AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಸಾಕಲು ಆಗುತ್ತಿಲ್ಲವೆಂದು ಒಂದೂವರೆ ವರ್ಷದ ಮಗುವನ್ನು ಕೊಂದ ತಂದೆ!

ಸಾಕಲು ಆಗುತ್ತಿಲ್ಲವೆಂದು ತನ್ನ ಒಂದೂವರೆ ವರ್ಷದ ಗಂಡು ಮಗುವನ್ನು ತಂದೆಯೇ ಕೆರೆಗೆ ಎಸೆದು ಹತ್ಯೆ ಮಾಡಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪಿರಿಯಾಪಟ್ಟಣ ಠಾಣೆ ಪೊಲೀಸರು ಆರೋಪಿ ಗಣೇಶ್​ನನ್ನು ಬಂಧಿಸಿದ್ದಾರೆ.

ಮೈಸೂರು: ಸಾಕಲು ಆಗುತ್ತಿಲ್ಲವೆಂದು ಒಂದೂವರೆ ವರ್ಷದ ಮಗುವನ್ನು ಕೊಂದ ತಂದೆ!
ತನ್ನ ಒಂದೂವರೆ ವರ್ಷದ ಮಗುವನ್ನು ಕೊಂದ ಆರೋಪಿ ಗಣೇಶ್ (ಎಡ ಚಿತ್ರ) ಮತ್ತು ಮಗುವಿನ ಸಾಂದರ್ಭಿಕ ಚಿತ್ರ
ರಾಮ್​, ಮೈಸೂರು
| Edited By: Rakesh Nayak Manchi|

Updated on: Oct 19, 2023 | 8:08 AM

Share

ಮೈಸೂರು, ಅ.10: ಈತನಿಗೆ ಎರಡು ಹೆಣ್ಣು ಮಕ್ಕಳಿದ್ದಾರೆ. ಪತ್ನಿ ಗಂಡು ಮಗುವಿಗೆ ಜನ್ಮ ನೀಡುವ ವೇಳೆ ಸಾವನ್ನಪ್ಪಿದ್ದಾರೆ. ಆದರೆ, ಈ ಸಣ್ಣ ಮಗುವನ್ನು ಸಾಕಲು ಆಗುತ್ತಿಲ್ಲವೆಂದು ಇಬ್ಬರು ಹೆಣ್ಣು ಮಕ್ಕಳನ್ನು ಅಜ್ಜಿ ತಾತನ ಜೊತೆ ಬಿಟ್ಟು ಒಂದೂವರೆ ವರ್ಷದ ಮಗುವನ್ನು ಕೊಂಡುಹೋಗಿ ಕೆರೆಗೆ ಎಸೆದು ಕೊಲೆ (Murder) ಮಾಡಿದ್ದಾನೆ. ಈ ಘಟನೆ ಮೈಸೂರು (Mysuru) ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡಿನಲ್ಲಿ ನಡೆದಿದೆ.

2014 ರಲ್ಲಿ ಗಣೇಶ್ (30) ಬೆಂಗಳೂರಿನ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ನಾರಾಯಣ ಸ್ವಾಮಿ ಎಂಬುವವರ ಮಗಳು ಲಕ್ಷ್ಮೀ ಎಂಬುವವರನ್ನು ಮದುವೆಯಾಗಿದ್ದರು. ದೇವನಹಳ್ಳಿಯಲ್ಲಿಯೆ ವಾಸವಿದ್ದ ದಂಪತಿಗೆ ಹಾರಿಕಾ ಮತ್ತು ದೀಕ್ಷಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಒಂದು ವರ್ಷದ ಹಿಂದೆ ಮೂರನೇ ಮಗುವಿಗೆ ಜನ್ಮ ನೀಡುವ ವೇಳೆ ಲಕ್ಷ್ಮೀ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: ಮಧ್ಯಪ್ರದೇಶ: ಮಗು ಅಳ್ತಿದೆ ನಿದ್ದೆ ಬರುತ್ತಿಲ್ಲ ಎಂದು ಅಣ್ಣನ ಮಗಳನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಮಹಿಳೆ

ಹೀಗಾಗಿ ಹೆಣ್ಣು ಮಕ್ಕಳನ್ನು ಅಜ್ಜಿ ತಾತನ ಜೊತೆ ಬಿಟ್ಟು ಒಂದೂವರೆ ವರ್ಷದ ಕುಮಾರ್ ಎಂಬ ಗಂಡು ಮಗುವಿನಿಂದಿಗೆ ಪಿರಿಯಾಪಟ್ಟಣ ತಾಲೂಕಿನ ಮಾಕೋಡಿಗೆ ವಾಪಸ್ ಆಗಿದ್ದಾನೆ. ಇಲ್ಲಿ ತನ್ನ ತಾಯಿಯೊಂದಿಗೆ ಮಗುವನ್ನು ಸಾಕುತ್ತಿದ್ದನು. ಹಲವು ಬಾರಿ ಮಗುವನ್ನು ನಮಗೆ ವಾಪಸ್ಸು ನೀಡಿ, ನಾವೇ ಸಾಕುವುದಾಗಿ ಅತ್ತೆ ತಿಳಿಸಿದ್ದರು.

ಆದರೆ, ಅತ್ತೆಗೆ ಮಗುವನ್ನು ಒಪ್ಪಿಸದೆ ಅದನ್ನು ಸಾಕಲು ಆಗುತ್ತಿಲ್ಲವೆಂದು ಕೆರೆಗೆ ಎಸೆದು ಕೊಂದೇ ಬಿಟ್ಟಿದ್ದಾನೆ. ಕೊಲೆ ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಠಾಣಾ ಪೊಲೀಸರು, ಆರೋಪಿ ಗಣೇಶ್​ನನ್ನು ಬಂದಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು