AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ, ಕುರುಬೂರು ಶಾಂತಕುಮಾರ್ ಸೇರಿ 50ಕ್ಕೂ ಹೆಚ್ಚು ರೈತರು ಪೊಲೀಸ್ ವಶಕ್ಕೆ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಇಂದು ಬೃಹತ್ ಧರಣಿ ನಡೆಯುತ್ತಿದೆ. ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘ ಯತ್ನಿಸಿದ್ದು 50ಕ್ಕೂ ಹೆಚ್ಚು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ, ಕುರುಬೂರು ಶಾಂತಕುಮಾರ್ ಸೇರಿ 50ಕ್ಕೂ ಹೆಚ್ಚು ರೈತರು ಪೊಲೀಸ್ ವಶಕ್ಕೆ
ರೈತರು ವಶಕ್ಕೆ
ರಾಮ್​, ಮೈಸೂರು
| Edited By: ಆಯೇಷಾ ಬಾನು|

Updated on:Nov 09, 2023 | 1:15 PM

Share

ಮೈಸೂರು, ನ.09: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ (siddaramaiah) ನಿವಾಸದ ಬಳಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ವೇಳೆ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರು ಹಸಿರು ಶಾಲು ಹಿಡಿದು ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ (Kuruburu Shanthakumar) ಸೇರಿ 50ಕ್ಕೂ ಹೆಚ್ಚು ರೈತರನ್ನು ವಶಕ್ಕೆ ಪಡೆಯಲಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ದಮನ ಎಂದು ರೈತರು ಪೊಲೀಸರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

ರಸ್ತೆಯಲ್ಲಿ ಮಲಗಿದ ರೈತರು

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆ ರೈತ ಮುಖಂಡ ಕುರುಬೂರು ಶಾಂತಕುಮಾರ್, ಮಹಿಳೆಯರು ಸೇರಿ ರೈತರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರ ಕ್ರಮಕ್ಕೆ ಕುರುಬೂರು ಶಾಂತಕುಮಾರ್ ಹಾಗೂ ರೈತರು ರಸ್ತೆಯಲ್ಲಿ ಮಲಗಿ ಆಕ್ರೋಶ ಹೊರ ಹಾಕಿದರು. ಈ ವೇಳೆ ಬಲವಂತವಾಗಿ ರೈತರನ್ನು ಪೊಲೀಸರು ವಶಕ್ಕೆ ಪಡೆದರು.

ಇದನ್ನೂ ಓದಿ: ಚುನಾವಣಾ ರಾಜಕೀಯ ನಿವೃತ್ತಿಗೆ ಹೈಕಮಾಂಡ್​ ಸೂಚನೆ ಕೊಟ್ಟಿದ್ಯಾ? ಈ ಬಗ್ಗೆ ಸದಾನಂದಗೌಡ, ಬಿಎಸ್​ವೈ ಹೇಳಿದ್ದಿಷ್ಟು

ಸಿಎಂ ನಿವಾಸದ ಬಳಿ ಬಿಗಿ ಭದ್ರತೆ

ಸಿದ್ದರಾಮಯ್ಯ ನಿವಾಸದ ಬಳಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ನಿವಾಸಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲೂ ಮುನ್ನೆಚ್ಚರಿಕೆಯಾಗಿ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಖಾಕಿ ಕಣ್ಗಾವಲು ನಿಯೋಜಿಸಲಾಗಿದೆ.

ಅಂತ್ಯ ಸಂಸ್ಕಾರಕ್ಕೆ ಹೊರಟವರಿಗೆ ತಟ್ಟಿದ ಬಿಸಿ

ಸಿಎಂ ಸಿದ್ದರಾಮಯ್ಯ ಮನೆಗೆ ರೈತರ ಮುತ್ತಿಗೆ ಯತ್ನ ಹಿನ್ನೆಲೆ ಅಂತ್ಯ ಸಂಸ್ಕಾರಕ್ಕೂ ಪ್ರತಿಭಟನೆಯ ಬಿಸಿ ತಟ್ಟಿದೆ. ಸಿದ್ದರಾಮಯ್ಯ ನಿವಾಸದ ಮಾರ್ಗದಲ್ಲಿ ಅಂತ್ಯ ಸಂಸ್ಕಾರಕ್ಕೆ ಜನರು ಹೊರಟಿದ್ದರು. ಇದೇ ವೇಳೆ ಸಿಎಂ ಮನೆ ಮುತ್ತಿಗೆಗೆ ರೈತರು ಕೂಡ ಆಗಮಿಸಿದರು. ಆಗ ರೈತರನ್ನು ತಡೆಯಲು ಪೊಲೀಸರು ಕೂಡ ಧಾವಿಸಿ ಬಂದಿದ್ದಾರೆ. ಈ ವೇಳೆ ತೆರೆದ ವಾಹನದಲ್ಲಿ ಶವಸಂಸ್ಕಾರಕ್ಕೆ ಹೊರಟಿದ್ದ 50ಕ್ಕೂ ಹೆಚ್ಚು ಜನರಿಗೆ ಸಮಸ್ಯೆಯಾಯಿತು. ಪೊಲೀಸರು ಶವಸಂಸ್ಕಾರಕ್ಕೆ ಹೊರಟಿದ್ದವರನ್ನೂ ತಡೆದು ನಿಲ್ಲಿಸಿದ್ರು. ಬಳಿಕ ವಿಚಾರಿಸಿ ವಾಪಸ್ಸು ಕಳುಹಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:14 pm, Thu, 9 November 23

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?