಂತ್ರಿಸುವಂತೆ ಆಗ್ರಹಿಸಿ ವಿಷದ ಬಾಟಲಿ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಪೆಂಜಳ್ಳಿ ಗ್ರಾಮದ ಬಳಿ ರಸ್ತೆಗಳಲ್ಲಿ 2 ಕಾಡಾನೆಗಳ ಓಡಾಟ ಕಂಡು ಬಂದಿದೆ. ಕಾಡಾನೆ ನೋಡಲು ನೂರಾರು ಜನ ಜಮಾಯಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೆಗಳನ್ನು ಮರಳಿ ಕಾಡಿಗೆ ಓಡಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಆದ್ರೆ ಪ್ರತಿ ಬಾರಿ ಕಾಡಿನಿಂದ ನಾಡಿಗೆ ಬರುವ ಆನೆಗಳಿಂದ ಸಮಸ್ಯೆ ಎದುರಾಗಿದ್ದು ಆನೆಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ಕಾಡಂಚಿನ ಗ್ರಾಮಗಳ ನಿವಾಸಿಗಳು ಆಗ್ರಹಿಸಿದ್ದಾರೆ.

mys elephant

ಆನೆಗಳ ದಾಳಿಯಿಂದ ರೈತರು ಕಂಗಾಲು

ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಆತಂಕ: ಅಮೆರಿಕದ USCIRF ಸಂಸ್ಥೆಯಿಂದ ಭಾರತದ ಬಗ್ಗೆ ಸತತ 3ನೇ ಬಾರಿಗೆ ಆಕ್ಷೇಪ

ಋತುವಿಲಾಸಿನಿ : ಸಾವು ಆವರಿಸುವ ಹೊತ್ತಿನಲ್ಲಿ ನೀನು ಹೊರಗಿರಬೇಕು ಅಂತ ಬಯಸುವವಳು ನಾನು

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?